Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ‘ಕರ್ನಾಟಕ ಸಂಗೀತ ಕಛೇರಿ’
    Felicitation

    ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ‘ಕರ್ನಾಟಕ ಸಂಗೀತ ಕಛೇರಿ’

    August 3, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸರಿಗಮ ಭಾರತಿ ಸಂಗೀತ ವಿದ್ಯಾಲಯದ ‘ರಜತ ಸಂಭ್ರಮ’ ಮಹೋತ್ಸವದ ಕಾರ್ಯಕ್ರಮವು ದಿನಾಂಕ 01 ಆಗಸ್ಟ್ 2024ರಂದು ಉಡುಪಿಯ ಯಕ್ಷಗಾನ ಕಲಾರಂಗ- ಇನ್ಫೋಸಿಸ್‌ ಫೌಂಡೇಶನ್‌ ಐ.ವೈ.ಸಿ. ಸಭಾಂಗಣದಲ್ಲಿ ಕೆ.ಆರ್‌. ರಾಘವೇಂದ್ರ ಆಚಾರ್ಯ ಮಣಿಪಾಲ ಅವರು ಪ್ರಾರ್ಥನಾ ಸ್ತುತಿಯೊಂದಿಗೆ ಪ್ರಾರಂಭವಾಯಿತು. ಉಡುಪಿ ಯಕ್ಷಗಾನ ಕಲಾರಂಗದ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಕರ್ನಾಟಕ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇವರು ಮಾತನಾಡಿ “ಭಾರತೀಯ ಕಲಾಪ್ರಕಾರಗಳು ಕೇವಲ ಮನೋರಂಜನೆಗಾಗಿ ಅಲ್ಲ, ಅವು ಭಗವಂತನ ಜೊತೆ ಅನುಸಂಧಾನ ಮಾಡುವ ಮಾಧ್ಯಮವೂ ಹೌದು. ಭಾರತದ ತಾಯಿ ಬೇರು ನಮ್ಮ ಕಲೆ, ಸಂಸ್ಕೃತಿಯ ಪರಂಪರೆಯಲ್ಲಿ ಭದ್ರವಾಗಿ ಅಡಗಿದೆ. ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಇಂತಹ ಸಂಸ್ಥೆಗಳಿಂದ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬದಲಾವಣೆ ಬೇಕು ಎಂಬ ಪ್ರಜ್ಞೆ ಸಮಾಜದಲ್ಲಿ ಮೂಡುತ್ತಿರುವುದು ಸಂತಸದ ವಿಷಯ” ಎಂದು ಅಭಿಪ್ರಾಯಪಟ್ಟರು.

    ಇದೇ ಸಂದರ್ಭದಲ್ಲಿ ಉಡುಪಿಯ ಹಿರಿಯ ಸಾಮಾಜಿಕ ಕಾರ್ಯಕರ್ತರು, ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ಸಾಂಸ್ಕೃತಿಕ ಸಂಸ್ಥೆಗಳ ಖಜಾಂಜಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ. ಕೆ. ಸದಾಶಿವ ರಾವ್‌ ಅವರಿಗೆ ‘ಕಲಾಪೋಷಕ’ ಗೌರವಾರ್ಪಣೆಯನ್ನು ನೀಡಲಾಯಿತು. ಪ್ರೊ. ಕೆ.ಸದಾಶಿವ ರಾವ್ ಒಬ್ಬ ಉತ್ತಮ ಪ್ರಾಧ್ಯಾಪಕರು, ಆಡಳಿತಗಾರರು, ಪದವಿ ವಿದ್ಯಾರ್ಥಿಗಳಿಗೆ ಅವರು ಬರೆದ ಟ್ಯಾಕ್ಸೇಶನ್ ಪಠ್ಯವು 30ಕ್ಕೂ ಹೆಚ್ಚು ಬಾರಿ ಪುನರ್ ಮುದ್ರಣಗೊಂಡಿದೆ. ಉಡುಪಿಯ ಯಕ್ಷಗಾನ ಕಲಾರಂಗ, ರಾಗಧನ, ಸರಿಗಮ ಭಾರತಿ, ಹವ್ಯಕಸಭಾ ಅಲ್ಲದೆ ಇನ್ನೂ ಹಲವಾರು ಸಂಘಟನೆಗಳ ಲೆಕ್ಕಪರಿಶೋಧಕರಾಗಿ ಸೇವೆ ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತರಿವರು. ಹಲವಾರು ಮಂದಿಯ ವೈಯಕ್ತಿಕ ಲೆಕ್ಕ ಪತ್ರದ ನಿರ್ವಹಣೆಯನ್ನೂ ಕೂಡ ಉಚಿತವಾಗಿ ಕಳೆದ ಹಲವು ದಶಕಗಳಿಂದ ನಿರ್ವಹಿಸುತ್ತಾ ಬಂದಿರುತ್ತಾರೆ. ಯಕ್ಷಗಾನ ಕಲಾರಂಗದಲ್ಲಿಯೂ ಕಳೆದ 20 ವರ್ಷಗಳಿಂದ ವಿದ್ಯಾಪೋಷಕ್‌ನ ಲೆಕ್ಕಪತ್ರ ನಿರ್ವಹಣೆ ಮಾಡುತ್ತಿದ್ದ ಇವರು ಕಳೆದ ವರ್ಷದಿಂದ ಇಡೀ ಸಂಸ್ಥೆಯ ಕೋಶಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಇವರಿಗೆ ಸೇವಾಭೂಷಣ ಪ್ರಶಸ್ತಿ ನೀಡಿ ಕಲಾರಂಗ ಗೌರವಿಸಿತ್ತು.

    ಬಳಿಕ ಕೆ.ಎಸ್‌. ವಿಷ್ಣುದೇವ್‌ ಇವರಿಂದ ನಡೆದ ರಾಗಂ..ತಾನಂ…ಪಲ್ಲವಿ ಸಹಿತ ಕರ್ನಾಟಕ ಸಂಗೀತ ಕಛೇರಿಗೆ ವಯೊಲಿನ್‌ನಲ್ಲಿ ವಿ.ಎಸ್‌. ಗೋಕುಲ್‌ ಆಲಂಗೋಡೆ, ಮೃದಂಗದಲ್ಲಿ ಸುನಾದ ಕೃಷ್ಣ ಅಮೈ ಹಾಗೂ ಘಟಂನಲ್ಲಿ ಶ್ರೀಜಿತ್‌ ವೆಲ್ಲತ್ತಂಜೂರ್‌ ಸಹಕರಿಸಿದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಅಭಿನಂದಿಸಿದರು. ಸರಿಗಮ ಭಾರತಿ ಸಂಗೀತ ವಿದ್ಯಾಲಯದ ನಿರ್ದೇಶಕ ಡಾ. ಎಚ್.ಎನ್. ಉದಯಶಂಕರ್‌ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಲಯದ ಗುರು ಉಮಾಶಂಕರಿ ವಂದನಾರ್ಪಣೆಗೈದರು. ಶಿಲ್ಪಾ ಜೋಷಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಪ್ಪಳದಲ್ಲಿ ‘ಪುಸ್ತಕ-ಪತ್ರಿಕೆ ಸಂಸ್ಕೃತಿ ಅಭಿಯಾನ ಹಾಗೂ 8ನೆಯ ಮಕ್ಕಳ ಸಾಂಸ್ಕೃತಿಕ ಪ್ರತಿಭೋತ್ಸವ’ | ಆಗಸ್ಟ್ 6
    Next Article ಮಂಗಳೂರಿನಲ್ಲಿ ‘ಆಕ್ಟಿಂಗ್ ಕ್ಲಾಸ್’ ಮೂರು ದಿನಗಳ ಕಾರ್ಯಾಗಾರ | ಆಗಸ್ಟ್ 16, 17 ಮತ್ತು 18
    roovari

    Comments are closed.

    Related Posts

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    ಇಪ್ಪತ್ತನಾಲ್ಕು ಗಂಟೆಗಳ ಕಾಲ ನಿರಂತರ ಹಾಡಿ ವಿಶ್ವದಾಖಲೆ ನಿರ್ಮಿಸಿದ ಯಶವಂತ್ ಎಂ.ಜಿ.

    June 5, 2025

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 128’ | ಜೂನ್ 07

    June 5, 2025

    ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ‘ಲಲಿತ ಕಲೋತ್ಸವ, ಸಮ್ಮಾನ ಮತ್ತು ಯಕ್ಷಗಾನ’ | ಜೂನ್ 08

    June 5, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.