Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಪಾಕ್ಷಿಕ ತಾಳಮದ್ದಳೆ ಕೂಟ

    February 16, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬೆಳ್ಳಕ್ಕಿ ಸಾಲು’

    February 16, 2026

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಜೀವನ ರಾಮ್ ಸುಳ್ಯ ಹಾಗೂ ನರೇಶ್ ಡಿಂಗ್ರಿಗೆ ಸೆಂಟರ್ ಸ್ಟೇಜ್ ಕಪ್ಪಣ್ಣ ಸಾಂಸ್ಕೃತಿಕ ಪ್ರಶಸ್ತಿ
    Awards

    ಜೀವನ ರಾಮ್ ಸುಳ್ಯ ಹಾಗೂ ನರೇಶ್ ಡಿಂಗ್ರಿಗೆ ಸೆಂಟರ್ ಸ್ಟೇಜ್ ಕಪ್ಪಣ್ಣ ಸಾಂಸ್ಕೃತಿಕ ಪ್ರಶಸ್ತಿ

    February 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಶ್ರೀಮಾತಾ ಚಾರಿಟೇಬಲ್‌ ಟ್ರಸ್ಟ್ ಹುಳಿಯಾರು ಹಾಗೂ ಸೆಂಟರ್ ಸ್ಟೇಜ್ ಬೆಂಗಳೂರು ಇವರು ಕನ್ನಡ ಸಾಂಸ್ಕೃತಿಕ ಲೋಕದ ಸಂಘಟಕ ಶ್ರೀನಿವಾಸ ಜಿ. ಕಪ್ಪಣ್ಣ ಅವರ ಹೆಸರಿನಲ್ಲಿ ನೀಡುತ್ತಿರುವ ‘ಸೆಂಟರ್ ಸ್ಟೇಜ್ ಕಪ್ಪಣ್ಣ ಸಾಂಸ್ಕೃತಿಕ ಪ್ರಶಸ್ತಿ’ಗೆ ಪ್ರಸಿದ್ಧ ರಂಗಕರ್ಮಿ, ಸುಳ್ಯದ ರಂಗಮನೆಯ ಡಾ. ಜೀವನ್ ರಾಂ ಸುಳ್ಯ ಹಾಗೂ ‘ಸೆಂಟರ್ ಸ್ಟೇಜ್ ಕಪ್ಪಣ್ಣ ಸಾಂಸ್ಕೃತಿಕ ಯುವ ಪ್ರಶಸ್ತಿ’ಗೆ ಸಂಘಟಕ ಹಾಗೂ ನಿರ್ದೇಶಕರಾದ ನರೇಶ್ ಡಿಂಗ್ರಿ ಆಯ್ಕೆಯಾಗಿದ್ದಾರೆ.

    ಈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 13-02-2024ರಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ ನಡೆಯಲಿದೆ. ‘ಸೆಂಟರ್ ಸ್ಟೇಜ್ ಕಪ್ಪಣ್ಣ ಸಾಂಸ್ಕೃತಿಕ ಪ್ರಶಸ್ತಿ’ 50 ಸಾವಿರ ನಗದು ಹಾಗೂ ‘ಸೆಂಟರ್ ಸ್ಟೇಜ್ ಕಪ್ಪಣ್ಣ ಸಾಂಸ್ಕೃತಿಕ ಯುವ ಪ್ರಶಸ್ತಿ’ಯು 25 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

    ಡಾ. ಜೀವನ್ ರಾಂ ಸುಳ್ಯ
    ಜೀವನ್‌ ರಾಂ ಅವರು ಕಳೆದ 25 ವರ್ಷಗಳಿಂದ ರಂಗಭೂಮಿಯಲ್ಲಿ ದುಡಿಯುತ್ತಿದ್ದು, ಸುಳ್ಯದ ಹಳೆಗೇಟಿನಲ್ಲಿ ತನ್ನ ವಾಸದ ಮನೆಯನ್ನು ‘ರಂಗ ಮನೆ’ ಹೆಸರಿನಲ್ಲಿ ಸಾಂಸ್ಕೃತಿಕ ಕಲಾ ಕೇಂದ್ರವನ್ನಾಗಿಸಿ, ನಿರಂತರ ರಂಗ ಕಲೆಯ ತರಬೇತಿ ಹಾಗೂ ಪ್ರದರ್ಶನಗಳ ಮೂಲಕ ರಾಜ್ಯದ ಗಮನ ಸೆಳೆದವರು ಮತ್ತು ಹಲವಾರು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಕಾರ್ಕಳದ ಯಕ್ಷರಂಗಾಯಣದ ಪ್ರಥಮ ನಿರ್ದೇಶಕರಾಗಿರುವ ಇವರು ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಮುಖ್ಯಸ್ಥರಾಗಿದ್ದಾರೆ.

    ನರೇಶ್ ಡಿಂಗ್ರಿ
    ರಾಯಚೂರು ಜಿಲ್ಲೆಯ ಆಶಾಪೂರ ಗ್ರಾಮದವರಾದ ನರೇಶ್ ಡಿಂಗ್ರಿ ಸತತ 17 ವರ್ಷಗಳಿಂದ ಬೀದಿ ನಾಟಕ, ನೀನಾಸಂ, ಆದಿಮ, ಜನಮನದಾಟ, ಮತ್ತು ಹಲವಾರು ರಂಗ ತಂಡಗಳಲ್ಲಿ ನಟ, ಸಂಗೀತಗಾರ, ತಂತ್ರಜ್ಞ ಹಾಗೂ ತಂಡದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. ‘ಬೆಂದು ಬೂದಿಯಾದವರು’, ‘ಬುದ್ಧನ ಬೆಳಕು’, ‘ಮಳೆ ಬೇಕ್ರಿ ಮಳೆ’, ‘ಕೆಂಡ ಬಿಟ್ಟ ಉಸಿರು’ ಹೀಗೆ ಹಲವಾರು ನಾಟಕಗಳನ್ನು ನಿರ್ದೇಶಿಸಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleರಮೇಶ್ ಶೆಟ್ಟಿ ಬಾಯಾರಿಗೆ ಕೇರಳ ‘ಪೋಕ್ಲೋರ್ ಅಕಾಡಮಿ ಪ್ರಶಸ್ತಿ’
    Next Article ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ-2023-24’
    roovari

    Add Comment Cancel Reply


    Related Posts

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026

    ಬೆಂಗಳೂರು ವಿ.ವಿ.ಯಲ್ಲಿ ‘ಕಾವ್ಯ ಶಿವರಾತ್ರಿ’ ಅಹೋರಾತ್ರಿ ಕಾವ್ಯ ಗಾಯನ | ಫೆಬ್ರವರಿ 15

    February 14, 2026

    ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್ ಇವರಿಗೆ ‘ಬೊಂಡಾಲ ಪ್ರಶಸ್ತಿ’ ಪ್ರದಾನ | ಫೆಬ್ರವರಿ 19 ಮತ್ತು 20

    February 13, 2026

    ಸಂಘಟಕ, ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆಗೆ ‘ಕವಿಕಾವ್ಯ ವಿಭೂಷಣ ಪ್ರಶಸ್ತಿ’

    February 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.