ಕೋಟ: ಕಾರ್ಕಡ ತಾರಾನಾಥ ಹೊಳ್ಳರ ಮನೆಯಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಂಸ್ಥೆಯ ಚಿಣ್ಣರ ಶುಭಾಶಯ ‘ಗಾನ ಸುಧೆ’ ಕಾರ್ಯಕ್ರಮವು ದಿನಾಂಕ 06 ಜೂನ್ 2025ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಮಕ್ಕಳನ್ನು ಅಭಿನಂದಿಸಿದ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷರಾದ ತಾರಾನಾಥ ಹೊಳ್ಳ ಮಾತನಾಡಿ “ಗುರುಮುಖೇನವಾದ ನಿರಂತರ ಅಭ್ಯಾಸದಿಂದ ಶಿಷ್ಯರನ್ನನೇಕರಿಂದ ಎತ್ತರಕ್ಕೇರಿದ ಸಂಸ್ಥೆ ಯಶಸ್ವಿ ಕಲಾವೃಂದ. ಹಲವಾರು ಮಕ್ಕಳು ತೆಕ್ಕಟ್ಟೆ ಕೇಂದ್ರದಲ್ಲಿ ಕಲಿತು ರಂಗಕ್ಕಾಗಿ ಅವಕಾಶಕ್ಕೆ ಎದುರು ನೋಡುತ್ತಿರುವುದನ್ನು ಗಮನಿಸಿದ್ದೇನೆ. ಆಯ್ದ ಮಕ್ಕಳಿಗೆ ಅವಕಾಶ ಕೊಟ್ಟರೆ ಭವಿಷ್ಯಕ್ಕೆ ಕಲಾವಿದರನ್ನು ಪ್ರೋತ್ಸಾಹಿಸಿದ ಹಿರಿಮೆ ನಮ್ಮದಾಗುತ್ತದೆ. ಅದ್ಭುತ ಪ್ರದರ್ಶನದ ಮೂಲಕ ಜನ ಮೆಚ್ಚುಗೆಗೆ ಪಾತ್ರವಾದ ಚಿಣ್ಣರ ‘ಗಾನ ಸುಧೆ’ ನೆರೆದ ಪ್ರೇಕ್ಷಕರನ್ನು ಮೂಕ ಪ್ರೇಕ್ಷಕರಾಗುವಂತೆ ಮಾಡಿತು” ಎಂದರು.
ಶ್ರೀಮತಿ ಭೂಮಿಕಾ, ಅನೂಪ್ ಜಿ. ರಾವ್, ಶ್ರೀಮತಿ ತಾರಾನಾಥ ಹೊಳ್ಳ, ಕಾರ್ಯದರ್ಶಿ ವೆಂಕಟೇಶ ವೈದ್ಯ, ರಾಘವೇಂದ್ರ ಹೆಗಡೆ ಯಲ್ಲಾಪುರ, ರಾಹುಲ್ ಕುಂದರ್ ಕೋಡಿ, ಪೂಜಾ ಆಚಾರ್, ಪಂಚಮಿ ವೈದ್ಯ, ಪವನ್ ಆಚಾರ್, ಹರ್ಷಿತಾ ಅಮೀನ್ ಉಪಸ್ಥಿತರಿದ್ದರು.