Subscribe to Updates

    Get the latest creative news from FooBar about art, design and business.

    What's Hot

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025

    ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ

    June 17, 2025

    ಕವನ | ಅನುಬಂಧ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದಲ್ಲಿ ವ್ಯಂಗ್ಯಚಿತ್ರ ರಚನಾ ಕಾರ್ಯಾಗಾರ
    Drawing

    ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದಲ್ಲಿ ವ್ಯಂಗ್ಯಚಿತ್ರ ರಚನಾ ಕಾರ್ಯಾಗಾರ

    November 11, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬದಿಯಡ್ಕ: ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದಲ್ಲಿ ವ್ಯಂಗ್ಯಚಿತ್ರ ರಚನಾ ಕಾರ್ಯಾಗಾರವು ದಿನಾಂಕ 09 ನವೆಂಬರ್ 2024ರ ಶನಿವಾರದಂದು ನಡೆಯಿತು.
    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಖ್ಯಾತ ವ್ಯಂಗ್ಯಚಿತ್ರಗಾರ ಹಾಗೂ ಪತ್ರಕರ್ತ ವಿರಾಜ್ ಅಡೂರು ಮಾತನಾಡಿ “ವ್ಯಂಗ್ಯಚಿತ್ರಗಳು ಸಾಮಾಜಿಕ ನ್ಯೂನತೆಗಳನ್ನು ಹಾಸ್ಯಲೇಪನದ ಮೂಲಕ ತೋರಿಸಿ, ಆದರ ಗಂಭೀರತೆಯನ್ನು ಜನತೆಗೆ, ಇಲಾಖೆಗಳಿಗೆ ಮನ ಮುಟ್ಟುವಂತೆ ನೀಡುತ್ತದೆ. ವ್ಯಂಗ್ಯಚಿತ್ರ ಕಲೆ ಕರಗತವಾಗಬೇಕಾದರೆ, ಭಾವಪೂರ್ಣವಾದ ಚಿತ್ರ ರಚನೆಯ ಜತೆಗೆ ಹಾಸ್ಯ ಪ್ರಜ್ಞೆಯೂ ಬೇಕು. ವಿಚಾರಗಳ ಮಂಡನೆಯೂ ಶಕ್ತಿಯುತವಾಗಿರಬೇಕು.” ಎಂದು ಹೇಳಿದರು.


    ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಭಾರತೀ ವಿದ್ಯಾಪೀಠದ ಮುಖ್ಯ ಶಿಕ್ಷಕ ಪಿ. ಸತ್ಯನಾರಾಯಣ ಶರ್ಮ ಮಾತನಾಡಿ “ಕಾರ್ಟೂನ್ ಚಿತ್ರಗಳ ಪ್ರತಿಯೊಂದು ಗೆರೆಗಳೂ ಕೂಡಾ ಅತ್ಯಂತ ಸೂಕ್ಷ್ಮ. ಗೆರೆಗಳ ಮೂಲಕ ವಿಚಾರಗಳ ಅನಾವರಣ ಅದ್ಭುತ.” ಎಂದು ಹೇಳಿದರು.
    ಶಿಕ್ಷಕಿ ಮಮತಾ ಸಾವಿತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ವಿದ್ಯಾರ್ಥಿನಿ ಪ್ರಜ್ಞಾ ವಂದಿಸಿದರು. ಶಿಬಿರದಲ್ಲಿ ಭಾಗವಹಿಸಿದ್ದ ಅವ್ಯಂಗ್, ವಂಶಿ ಹಾಗೂ ತಸ್ವಿ ತಮ್ಮ ಅನಿಸಿಕೆ ಹಂಚಿಕೊಂಡರು . ಶಿಬಿರದಲ್ಲಿ 30ಕ್ಕೂ ಹೆಚ್ಚಿನ ಮಕ್ಕಳು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ “ಕನಸುಗಳು-2024 ” ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳು | ನವೆಂಬರ್ 15 ಮತ್ತು 16
    Next Article ಸಾಹಿತಿ ಶುಭಾ ವಿಷ್ಣು ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
    roovari

    Add Comment Cancel Reply


    Related Posts

    ರಾಜೇಶ್ವರಿ ಕುಡುಪು ಇವರ ‘ಕಲಾಸಂಪದ’ ಪುಸ್ತಕ ಬಿಡುಗಡೆ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಚಿತ್ರಕಲೆ ಮತ್ತು ರೇಖಾಚಿತ್ರಗಳ ಪ್ರದರ್ಶನ | ಮೇ 04ರಿಂದ 14

    May 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications