ಧಾರವಾಡ : ಅಭಿನಯ ಭಾರತಿ (ರಿ.) ಧಾರವಾಡ ಇವರ ವತಿಯಿಂದ ಶ್ರೀ ಸವಣೂರು ವಾಮನರಾಯರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 26 ಜೂನ್ 2025ರಂದು ಮುಂಜಾನೆ 11-00 ಗಂಟೆಗೆ ಧಾರವಾಡದ ಮನೋಹರ ಗ್ರಂಥ ಮಾಲಾದಲ್ಲಿ ಆಯೋಜಿಸಲಾಗಿದೆ. ‘ವೃತ್ತಿ ರಂಗಭೂಮಿ ಸವಾಲುಗಳು’ ಎಂಬ ವಿಷಯದ ಬಗ್ಗೆ ಧಾರವಾಡ ರಂಗಾಯಣದ ನಿರ್ದೇಶಕರಾದ ರಾಜು ತಾಳಿಕೋಟಿ ಇವರು ಉಪನ್ಯಾಸ ನೀಡಲಿದ್ದಾರೆ.