Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧಾರವಾಡದಲ್ಲಿ ‘ಸುನಂದಾ ಬೆಳಗಾಂವಕರ ವ್ಯಕ್ತಿತ್ವ ಸಾಹಿತ್ಯ’ ಕೃತಿ ಲೋಕಾರ್ಪಣೆ
    Book Release

    ಧಾರವಾಡದಲ್ಲಿ ‘ಸುನಂದಾ ಬೆಳಗಾಂವಕರ ವ್ಯಕ್ತಿತ್ವ ಸಾಹಿತ್ಯ’ ಕೃತಿ ಲೋಕಾರ್ಪಣೆ

    January 1, 2025Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಯುವ ಸಾಹಿತಿ ಡಾ. ಸುಭಾಷ್ ಪಟ್ಟಾಜೆಯವರು ಬರೆದ ‘ಸುನಂದಾ ಬೆಳಗಾಂವಕರ ವ್ಯಕ್ತಿತ್ವ ಸಾಹಿತ್ಯ’ ಎಂಬ ಪುಸ್ತಕವನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ 29 ಡಿಸೆಂಬರ್ 2024ರಂದು ಲೋಕಾರ್ಪಣೆಗೊಂಡಿತು.

    ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆಗೊಳಿಸಿದ ಖ್ಯಾತ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ಮಾತನಾಡಿ “ಸುನಂದಾ ಬೆಳಗಾಂವಕರ್ ಅವರ ಕೃತಿಗಳಲ್ಲಿ ಧಾರವಾಡದ ಮಣ್ಣಿನ ಗಂಧವಿದೆ. ಅವರ ಬರಹಗಳನ್ನು ಪರಿಸರ ವಿಮರ್ಶೆಯ ದೃಷ್ಟಿಕೋನದಿಂದ ಅಧ್ಯಯನ ಮಾಡಲು ಅವಕಾಶವಿದೆ. ಅವರು ತಮ್ಮ ಬರಹಗಳಲ್ಲಿ ಆಧುನಿಕ ಜಗತ್ತಿನ ಸೂಕ್ಷ್ಮ ವಿಚಾರಗಳನ್ನು ಮಂಡಿಸಿದ್ದಾರೆ. ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆಯ ಯೋಜನೆಯ ಅಂಗವಾಗಿ ಮೂಡಿ ಬಂದಿರುವ ಈ ಕೃತಿಯು ಸುನಂದಾ ಬೆಳಗಾಂವಕರರ ಕುರಿತು ಪ್ರಕಟವಾದ ಮೊದಲ ಪುಸ್ತಕವಾಗಿದೆ. ಈ ಪುಸ್ತಕವನ್ನು ಬರೆಯುವಲ್ಲಿ ಪಟ್ಟಾಜೆಯವರು ತಲಸ್ಪರ್ಶಿ ಅಧ್ಯಯನವನ್ನು ಮಾಡಿದ್ದಾರೆ. ಮೂಲತಃ ಕಾಸರಗೋಡಿನವರಾಗಿದ್ದರೂ ಸುನಂದಾ ಅವರ ಬರಹಗಳಲ್ಲಿ ಕಂಡು ಬರುವ ಧಾರವಾಡದ ಆಡುಮಾತಿನ ಲಯವನ್ನು ಗ್ರಹಿಸಿಕೊಂಡು ಆಳವಾಗಿ ವಿಶ್ಲೇಷಿಸಿದ್ದಾರೆ. ಮೌಲಿಕ ವಿಚಾರಗಳನ್ನು ಒಳಗೊಂಡಿರುವ ಈ ಪುಸ್ತಕವು ಸುನಂದಾ ಬೆಳಗಾಂವಕಾರರ ಸಮಗ್ರ ಕೃತಿಗಳನ್ನು ಓದಲು ಪ್ರೇರಣೆಯನ್ನು ನೀಡುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು.

    “ಸುನಂದಾ ಬೆಳಗಾಂವಕರರ ಕೃತಿಗಳು ಕನ್ನಡ ಸಾಹಿತ್ಯ ಪರಂಪರೆಯ ಸತ್ವವನ್ನು ಹೀರಿಕೊಂಡು ರೂಪು ತಾಳಿವೆ. ಅವರು ಸಾಹಿತಿಯಾಗಿ ಎಷ್ಟು ದೊಡ್ಡವರೋ ವ್ಯಕ್ತಿಯಾಗಿಯೂ ಅಷ್ಟೇ ದೊಡ್ಡವರು. ಕನ್ನಡ ಸಾಹಿತ್ಯದಲ್ಲಿ ಅವರಿಗೆ ಮಹತ್ವದ ಸ್ಥಾನವಿದೆ. ಈ ಸಂಗತಿಗಳನ್ನು ಈ ಪುಸ್ತಕದಲ್ಲಿ ಗುರುತಿಸಿ ಗೌರವಿಸುವ ನಮ್ರ ಪ್ರಯತ್ನವನ್ನು ಮಾಡಿದ್ದೇನೆ” ಎಂದು ಕೃತಿಯ ಲೇಖಕ ಡಾ. ಸುಭಾಷ್ ಪಟ್ಟಾಜೆಯವರು ಹೇಳಿದರು.

    ಯುವ ವಿಮರ್ಶಕ ವಿಕಾಸ ಹೊಸಮನಿಯವರು ಪುಸ್ತಕವನ್ನು ಅವಲೋಕಿಸಿದರು. ಹಿರಿಯ ಲೇಖಕ ಶ್ರೀನಿವಾಸ ವಾಡಪ್ಪಿಯವರು ಸುನಂದಾ ಬೆಳಗಾಂವಕರರ ಜೊತೆಗಿನ ಒಡನಾಟಗಳನ್ನು ಸ್ಮರಿಸಿದರು. ಖ್ಯಾತ ಸಾಹಿತಿ ಮಾಲತಿ ಪಟ್ಟಣಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ವೈಜಯಂತಿ ಸೂರ್ಯನಾರಾಯಣ, ಶ್ರೀಮತಿ ಸೀಮಾ ಕುಲಕರ್ಣಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸುಭಾಷ್ ಪಟ್ಟಾಜೆ ಮತ್ತು ವಿಕಾಸ ಹೊಸಮನಿಯವರಿಗೆ ಶಾಲು ಹೊದೆಸಿ ಸನ್ಮಾನಿಸಲಾಯಿತು. ಡಾ. ಶೈಲಜಾ ಅಮರಶೆಟ್ಟಿ ಸ್ವಾಗತಿಸಿ, ಸುಜಾತ ಹಡಗಲಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನಲ್ಲಿ ‘ತ್ರಿದಶ ನಾಟ್ಯ ಕಲೋತ್ಸವ’ | ಜನವರಿ 05
    Next Article ಮಡಿಕೇರಿಯಲ್ಲಿ ಸಹಸ್ರಕಂಠದಲ್ಲಿ ನಾಡಗೀತೆಯನ್ನು ಹಾಡುವ ಕಾರ್ಯಕ್ರಮ | ಜನವರಿ 04
    roovari

    Add Comment Cancel Reply


    Related Posts

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’

    June 14, 2025

    ಕರುನಾಡಿನ ಹದಿನೈದು ವೀರ ವನಿತೆಯರ ಬಗ್ಗೆ ಕವನ ಆಹ್ವಾನ | ಕೊನೆಯ ದಿನಾಂಕ ಜುಲೈ 15

    June 14, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.