Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮನಸೂರೆಗೊಂಡ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ
    Bharathanatya

    ಮನಸೂರೆಗೊಂಡ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ

    March 11, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ ಮತ್ತು ನಾಗರಿಕ ಸಲಹಾ ಸಮಿತಿ ಸುರತ್ಕಲ್ ಆಶ್ರಯದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸುರತ್ಕಲ್ ನ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ದಿನಾಂಕ 07 ಮಾರ್ಚ್ 2026ರಂದು ಹಮ್ಮಿಕೊಂಡಿದ್ದ ಎನ್.ಐ.ಟಿ.ಕೆ.ಯ ವಿದ್ಯಾರ್ಥಿಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ಭರತನಾಟ್ಯ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಅಶಯ ನುಡಿಗಳನ್ನಾಡಿದ ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ “ಯುವ ಜನತೆ ಶಾಸ್ತ್ರೀಯ ಸಂಗೀತ ಮತ್ತು ನೃತ್ಯಗಳ ಕುರಿತು ವಿಶೇಷ ಆಸಕ್ತಿ ತೋರಿಸುತ್ತಿರುವುದು ಶ್ಲಾಘನೀಯ. ಎನ್.ಐ.ಟಿ.ಕೆ.ಯಲ್ಲಿ ನಡೆದ ಸ್ಪಿಕ್ ಮೆಕೆಯ ವಿರಾಸಾತ್ ಕಾರ್ಯಕ್ರಮವು ಆಸಕ್ತ ಸಹೃದಯರ ಒಳಗೊಳ್ಳುವಿಕೆಯೊಂದಿಗೆ ಯಶಸ್ವಿಯಾಗಿ ನಡೆದಿದೆ. ಶಾಸ್ತ್ರೀಯ ಸಂಗೀತ ಹಾಗೂ ನೃತ್ಯಗಳ ಕಮ್ಮಟಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಆಸಕ್ತಿಯಿಂದ ಕಲಿಕೆಯನ್ನು ಮುಂದುವರಿಸುತ್ತಿದ್ದಾರೆ. ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಕಲಾವಿದರು ಕಾರ್ಯಕ್ರಮಗಳಲ್ಲಿ ಸಕಾರಾತ್ಮಕವಾಗಿ ತೊಡಗಿಸಿಕೊಂಡು ಕಲೆಯ ಬೆಳವಣಿಗೆಯಲ್ಲಿ ಪಾಲುದಾರರಾಗಬೇಕು. ಆಪ್ತ ರಂಗಭೂಮಿ ಕಲ್ಪನೆಯ ಏಕವ್ಯಕ್ತಿ ನೃತ್ಯ ಪ್ರದರ್ಶನದಲ್ಲಿ ಸೂಕ್ಷ್ಮ ಭಾವಾಭಿನಯಗಳಿಗೆ ಹೆಚ್ಚಿನ ಅವಕಾಶಗಳಿದ್ದು ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗುತ್ತವೆ” ಎಂದು ನುಡಿದರು.

    ಎನ್.ಐ.ಟಿ.ಕೆ.ಯ ವಿದ್ಯಾರ್ಥಿ ಕಲಾವಿದರಾದ ಶ್ರೀವಾಸ ಎಸ್., ವಿಕ್ರಮ್. ಎಸ್., ಶ್ಯಾಮ ಪ್ರಮೋದ್ ಯು.ಎನ್. ಇವರುಗಳು ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಸಿಕೊಟ್ಟರು. ವಿಜೇತ ಸುಬ್ರಹ್ಮಣ್ಯ ವಯಲಿನ್ ನಲ್ಲಿ ಹಾಗೂ ಸಂದೀಪ್ ರಾಮಮೂರ್ತಿ ಮೃದಂಗದಲ್ಲಿ ಸಹಕರಿಸಿದರು. ಮಂಗಳೂರಿನ ಗಾನ ನೃತ್ಯ ಅಕಾಡೆಮಿಯ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆ ಮಹತಿ ಹೆಚ್. ಪಾವನಸ್ಕರ್ ಇವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಗಾನ ನೃತ್ಯ ಅಕಾಡೆಮಿಯ ನಿರ್ದೇಶಕಿ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ, ನಾಗರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಕೆ. ರಾಜಮೋಹನ್ ರಾವ್, ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಇವರು ಶುಭ ಹಾರೈಸಿದರು. ಸಂಗೀತ ಕಲಾವಿದೆ ವಿದುಷಿ ಪ್ರಾರ್ಥನಾ ರಾವ್ ಚೆನ್ನೈ ಮತ್ತು ವಿಭು ರಾವ್ ಉಪಸ್ಥಿತರಿದ್ದರು.

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Article‘ಅತ್ಯುತ್ತಮ ಕಾದಂಬರಿ ಪ್ರಶಸ್ತಿ’ಗೆ ಶಶಿಧರ ಹಾಲಾಡಿಯವರ ಕೃತಿ ಆಯ್ಕೆ
    Next Article ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ವಿಶ್ವ ಮಹಿಳಾ ದಿನಾಚರಣೆಯ ಸಲುವಾಗಿ ಸನ್ಮಾನ
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.