ಮಂಗಳೂರು : ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ (ರಿ.) ಇದರ ‘ನಲ್ವತ್ತರ ನಲಿವು -5’ ಪ್ರಯುಕ್ತ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಂಗ ಅಧ್ಯಯನ ಕೇಂದ್ರ ಸಾದರ ಪಡಿಸುವ ‘ಚಾರುವಸಂತ’ ನಾಟಕ ಪ್ರದರ್ಶನವು ದಿನಾಂಕ 08 ಫೆಬ್ರವರಿ 2025ರಂದು ಸಂಜೆ 6-30 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ನಾಡೋಜ ಹಂಪನಾ ವಿರಚಿತ ಈ ದೇಸೀ ಕಾವ್ಯಕ್ಕೆ ಡಾ. ಜೀವನ್ ರಾಮ್ ಸುಳ್ಯ ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದು, ಡಾ. ನಾ. ದಾಮೋದರ ಶೆಟ್ಟಿಯವರು ರಂಗರೂಪ ನೀಡಿರುತ್ತಾರೆ.