Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬನಾರಿಯಲ್ಲಿ ಕೀರಿಕ್ಕಾಡು ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಹಾಗೂ ಯಕ್ಷಗಾನ ತಾಳಮದ್ದಳೆ
    Literature

    ಬನಾರಿಯಲ್ಲಿ ಕೀರಿಕ್ಕಾಡು ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಹಾಗೂ ಯಕ್ಷಗಾನ ತಾಳಮದ್ದಳೆ

    October 2, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಮೊದಲಿಗೆ ಸ್ಥಳ ಸಾನಿಧ್ಯ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆ ಸಲ್ಲಿಸಿದ ಬಳಿಕ ಕೀರಿಕ್ಕಾಡು ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಹಾಗೂ ಯಕ್ಷಗಾನ ತಾಳಮದ್ದಳೆಯು ದಿನಾಂಕ 28-09-2024ನೇ ಶನಿವಾರದಂದು ನಡೆಯಿತು.

    ಶಾಂತಕುಮಾರಿ ದೇಲಂಪಾಡಿ, ಉಷಾಕಾವೇರಿ ಗುಡ್ಡಡ್ಕ, ಪೂರ್ಣಿಮಾ ಬನಾರಿ, ಈಶ್ವರಿ ಪೃಥ್ವಿ ಅವರು ಭಗವದ್ಗೀತಾ ಪಾರಾಯಣವನ್ನು ನಡೆಸಿಕೊಟ್ಟರು. ನಂತರ ಪೂಜಾ ಸಿ.ಎಚ್. ದೇಲಂಪಾಡಿ ಇವರ ನಿರೂಪಣೆಯೊಂದಿಗೆ ಆರಂಭಗೊಂಡ ಸಂಸ್ಮರಣೆ ಸಭೆಯಲ್ಲಿ ಶ್ರೀಮತಿ ಜಯಂತಿ ಗುಂಡ್ಯಡ್ಕ ಪ್ರಾರ್ಥನಾಗೀತೆಯನ್ನು ಹಾಡಿದರು. ಶ್ರೀಮತಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಸ್ವಾಗತಿಸಿದರು. ಕಲಾ ಸಂಘದ ಅಧ್ಯಕ್ಷರಾದ ಹಿರಿಯ ಸಾಹಿತಿ ಡಾ. ರಮಾನಂದ ಬನಾರಿಯವರು ಪ್ರಾಸ್ತವಿಕ ನುಡಿಗಳೊಂದಿಗೆ ಸಂದರ್ಭೋಚಿತ ಮಾತುಗಳನ್ನಾಡಿ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು.

    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿದ್ವಾಂಸ ಅರ್ಥಧಾರಿ ವೆಂಕಟೇಶ್ ಕುಮಾರ್ ಉಳುವಾನ ಇವರು ಮಾತನಾಡುತ್ತಾ ಬನಾರಿ ಕಲಾ ಸಂಘದ ಚಟುವಟಿಕೆ ಮತ್ತು ನಿರಂತರತೆಯನ್ನು ಶ್ಲಾಘಿಸಿದರು. ಸಂಘದ ಹಿರಿಯ ಕಲಾವಿದ ಬೆಳ್ಳಿಪ್ಪಾಡಿ ಸದಾಶಿವ ರೈ ಇವರು ಕೀರ್ತಿಶೇಷ ಕೀರಿಕ್ಕಾಡು ಸುಬ್ರಹ್ಮಣ್ಯ ಭಟ್ಟರ ಸಂಸ್ಮರಣೆಗೈಯುತ್ತಾ ಅವರ ಕಲೋಪಾಸನೆಯ ಶ್ರೀಮಂತಿಕೆಯನ್ನು ಅನಾವರಣಗೊಳಿಸಿದರು. ಕಾರ್ಯಕ್ರಮವನ್ನು ಆಯೋಜಿಸಿದ ಕೀರಿಕ್ಕಾಡು ನಾರಾಯಣ ಭಟ್ ಬಾಳಿಲ ಎಲ್ಲರನ್ನೂ ಅಭಿನಂದಿಸಿ ತನ್ನ ತೀರ್ಥರೂಪರ ಕಲಾ ಜೀವನದ ಪರಿಚಯಾತ್ಮಕ ಕೃತಿಯೊಂದನ್ನು ಪ್ರಕಟಿಸುವ ವಿಚಾರವನ್ನು ಸಭೆಯ ಮುಂದಿಟ್ಟು ಮಾತನಾಡಿದರು.

    ಭಾಗವತ ಗುರುಗಳಾದ ವಿಶ್ವವಿನೋದ ಬನಾರಿಯವರ ಸಂಯೋಜನೆಯಲ್ಲಿ ‘ಅತಿಕಾಯ ಮೋಕ್ಷ’ ಎಂಬ ಯಕ್ಷಗಾನ ತಾಳಮದ್ದಳೆ ಅತ್ಯಂತ ಮನೋಹರವಾಗಿ ಮೂಡಿಬಂತು. ಭಾಗವತಿಕೆಯಲ್ಲಿ ಮೋಹನ ಮೆಣಸಿನಕಾನ ಮತ್ತು ನಿತೀಶ್ ಕುಮಾರ್ ಎಂಕಣ್ಣಮೂಲೆ, ಚೆಂಡೆಮದ್ದಳೆ ವಾದಕರಾಗಿ ಕುಮಾರ ಸುಬ್ರಹ್ಮಣ್ಯ ಭಟ್ ವಳಕುಂಜ, ಮಂಡೆಕೂಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಶ್ರೀ ಸ್ಕಂದ ದಿವಾಣ, ಕಲ್ಲಡ್ಕ ಶಿವರಾಮ ಕಲ್ಲೂರಾಯ, ಬಿ.ಎಚ್. ವೆಂಕಪ್ಪ ಗೌಡ ಕಾಣಿಸಿಕೊಂಡರು. ಅರ್ಥಧಾರಿಗಳಾಗಿ ಡಾ. ರಮಾನಂದ ಬನಾರಿ, ದಿವಾಣ ಶಿವಶಂಕರ ಭಟ್, ಡಾ. ಸೂರ್ಯನಾರಾಯಣ ಭಟ್ ಪುತ್ತೂರು, ವೆಂಕಟೇಶ್ ಕುಮಾರ್ ಉಳುವಾನ, ಕೀರಿಕ್ಕಾಡು ಗಣೇಶ್ ಶರ್ಮ, ಯಂ. ರಮಾನಂದ ರೈ ದೇಲಂಪಾಡಿ, ವೀರಪ್ಪ ಸುವರ್ಣ ನಡುಬೈಲು, ಐತಪ್ಪ ಗೌಡ ಮುದಿಯಾರು, ರಾಮ ನಾಯ್ಕ ದೇಲಂಪಾಡಿ ಇವರು ಭಾಗವಹಿಸಿ ತಾಳಮದ್ದಳೆಯ ಯಶಸ್ಸಿಗೆ ಪಾತ್ರರಾದರು. ಹಿರಿಯ ಯಕ್ಷಗಾನ ಕಲಾವಿದ ಬಾಲಕೃಷ್ಣ ಗೌಡ ದೇಲಂಪಾಡಿ, ಕಲಾರಾಧಕ ಗೋಪಾಲಯ್ಯ ಕೋಟಿಗದ್ದೆ, ಪದ್ಮಾನಾಭರಾವ್ ಮಯ್ಯಾಳ ಸಹಕರಿಸಿದರು. ನಂದ ಕಿಶೋರ ಬನಾರಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಕದಳಿ ಕಲಾ ಕೇಂದ್ರ’ದ 12ನೇ ವಾರ್ಷಿಕೋತ್ಸವ ಪ್ರಯುಕ್ತ ‘ಕದಳಿ ದಶಾಹ’ | ಅಕ್ಟೋಬರ್ 3ರಿಂದ 12
    Next Article ಬೆಂಗಳೂರಿನಲ್ಲಿ ರಾಜ್ಯ ಮಟ್ಟದ 15ನೇ ಕನ್ನಡ ಸಾಹಿತ್ಯ ಸಂಸ್ಕೃತಿ ಸಮಾವೇಶ 2024 | ಅಕ್ಟೋಬರ್ 6
    roovari

    Comments are closed.

    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.