Subscribe to Updates

    Get the latest creative news from FooBar about art, design and business.

    What's Hot

    ಸ್ಟೇಜ್ ಬೆಂಗಳೂರು ಇವರ ವತಿಯಿಂದ ‘ಅಭಿನಯ ಕಾರ್ಯಾಗಾರ’

    August 28, 2025

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ | ಆಗಸ್ಟ್ 31

    August 28, 2025

    ಉಡುಪಿಯಲ್ಲಿ ‘ಮಂಜಣ್ಣನ ನೆನಪು’ ಸಂಸ್ಮರಣಾ ಕಾರ್ಯಕ್ರಮ | ಆಗಸ್ಟ್ 31

    August 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ಇದರ 17ನೇ ವಾರ್ಷಿಕೋತ್ಸವ | ಸೆಪ್ಟೆಂಬರ್ 26
    Competition

    ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ಇದರ 17ನೇ ವಾರ್ಷಿಕೋತ್ಸವ | ಸೆಪ್ಟೆಂಬರ್ 26

    September 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ಇದರ 17ನೇ ವಾರ್ಷಿಕೋತ್ಸವ ಸಮಾರಂಭವನ್ನು ದಿನಾಂಕ 26 ಸೆಪ್ಟೆಂಬರ್ 2024ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ, ಸಾಧಕರಿಗೆ ಸನ್ಮಾನದೊಂದಿಗೆ ಈ ಕಾರ್ಯಕ್ರಮದಲ್ಲಿ ಸಂಜೆ 4-00 ಗಂಟೆಯಿಂದ ‘ಸ್ವರ ಕುಡ್ಲ ಸೀಸನ್ 6’ ಇದರ ಗ್ರಾಂಡ್ ಫಿನಾಲೆ ನಡೆಯಲಿದೆ. ಸಂಜೆ 7-00 ಗಂಟೆಗೆ ನಡೆಯಲಿರುವ ವಾರ್ಷಿಕೋತ್ಸವ ಸಭಾ ಕಲಾಪದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷರಾದ ಶ್ರೀ ದೀಪಕ್‌ ರಾಜ್ ಉಳ್ಳಾಲ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನಸಭೆ ಸ್ಪೀಕರ್ ಯು.ಟಿ. ಖಾದ‌ರ್ ಮತ್ತಿತರರು ಭಾಗವಹಿಸುವರು.

    ಸಮಾರಂಭದಲ್ಲಿ ಖ್ಯಾತ ಸಂಗೀತ ಕಲಾವಿದ ಶ್ರೀ ರಾಜಾರಾಮ್ ಭಕ್ತ ಉಡುಪಿ, ಖ್ಯಾತ ಕೀಬೋರ್ಡ್ ವಾದಕರಾದ ಶ್ರೀ ಗುಡ್ ವಿಲ್ ಫೆಡ್ರಿಕ್ಸ್ ಉಡುಪಿ, ಹಿರಿಯ ಬಾಜ್ ಗಿಟಾರ್ ವಾದಕರಾದ ಶ್ರೀ ಕೆ.ಸಿ. ಬಶೀ‌ರ್ ಅಹ್ಮದ್ ಇವರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಒಕ್ಕೂಟದ ಸದಸ್ಯರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಪ್ರತಿಷ್ಠಿತ ‘ಗೌರಮ್ಮ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 05
    Next Article ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆ| 6 ಅಕ್ಟೋಬರ್
    roovari

    Comments are closed.

    Related Posts

    ಉಡುಪಿಯಲ್ಲಿ ‘ಮಂಜಣ್ಣನ ನೆನಪು’ ಸಂಸ್ಮರಣಾ ಕಾರ್ಯಕ್ರಮ | ಆಗಸ್ಟ್ 31

    August 28, 2025

    ಅತ್ತಾವರದ ಸರೋಜಿನೀ ಮಧುಸೂದನ ಕುಶೆ ವಿದ್ಯಾಲಯದಲ್ಲಿ ‘ಸಂಸ್ಕೃತೋತ್ಸವ’ ಉದ್ಘಾಟನೆ

    August 28, 2025

    ಮಂಗಳೂರಿನ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ | ಆಗಸ್ಟ್ 31

    August 28, 2025

    ಶ್ರೀ ಗಣೇಶ ನೃತ್ಯಾಲಯದಲ್ಲಿ ‘ನೃತ್ಯೋಲ್ಲಾಸ’ ಮಾಸಿಕ ಭರತನಾಟ್ಯ ಕಾರ್ಯಕ್ರಮ

    August 26, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.