Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುಳ್ಯದ ಕನಕ ಕಲಾ ಗ್ರಾಮದಲ್ಲಿ ಯಶಸ್ವಿಯಾಗಿ ನಡೆದ ವಿಶ್ವ ನೃತ್ಯ ದಿನ ಆಚರಣೆ
    Bharathanatya

    ಸುಳ್ಯದ ಕನಕ ಕಲಾ ಗ್ರಾಮದಲ್ಲಿ ಯಶಸ್ವಿಯಾಗಿ ನಡೆದ ವಿಶ್ವ ನೃತ್ಯ ದಿನ ಆಚರಣೆ

    May 1, 2025Updated:May 2, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ವಿಶ್ವ ನೃತ್ಯ ದಿನದ ಅಂಗವಾಗಿ ಗುರುದೇವ ಲಲಿತಕಲಾ ಅಕಾಡೆಮಿ ವತಿಯಿಂದ ದಿನಾಂಕ 29 ಏಪ್ರಿಲ್ 2025ರಂದು ವಿಶ್ವ ನೃತ್ಯ ದಿನ 2025 ಸುಳ್ಯ ತಾಲೂಕಿನ ಕನಕಮಜಲಿನ ಕನಕ ಕಲಾ ಗ್ರಾಮದಲ್ಲಿ ನಡೆಯಿತು.

    ಇದರ ಅಂಗವಾಗಿ ಬೆಳಗ್ಗೆ 9-00 ಗಂಟೆಯಿಂದ ರಾತ್ರಿ ತನಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ನಡೆದ ಸಾಂಸ್ಕೃತಿಕ ಕಲಾ ಕಾರ್ಯಕ್ರಮಗಳನ್ನು ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್‌ ಭಾರದ್ವಾಜ್ ಉದ್ಘಾಟಿಸಿ ಶುಭ ಹಾರೈಸಿದರು. ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಕಾಮತ್‌, ಅಡ್ಕಾರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರ್, ಭರತನಾಟ್ಯ ಕಲಾವಿದೆ ಮಂಜುಶ್ರೀ ರಾಘವ್, ಕನಕಮಜಲು ಗ್ರಾ.ಪಂ. ಅಧ್ಯಕ್ಷೆ ಶಾರದಾ ಉಗ್ಗಮೂಲೆ, ಎಸ್. ಗೋಪಾಲಕೃಷ್ಣ ಮೂರ್ಜೆ ಭಾಗವಹಿಸಿದ್ದರು.

    ಗುರುದೇವ ಲಲಿತ ಕಲಾ ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಧಾಕೃಷ್ಣ ಪಿ.ಎಂ. ಉಪಸ್ಥಿತರಿದ್ದರು. ಅಕಾಡೆಮಿಯ ಕಲಾ ನಿರ್ದೇಶಕಿ ಡಾ. ಚೇತನಾ ರಾಧಾಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ದಾಮೋದರ ಕಣಜಾಲು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ಸಂಜೆಯಿಂದ ಕುಣಿತ ಭಜನೆ, ಏಕವ್ಯಕ್ತಿ ಭರತನಾಟ್ಯ, ಸಮೂಹ ಭರತನಾಟ್ಯ, ಕೂಚಿಪುಡಿ, ಸಿತಾರ್ ವಾದನ, ಏಕವ್ಯಕ್ತಿ ಹಾಗೂ ವಿವಿಧ ಶಾಸ್ತ್ರೀಯ ನೃತ್ಯ ಕಾರ್ಯಕ್ರಮಗಳು ಪ್ರಸ್ತುತಗೊಂಡವು.

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Article‘ನಟನ’ ಮೈಸೂರಿನ ‘ರಜಾಮಜಾ’ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಡಗರ | ಮೇ 05 ಮತ್ತು 06
    Next Article ಮಂಗಳೂರಿನ ಪುರಭವನದಲ್ಲಿ ಕುಮಾರಿ ಕಿಯಾರಾ ಆ್ಯಶ್ಲಿನ್ ಪಿಂಟೋ ಇವರ ಶಾಸ್ತ್ರೀಯ ನೃತ್ಯ ರಂಗಪ್ರವೇಶ | ಮೇ 04
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.