Subscribe to Updates

    Get the latest creative news from FooBar about art, design and business.

    What's Hot

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ‘ಚಾರುವಸಂತ’ ಪ್ರದರ್ಶನ
    Drama

    ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ‘ಚಾರುವಸಂತ’ ಪ್ರದರ್ಶನ

    February 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೈಂದೂರು : ಲಾವಣ್ಯ ಬೈಂದೂರು ಅಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಬೈಂದೂರು ತಾಲೂಕು ಘಟಕ ಹಾಗೂ ಅಶೋಕ ಜುವೆಲ್ಲರ್ಸ್ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ನಾಟಕ ಪ್ರದರ್ಶನ ಸಮಾರಂಭವು ದಿನಾಂಕ 04 ಫೆಬ್ರವರಿ 2025ರಂದು ಯಡ್ತರೆ-ಬೈಂದೂರು ಜೆ.ಎನ್.ಆರ್. ಹೊರಾಂಗಣ ವೇದಿಕೆಯಲ್ಲಿ ನಡೆಯಿತು.

    ಈ ಸಮಾರಂಭದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಡಾ. ಜೀವನರಾಂ ಸುಳ್ಯ ಮಾತನಾಡುತ್ತಾ “ಚಿಂತನೆಗಳಿಲ್ಲದ ಮನುಷ್ಯ, ಮನಸ್ಸಿಲ್ಲದ ದೇಹ ಯಾವಾಗಲೂ ನಿರ್ಜಿವ ಸ್ಥಿತಿಯಲ್ಲಿರುತ್ತದೆ. ಶ್ರೀಮಂತಿಕೆ ಉದ್ದೇಶಕ್ಕಿಂತ ಧೀಮಂತ ಮನುಷ್ಯರಾಗುವ ಕನಸು ಕಾಣುವಂತಾಗಬೇಕು” ಎಂದು ಹೇಳಿದರು.

    “ಸಾಹಿತ್ಯ ಮೌಲ್ಯಭರಿತವಾಗಲು ಆಧ್ಯಾತ್ಮಿಕ ಜ್ಞಾನ, ಅಭ್ಯಾಸ, ಸಂಸ್ಕಾರ, ಮೌಲ್ಯಗಳು ಬರಹಗಾರರಲ್ಲಿ ಸಮ್ಮಿಳಿತವಾಗಿರಬೇಕು. ಜನಪದ ಮತ್ತು ಶಿಷ್ಟಮಹಾಕಾವ್ಯಗಳ ತಿರುಳು ಆಧ್ಯಾತ್ಮಿಕ ಬದುಕಿನ ದರ್ಶನ. ಇಂತಹ ಸಾಹಿತ್ಯವನ್ನು ಇಂದಿನ ಸಾಹಿತಿಗಳು ನಿಷ್ಠೆಯಿಂದ ಅಧ್ಯಯನ ಮಾಡುವ ಮೂಲಕ ಗಟ್ಟಿ ಸಾಹಿತ್ಯ ಹಾಗೂ ಶ್ರೇಷ್ಠ ಸಾಹಿತ್ಯ ಸೃಷ್ಟಿ ಮಾಡುವಂತಾಗಬೇಕು” ಎಂದು ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು.

    ರಂಗ ನಿರ್ದೇಶಕ ಡಾ. ಜೀವನರಾಂ ಸುಳ್ಯ ಇವರನ್ನು ಕ.ಸಾ.ಪ. ವತಿಯಿಂದ ಗೌರವಿಸಲಾಯಿತು. ಬೈಂದೂರು ತಾಲೂಕು ಕ.ಸಾ.ಪ. ಘಟಕ ಅಧ್ಯಕ್ಷರಾಗಿ ನೇಮಕಗೊಂಡ ಅರುಣ್ ಕುಮಾರ್ ಶಿರೂರು ಇವರಿಗೆ ನಿರ್ಗಮನ ಅಧ್ಯಕ್ಷ ಡಾ. ರಘು ನಾಯ್ಕ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಕ.ಸಾ.ಪ. ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಉಪಸ್ಥಿತರಿದ್ದರು. ಲಾವಣ್ಯ ಸಂಸ್ಥೆ ಅಧ್ಯಕ್ಷ ನರಸಿಂಹ ಬಿ. ನಾಯಕ್ ಸ್ವಾಗತಿಸಿ, ಕಾರ್ಯದರ್ಶಿ ವಿಶ್ವನಾಥ ಆಚಾರ್ಯ ವಂದಿಸಿ, ಸದಸ್ಯ ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿದರು. ಜೆ.ಎನ್‌.ಆರ್. ಕಲಾಮಂದಿರದ ಹೊರಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ನಾಡೋಜ ಹಂಪನಾ ವಿರಚಿತ ‘ಚಾರುವಸಂತ’ ದೇಸೀ ಕಾವ್ಯದ ರಂಗರೂಪ ಪ್ರದರ್ಶನಗೊಂಡಿತು.

    drama
    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ‘ಎ ಫ್ರೆಂಡ್ ಬಿಯಾಂಡ್ ದ ಫೆನ್ಸ್’ ಕನ್ನಡ ನಾಟಕ
    Next Article ಬೆಂಗಳೂರಿನ ಸಂಸ ರಂಗಶಿಕ್ಷಣ ಕೇಂದ್ರದಿಂದ ‘ಥಿಯೇಟರ್ ಡಿಪ್ಲೋಮಾ ಕೋರ್ಸ್’  
    roovari

    Add Comment Cancel Reply


    Related Posts

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ತಿಂಗಳ ನಾಟಕ ಸಂಭ್ರಮದಲ್ಲಿ ‘ದಿ ಫೈಯರ್’ ನಾಟಕ ಪ್ರದರ್ಶನ | ಮೇ 17

    May 15, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications