Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಡಾ. ಸಿ. ಅಶ್ವಥ್ ಕಲಾಭವನದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಆಗಸ್ಟ್ 03

    July 30, 2025

    ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ‘ತಿಂತಿಣಿ ಮೌನೇಶ್ವರ’ | ಆಗಸ್ಟ್ 03

    July 30, 2025

    ಪುಸ್ತಕ ವಿಮರ್ಶೆ | ʼಕನ್ನಡತನʼ ಎಂಬ ಪ್ರಜ್ಞೆಯ ಅಸಲಿ ಮುಖ

    July 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಬೊಂಡಾಲ ಪ್ರಶಸ್ತಿ’ಗೆ ಹಾಸ್ಯಗಾರ ರವಿಶಂಕರ್ ವಳಕುಂಜ ಆಯ್ಕೆ | ಫೆಬ್ರವರಿ 14
    Awards

    ‘ಬೊಂಡಾಲ ಪ್ರಶಸ್ತಿ’ಗೆ ಹಾಸ್ಯಗಾರ ರವಿಶಂಕರ್ ವಳಕುಂಜ ಆಯ್ಕೆ | ಫೆಬ್ರವರಿ 14

    February 8, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಹಿರಿಯ ಯಕ್ಷಗಾನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ. ಬೊಂಡಾಲ ಜನಾರ್ದನ ಶೆಟ್ಟಿ ಹಾಗೂ ಅವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ‌. ಬೊಂಡಾಲ ರಾಮಣ್ಣ ಶೆಟ್ಟಿಯವರ ಸ್ಮರಣಾರ್ಥ ನೀಡಲಾಗುವ ‘ಬೊಂಡಾಲ ಪ್ರಶಸ್ತಿ’ಗೆ ಕಟೀಲು ಮೇಳದ ಕಲಾವಿದ, ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕುಂಜ ಇವರು ಆಯ್ಕೆಯಾಗಿದ್ದಾರೆ. ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗಾಗಿ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರು ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆ ಸಮಿತಿ 2024-25ನೇ ಸಾಲಿಗೆ ವಳಕುಂಜರವರ ಹೆಸರನ್ನು ಅಂತಿಮಗೊಳಿಸಿದೆ. ಪ್ರಶಸ್ತಿಯು ರೂ.10,000/- ನಗದು, ಶಾಲು, ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.

    ರವಿಶಂಕರ್ ವಳಕುಂಜ :

    ಕಾಸರಗೋಡು ಬದಿಯಡ್ಕದ ನಿವೃತ್ತ ಶಿಕ್ಷಕ ಮತ್ತು ಅರ್ಥಧಾರಿ ದಿ. ಸುಬ್ರಹ್ಮಣ್ಯ ಭಟ್ ಮತ್ತು ಲಕ್ಷ್ಮೀ ಅಮ್ಮ ದಂಪತಿಗೆ ಜನಿಸಿದ ರವಿಶಂಕರ ವಳಕುಂಜ ಇವರು ಕಳೆದ 27 ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಾಟ್ಯಗುರು ಉಂಡೆಮನೆ ಶ್ರೀಕೃಷ್ಣ ಭಟ್ ಇವರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದ ರವಿಶಂಕರ ಭಟ್ ತನ್ನ ಸೋದರಮಾವ ಹಾಸ್ಯರತ್ನ ನಯನ ಕುಮಾರ್ ಇವರಿಂದ ಹಾಸ್ಯಗಾರನ ಪಟ್ಟುಗಳನ್ನು ಕಲಿತುಕೊಂಡರು.

    ಮೊದಲ ಮೂರು ವರ್ಷ ಕಟೀಲು ಒಂದನೇ ಮೇಳದಲ್ಲಿ ವೇಷಧಾರಿಯಾಗಿದ್ದ ಇವರು ಬಳಿಕ ಮುಖ್ಯ ಹಾಸ್ಯಗಾರನಾಗಿ ಭಡ್ತಿ ಪಡೆದು ನಾಲ್ಕನೇ ಮೇಳಕ್ಕೆ ಸೇರ್ಪಡೆಗೊಂಡರು. ಬೊಟ್ಟಿಕೆರೆ ಪುರುಷೋತ್ತಮ ಪೂಂಜ, ಕುಬಣೂರು ಶ್ರೀಧರ ರಾವ್, ಪಟ್ಲ ಸತೀಶ್ ಶೆಟ್ಟಿ, ಕೋಳ್ಯೂರು ರಾಮಚಂದ್ರ ರಾವ್, ಸಂಪಾಜೆ ಶೀನಪ್ಪ ರೈ, ಪೆರುವಾಯಿ ನಾರಾಯಣ ಶೆಟ್ಟಿ, ಮಂಜೇಶ್ವರ ಜನಾರ್ದನ ಜೋಗಿ, ಸುಣ್ಣಂಬಳ ವಿಶ್ವೇಶ್ವರ ಭಟ್, ತೊಡಿಕಾನ ವಿಶ್ವನಾಥ ಗೌಡ ಮೊದಲಾದ ಪ್ರಸಿದ್ಧರ ಒಡನಾಟದಿಂದ ಓರ್ವ ಪ್ರಬುದ್ಧ ಕಲಾವಿದರಾಗಿ ರೂಪುಗೊಂಡರು.

    ಬಾಹುಕ, ಸಂಜಯ, ಅಕ್ರೂರ, ಬೃಹಸ್ಪತಿ, ಮಕರಂದ, ವಿಜಯ, ಮೂಕಾಸುರ, ನಾರದ… ಇತ್ಯಾದಿ ಹಾಸ್ಯ ಪಾತ್ರಗಳಲ್ಲಿ ಅವರದೇ ಆದ ಛಾಪನ್ನು ಮೂಡಿಸಿದ ವಳಕುಂಜರು ಓರ್ವ ಲೇಖಕನಾಗಿ ಮತ್ತು ಯಕ್ಷಗಾನ ಸಂಬಂಧೀ ವಿಷಯಗಳ ಸಂಗ್ರಾಹಕರಾಗಿಯೂ ಕೆಲಸ ಮಾಡಿದ್ದಾರೆ. ಯಕ್ಷಗಾನ ವಾಚಿಕ ಸಮಾರಾಧನೆ (ಭಾಗ 1-2), ಯಕ್ಷಗಾನ ಪ್ರಸಂಗ ದೃಶ್ಯಾವಳೀ (ಭಾಗ 1-2), ಯಕ್ಷ ಪಾತ್ರ ದೀಪಿಕಾ, ಯಕ್ಷಗಾನ ಪ್ರಸಂಗಗಳಲ್ಲಿ ‘ನಾರದ’ – ಹೀಗೆ ಆರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಯಕ್ಷಗಾನ ಕಲಾವಿದರನ್ನು ಸಂದರ್ಶಿಸಿ ಸಿದ್ಧಪಡಿಸಿರುವ ಪುಸ್ತಕ ಮುದ್ರಣ ಹಂತದಲ್ಲಿದೆ. ಯಕ್ಷಗಾನದ ಅಭಿಮಾನಿಗಳು ಮತ್ತು ಸಂಸ್ಥೆಗಳಿಂದ ವಿವಿಧೆಡೆ ಸನ್ಮಾನಿತರಾಗಿರುವ ರವಿಶಂಕರ್ ಪ್ರಸ್ತುತ ಪುತ್ತೂರು ತಾಲೂಕಿನ ಮಾಡಾವಿನಲ್ಲಿ ವಾಸ್ತವ್ಯ ಹೊಂದಿದ್ದಾರೆ.

    ದಿನಾಂಕ 13 ಫೆಬ್ರವರಿ 2025ರಂದು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿ ವತಿಯಿಂದ ಹತ್ತು ಸಮಸ್ತರ ಆಶ್ರಯದಲ್ಲಿ ಕಟೀಲು ಮೇಳದವರಿಂದ ‘ಹನುಮೋದ್ಭವ, ವೀರಮಣಿ ಮತ್ತು ಮಹಿರಾವಣ ಕಾಳಗ’ ಹಾಗೂ ದಿನಾಂಕ 14 ಫೆಬ್ರವರಿ 2025ರಂದು ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ‘ಶ್ರೀದೇವಿ ಮಹಾತ್ಮೆ’ ಸೇವಾ ಬಯಲಾಟಗಳು ನಡೆಯಲಿದ್ದು, ಬಯಲಾಟದ ರಂಗಸ್ಥಳದಲ್ಲಿ ಜರಗುವ ದಿ. ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸ್ಥಳೀಯ ಶಾಸಕರು, ಲೋಕಸಭಾ ಸದಸ್ಯರು, ಕಟೀಲು ಕ್ಷೇತ್ರದ ಆಸ್ರಣ್ಣರು ಮತ್ತು ವಿಶೇಷ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು ಎಂದು ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ತಿಳಿಸಿರುತ್ತಾರೆ.

    award yakshagana
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ಕರ್ನಾಟಕದ ಸಾಹಿತ್ಯ ಕಣಜ ಜಿ. ಎಸ್. ಶಿವರುದ್ರಪ್ಪ
    Next Article ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಮತ್ತು ಪ್ರದರ್ಶನ | ಕೊನೆಯ ದಿನಾಂಕ ಫೆಬ್ರವರಿ 15
    roovari

    Add Comment Cancel Reply


    Related Posts

    ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ‘ತಿಂತಿಣಿ ಮೌನೇಶ್ವರ’ | ಆಗಸ್ಟ್ 03

    July 30, 2025

    ಡಾ. ಎಚ್.ವಿ. ನಾಗರಾಜ ರಾವ್ ಇವರಿಗೆ 2025ರ ‘ಸೇಡಿಯಾಪು ಪ್ರಶಸ್ತಿ’

    July 30, 2025

    ಬಂಟ್ವಾಳದಲ್ಲಿ ಕುಬಣೂರು ಶ್ರೀಧರ ರಾವ್ ಸ್ಮರಣೆ ಹಾಗೂ ತಾಳಮದ್ದಳೆ

    July 29, 2025

    ಬೆಳ್ತಂಗಡಿಯಲ್ಲಿ ಯಕ್ಷಸಾಂಗತ್ಯ ತಾಳಮದ್ದಳೆ ಸಪ್ತಾಹ ‘ಯಕ್ಷಾವತರಣ – 6’ | ಆಗಸ್ಟ್ 04ರಿಂದ 10

    July 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.