Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚನ್ನರಾಯಪಟ್ಟಣದಲ್ಲಿ ಸೋಬಾನೆ ಪದಗಳ ಕಲಿಕಾ ತರಬೇತಿ
    Music

    ಚನ್ನರಾಯಪಟ್ಟಣದಲ್ಲಿ ಸೋಬಾನೆ ಪದಗಳ ಕಲಿಕಾ ತರಬೇತಿ

    July 21, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಚನ್ನರಾಯಪಟ್ಟಣ: ಪ್ರತಿಮಾ ಟ್ರಸ್ಟ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ವಿದ್ಯಾರ್ಥಿ ನಿಲಯದಲ್ಲಿ ಒಂದು ತಿಂಗಳ ಸೋಬಾನೆ ಪದಗಳ ಕಲಿಕಾ ತರಬೇತಿ ದಿನಾಂಕ 16-07-2023 ರಂದು ಪ್ರಾರಂಭಗೊಂಡಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನೀನಾಸಂ ರಂಗ ನಿರ್ದೇಶಕ ಶಿವಶಂಕ‌ರ್ “ಜಾನಪದ ಪ್ರಕಾರಗಳಲ್ಲಿ ಒಂದಾದ ಸೋಬಾನೆ ಪದಗಳ ಬಗ್ಗೆ ಇತ್ತೀಚಿನ ಮಕ್ಕಳಿಗೆ ಪರಿಚಯವೇ ಇಲ್ಲದಿರುವುದು ವಿಪರ್ಯಾಸ. ಈ ಸಂದರ್ಭದಲ್ಲಿ ಪ್ರತಿಮಾ ಟ್ರಸ್ಟ್ ಸೋಬಾನೆ ಪದಗಳನ್ನು ಪರಿಚಯಾತ್ಮಕ ದೃಷ್ಟಿಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಒಂದು ತಿಂಗಳ ತರಬೇತಿ ಶಿಬಿರವನ್ನು ಆಯೋಜಿಸಿರುವುದು ಅಭಿನಂದನೀಯ” ಎಂದರು.
    ಉಮೇಶ್ ತೆಂಕನಹಳ್ಳಿ ಮಾತನಾಡಿ “ಪ್ರತಿಮಾ ಟ್ರಸ್ ಜಾನಪದ ಸೊಗಡಿನ ಬಹಳಷ್ಟು ತರಬೇತಿ ಶಿಬಿರ ಆಯೋಜನೆ ಮಾಡುತ್ತಿದ್ದು, ಈ ಬಾರಿ ಸೋಬಾನೆ ಪದಗಳನ್ನು ತರಬೇತಿಗೊಳಿಸುವುದು ಶಿಬಿದ ವಿಶೇಷತೆ. ಬಹಳ ದಿನಗಳಿಂದ ಈ ಸೋಬಾನೆ ಪದಗಳ ತರಬೇತಿ ಶಿಬಿರ ಆಯೋಜನೆ ಮಾಡಬೇಕು ಎಂದು ಅಂದುಕೊಂಡಿದ್ದರೂ ಸಾಧ್ಯವಾಗಿರಲಿಲ್ಲ. ಈಗ ಕಾಲ ಕೂಡಿ ಬಂದಿದೆ. ಅದರಲ್ಲೂ ನಮ್ಮ ಹಳ್ಳಿ ಹಿರಿಯರಿಂದ ಸೋಬಾನೆ ಪದಗಳನ್ನು ಕಲಿಯುವುದು ಬಹಳ ವಿಶೇಷ. ಈ ಶಿಬಿರದಲ್ಲಿರುವ ಮಕ್ಕಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು” ಎಂದರು.
    ಇದೇ ಸಂದರ್ಭದಲ್ಲಿ ನೀನಾಸಂ ರಂಗ ನಿರ್ದೇಶಕ ಶಿವಶಂಕ‌ರ್ ಅವರನ್ನು ಸನ್ಮಾನಿಸಲಾಯಿತು.
    ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತರಣಾಧಿಕಾರಿ ಮಂಜುನಾಥ್‌ ಮಾತನಾಡಿದರು. ಪ್ರತಿಮಾ ಟ್ರಸ್ಟ್ ಸಂಚಾಲಕ ಎ.ಎಲ್.ನಾಗೇಶ್, ಕಾರ್ಯದರ್ಶಿ ಡಿ.ಜಗದೀಶ್ ಚಂದ್ರ, ವಿದ್ಯಾರ್ಥಿನಿಲಯದ ಪಾಲಕರಾದ ಆಶಾರಾಣಿ, ಪ್ರತಿಮಾ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡವ ಸಾಹಿತಿಗಳಿಂದ ಕೊಡವ ಕೃತಿಗಳ ಲೋಕಾರ್ಪಣೆ
    Next Article ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಜ್ಞಾನ ಫಲ್ಗುಣಿ’ ಬಿಡುಗಡೆ
    roovari

    Add Comment Cancel Reply


    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಮಂಗಳೂರು ತಾಲೂಕಿನಲ್ಲಿ ಉದ್ಘಾಟನೆಗೊಂಡ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕ

    May 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಸಂವಿಧಾನ ಸಾಥಿ’ ನೃತ್ಯ ಕಾರ್ಯಕ್ರಮಗಳ ಉದ್ಘಾಟನೆ | ಜೂನ್ 01

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.