ಮೂಡುಬಿದಿರೆ: ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನ ನೀಡುವ ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದ್ದು, ನಾಲ್ವರು ಲೇಖಕರಿಗೆ ಪುರಸ್ಕಾರ ನೀಡಲಾಗುವುದು. ಪುರಸ್ಕಾರವು ಪ್ರಶಸ್ತಿ ಪತ್ರ ಮತ್ತು ರೂಪಾಯಿ 10 ಸಾವಿರ ನಗದು ಬಹುಮಾನ ಒಳಗೊಂಡಿದೆ. 2020ರಿಂದ 2024ರೊಳಗಿನ ಅವಧಿಯಲ್ಲಿ ಪ್ರಥಮ ಮುದ್ರಿತ ಕೃತಿಗಳನ್ನು ಪರಿಗಣಿಸಲಾಗುವುದು. ಆಸಕ್ತರು ಕೃತಿಯ ಮೂರು ಪ್ರತಿಗಳನ್ನು 20 ಏಪ್ರಿಲ್ 2025ರ ಒಳಗಾಗಿ ಶಿವರಾಮ ಕಾರಂತ ಪ್ರತಿಷ್ಠಾನ, ಕನ್ನಡ ಭವನ, ಮೂಡಬಿದಿರೆ -574227 ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ :9743533105 ಸಂಪರ್ಕಿಸಬಹುದು ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಪಿಂಗಾರ ಸಾಹಿತ್ಯ ಬಳಗದಿಂದ ‘ಸಾಹಿತ್ಯ ಸಂಭ್ರಮ ಮತ್ತು ಕವಿಗೋಷ್ಠಿ’
Next Article ಕೆ. ಸುರೇಂದ್ರ ಶೆಣೈಯವರಿಗೆ ‘ಯಕ್ಷಗಾನ ಕಲಾರಾಧಕ ಪ್ರಶಸ್ತಿ’
