ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಇದರ ವತಿಯಿಂದ ಮತ್ತು ಶಿವಮೊಗ್ಗದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ದತ್ತಿನಿಧಿ ಕಾರ್ಯಕ್ರಮವನ್ನು ದಿನಾಂಕ 9, 10 ಮತ್ತು 14 ಜುಲೈ 2026ರಂದು ಹಮ್ಮಿಕೊಳ್ಳಲಾಗಿದೆ.
ದಿನಾಂಕ 9 ಜುಲೈ 2026ರಂದು ಮಧ್ಯಾಹ್ನ 2-00 ಗಂಟೆಗೆ ಶಿವಮೊಗ್ಗದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದಾರೆ. ದಿ. ಜಿ.ಬಿ. ಲಲಿತಮ್ಮ ದತ್ತಿ ಉಪನ್ಯಾಸವನ್ನು ಕನ್ನಡ ಅಧ್ಯಾಪಕರಾದ ಡಾ. ಲವ ಜಿ.ಆರ್. ಹಾಗೂ ದಿ. ಸಾಂಗ್ಲಿ ನಾರಾಯಣ್ ರಾವ್ ಸ್ಮಾರಕ ದತ್ತಿ ಉಪನ್ಯಾಸವನ್ನು ಲೇಖಕರಾದ ಡಾ. ವಿನಯ ಶ್ರೀನಿವಾಸ್ ಇವರು ನೀಡಲಿದ್ದಾರೆ.
ದಿನಾಂಕ 10 ಜುಲೈ 2026ರಂದು ಮಧ್ಯಾಹ್ನ 3-00 ಗಂಟೆಗೆ ಶಿವಮೊಗ್ಗದ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದಾರೆ. ದಿ. ಡಿ.ಆರ್. ರತ್ನಾಕರ್ ಸ್ಮಾರಕ ದತ್ತಿ ಉಪನ್ಯಾಸವನ್ನು ಕನ್ನಡ ಅಧ್ಯಾಪಕರಾದ ಡಾ. ಬಿದರಗೋಡು ನಾಗೇಶ್ ಹಾಗೂ ಶ್ರೀ ಆನಂದಪುರ ಜಗದ್ಗುರು ಗುರುಬಸವ ಮಹಾಸ್ವಾಮಿ ಸ್ಮಾರಕ ದತ್ತಿ ಉಪನ್ಯಾಸವನ್ನು ಇತಿಹಾಸ ಸಂಶೋಧಕರಾದ ಡಾ. ಕೆಳದಿ ವೆಂಕಟೇಶ್ ಜೋಯ್ಸ್ ಇವರು ನೀಡಲಿದ್ದಾರೆ.
ದಿನಾಂಕ 14 ಜುಲೈ 2026ರಂದು ಬೆಳಗ್ಗೆ 11-00 ಗಂಟೆಗೆ ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದಾರೆ. ದಿ. ಅಬ್ಬಾಸ್ ಅಬ್ಬಲಗೆರೆ ಸ್ಮಾರಕ ದತ್ತಿ ಉಪನ್ಯಾಸವನ್ನು ಲೇಖಕರಾದ ಡಾ. ಸರ್ಫ್ರಾಜ್ ಚಂದ್ರಗುತ್ತಿ ಹಾಗೂ ದಿ. ಎಂ.ಆರ್. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸವನ್ನು ಸಾಹಿತಿಗಳಾದ ಬಿ. ಚಂದ್ರೇಗೌಡ ಇವರು ನೀಡಲಿದ್ದಾರೆ.

