Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನ ಸರಕಾರಿ ಕಾಲೇಜಿನಲ್ಲಿ ‘ಸ್ನೇಹರಂಗ’ ಆಯೋಜನೆಯ ಚಿಂತನ ಕಾರ್ಯಕ್ರಮ 
    Literature

    ಕಾಸರಗೋಡಿನ ಸರಕಾರಿ ಕಾಲೇಜಿನಲ್ಲಿ ‘ಸ್ನೇಹರಂಗ’ ಆಯೋಜನೆಯ ಚಿಂತನ ಕಾರ್ಯಕ್ರಮ 

    September 27, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು: ಕಾಸರಗೋಡಿನ ವಿದ್ಯಾನಗರದ ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ‘ಸ್ನೇಹರಂಗ’ ಆಯೋಜಿಸಿದ್ದ ಚಿಂತನ ಕಾರ್ಯಕ್ರಮವು ದಿನಾಂಕ 25-09-2023ರಂದು ನಡೆಯಿತು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ಸಿನಿಮಾ ಸಂಗೀತ ನಿರ್ದೇಶಕ ವಿ. ಮನೋಹರ್ “ಪ್ರತೀಯೊಂದು ವಿಚಾರವನ್ನು ಪ್ರಶ್ನಿಸುವುದನ್ನು ರೂಢಿಸಿಕೊಳ್ಳಬೇಕು. ಅದು ನಮ್ಮನ್ನು ಬೆಳೆಸುತ್ತದೆ. ಪ್ರಶ್ನಿಸುವ ಸಂದರ್ಭಗಳಲ್ಲಿ ಸವಾಲುಗಳು ಎದುರಾಗುತ್ತವೆ. ಹಿಂದೆ ಕನ್ನಡದ ಚಾನಲ್ ಒಂದರಲ್ಲಿ ಪ್ರಶ್ನಿಸುವ ಹಾಸ್ಯಮಯ ಧಾರಾವಾಹಿ ಮಾಡಿ ಹೊರದಬ್ಬಿಸಿಕೊಂಡದ್ದೂ ಇದೆ. ಆದರೆ ಸಂಕಷ್ಟಗಳು ಬಂದಾಗ ಕಂಗೆಡಬಾರದು. ನಟ -ನಿರ್ದೇಶಕ ಉಪೇಂದ್ರ ಅವರು ಸಂಗೀತ ನಿರ್ದೇಶನದ ಮೊದಲ ಅವಕಾಶ ನೀಡಿದರು. ಆನಂತರ ಡಾ.ರಾಜ್ ಅವರೂ ಕೈಹಿಡಿದರು. ಜನುಮದ ಜೋಡಿ, ಚಿಗುರಿದ ಕನಸು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡುವ ಸಂದರ್ಭದಲ್ಲಿ ರಾಜ್ ಅವರ ಒಡನಾಟ ದೊರೆಯಿತು. ಎಳವೆಯಲ್ಲೇ ಚಿತ್ರಗೀತೆಯ ಹುಚ್ಚು ಹಚ್ಚಿಸಿಕೊಂಡವ ನಾನು. ಹುಚ್ಚು ಇರದಿದ್ದರೆ ಈ ಕ್ಷೇತ್ರದಲ್ಲಿ ಪಳಗಲು ಸಾಧ್ಯವಿಲ್ಲ. ಇದೊಂಥರಾ ಒಳ್ಳೆಯ ಹುಚ್ಚು. ಮೊದಲಿಗೆ ವ್ಯಂಗ್ಯ ಚಿತ್ರಕಾರ ಆಗಿದ್ದೆ. ಕ್ಯಾಸೆಟ್ ಸಂಗೀತದಲ್ಲೂ ಪ್ರಯೋಗ ಮಾಡಿದ್ದೆ. ಆದರೆ ಕೈಹಿಡಿದದ್ದು ಸಿನಿಮಾ ಸಂಗೀತ ಎಂದು ಮನೋಹರ್ ಹಳೆಯ ದಿನಗಳನ್ನು ಮೆಲುಕು ಹಾಕಿದರು. ಕಾಸರಗೋಡು ಹಿರಿಯ ಪ್ರಾಥಮಿಕ ಶಾಲೆಯಂತಹ ಸಿನಿಮಾ ಕಾಸರಗೋಡಿನ ಕನ್ನಡದ ಪರಿಸ್ಥಿತಿಯನ್ನು ತೆರೆದಿಟ್ಟಿದೆ. ಕನ್ನಡ ಮಕ್ಕಳಿಗೆ ಕನ್ನಡ ಅಧ್ಯಾಪಕರೇ ಶಿಕ್ಷಕರಾಗಬೇಕು. ಅದಕ್ಕಾಗಿ ಸಾತ್ವಿಕ ಹೋರಾಟ ಮಾಡಬೇಕು” ಎಂದರು. ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೆ, ಕೋಲು ಮಂಡೆ ಜಂಗಮ ದೇವ ಮುಂತಾದ ತಮ್ಮ ನಿರ್ದೇಶನದ ಚಿತ್ರಗೀತೆಗಳನ್ನು ವಿ.ಮನೋಹರ್ ಹಾಡಿ ವಿದ್ಯಾರ್ಥಿಗಳ ಮನರಂಜಿಸಿದರು. ನಂತರ ವಿದ್ಯಾರ್ಥಿಗಳು ಮನೋಹರ್ ಅವರೊಂದಿಗೆ ಸಂವಾದ ನಡೆಸಿದರು.

    ಕಾರ್ಯಕ್ರಮಕ್ಕೆ ಶುಭಕೋರಿದ ಹಿರಿಯ ರಂಗ ನಿರ್ದೇಶಕ ಕಾಸರಗೋಡು ಚಿನ್ನಾ ಮಾತನಾಡಿ “ಬುಡಕಟ್ಟು ಜನಾಂಗದ ಸಂಗೀತದ ಬಗ್ಗೆ ಕಾಳಜಿ ಹೊಂದಿರುವ ವಿ.ಮನೋಹರ್ ಆ ಜನಾಂಗದ ಹಾಡುಗಳನ್ನು ಸಂರಕ್ಷಿಸುವ ನೆಲೆಯಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ. ಸ್ನೇಹರಂಗವು ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿದ್ಯಾರ್ಥಿಗಳ ಸಾಹಿತ್ಯಿಕ, ಸಾಂಸ್ಕೃತಿಕ ವೇದಿಕೆಯಾಗಿದ್ದು ವಿದ್ಯಾರ್ಥಿಗಳು ಸಾಂಸ್ಕೃತಿಕ ವಲಯದಲ್ಲಿ ಗಟ್ಟಿಯಾಗಬೇಕು. ಸಂಗೀತ, ನಟನೆ ಮುಂತಾದ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಅದುವೇ ನಮ್ಮನ್ನು ಜೀವನದ ಕೊನೆಯವರೆಗೆ ಕಾಪಾಡುತ್ತದೆ. ಮನೋಹರ್ ರಂತವರನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ತರಬೇತು ನೀಡಲು ನಾವು ಸಿದ್ಧ” ಎಂದರು.

    ವಿ.ಮನೋಹರ್ ಅವರನ್ನು ಸ್ನೇಹರಂಗದ ಪರವಾಗಿ ಸನ್ಮಾನಿಸಲಾಯಿತು. ಗಾಯಕ ಕಿಶೋರ್ ಪೆರ್ಲ ಮನೋಹರ್ ನಿರ್ದೇಶನದ ಚಿತ್ರಗೀತೆ  ಹಾಡಿದರು. ವಿಭಾಗ ಮುಖ್ಯಸ್ಥೆ ಪ್ರೊ. ಸುಜಾತಾ.ಎನ್ ಅಧ್ಯಕ್ಷತೆ ವಹಿಸಿದ ಈ ಕಾರ್ಯಕ್ರಮದಲ್ಲಿ ಡಾ.ರತ್ನಾಕರ ಮಲ್ಲಮೂಲೆ ಸ್ವಾಗತಿಸಿ, ವಿದ್ಯಾರ್ಥಿನಿ ಜ್ಯೋತಿಕಾ ಪ್ರಾರ್ಥನೆ ಹಾಡಿ, ಡಾ.ಬಾಲಕೃಷ್ಣ ಬಿ.ಎಂ.ಹೊಸಂಗಡಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಹೂವಿನ‌ಹಡಗಲಿಯಲ್ಲಿ ನೂರುಕೃತಿಗಳ ಲೋಕಾರ್ಪಣೆ ಮತ್ತು ರಾಜ್ಯ ಮಟ್ಡದ ಕವಿಗೋಷ್ಠಿ
    Next Article ಪಡುಕುತ್ಯಾರಿನಲ್ಲಿ ‘ಸುದರ್ಶನ ವಿಜಯ’ ತಾಳಮದ್ದಳೆ  
    roovari

    Add Comment Cancel Reply


    Related Posts

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ರಾಜೇಂದ್ರ ಬಿ. ಶೆಟ್ಟಿ ರಚಿಸಿರುವ ಪುಸ್ತಕಗಳ ಅನಾವರಣ ಸಮಾರಂಭ | ಜೂನ್ 01

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.