Subscribe to Updates

    Get the latest creative news from FooBar about art, design and business.

    What's Hot

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಮಾರೋಪಗೊಂಡ ‘ಕನಸುಗಳು-2024’ ರಾಜ್ಯ ಮಟ್ಟದ ವಿವಿಧ ಸ್ಪರ್ಧೆಗಳು   
    Competition

    ಸಮಾರೋಪಗೊಂಡ ‘ಕನಸುಗಳು-2024’ ರಾಜ್ಯ ಮಟ್ಟದ ವಿವಿಧ ಸ್ಪರ್ಧೆಗಳು   

    November 20, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ  ಅಹಲ್ಯಾಬಾಯಿ ಹೋಳ್ಕರ್ ವೇದಿಕೆಯಲ್ಲಿ ನಡೆದ ಎರಡು ದಿನದ ‘ಕನಸುಗಳು-2024’  ಕಾರ್ಯಕ್ರಮದ ಸಮಾರೋಪ ಸಮಾರಂಭ ದಿನಾಂಕ 16 ನವೆಂಬರ್ 2024ರಂದು ನಡೆಯತು.
    ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ವಿಶ್ವಾಸ್‌ ಶೆಣೈ ಮಾತನಾಡಿ “ಕನಸುಗಳನ್ನು ಎಲ್ಲರೂ ಕಾಣುತ್ತಾರೆ. ಯಶಸ್ಸು ಸಾಧಿಸಲು ಕನಸು ಬೇಕೇ ಬೇಕು, ಆದರೆ ಕನಸು ನನಸಾಗಲು  ಪ್ರಯತ್ನ ಮತ್ತು ಪರಿಶ್ರಮ ಬಹು ಮುಖ್ಯ. ಪೆನ್ಸಿಲ್‌ ತಪ್ಪು ಬರೆದಾಗ ಇರೇಸರ್‌ ಅದನ್ನು ತಿದ್ದಿ ತೀಡುವ ರೀತಿಯಲ್ಲಿ ಅಧ್ಯಾಪಕರು ಮತ್ತು ಪೋಷಕರು ವಿದ್ಯಾರ್ಥಿಗಳನ್ನು ತಿದ್ದಿ, ಗುರಿಯತ್ತ ಚಲಿಸುವಂತೆ ಮಾಡುತ್ತಾರೆ. ಹಾಗಾಗಿ ಕನಸು ನನಸಾದ  ಮೇಲೆ ಸಾಧನೆಯ ಹಾದಿಯಲ್ಲಿ ನಿಮ್ಮ ಜೊತೆಗಿದ್ದವರನ್ನು ಮರೆಯಬಾರದು. ಈ ಕಾಲಘಟ್ಟದಲ್ಲಿ ರಾಷ್ಟ್ರಪ್ರೇಮ ಇರುವ ಯುವಶಕ್ತಿ ದೇಶದ ವಿಕಾಸಕ್ಕೆ ಬೇಕು, ಇಂದು ನಮ್ಮ ದೇಶಕ್ಕೆ ನರೇಂದ್ರ ಮೋದಿಯಂತಹ ಸಮರ್ಥ ನಾಯಕ ಸಿಕ್ಕಿದ್ದಾರೆ, ನಾವೂ ಕೂಡಾ ಅವರಂತೆ ರಾಷ್ಟ್ರೀಯತೆ ಬೆಳೆಸಿಕೊಳ್ಳಬೇಕು.” ಎಂದರು.
    ಇನ್ನೋರ್ವಮುಖ್ಯ ಅತಿಥಿ  ಲೇಬಲ್ ಫ್ಯೂಸ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಚಂದನ್ ಶ್ರೀಧರ್ ಮಾತನಾಡಿ “ವಿದ್ಯಾರ್ಥಿಯಾಗಿದ್ದಾಗ ಅಧ್ಯಾಪಕರು ಹೇಳಿ ಕೊಟ್ಟ ಪಾಠಗಳು ಇಂದಿಗೂ ತನ್ನನ್ನು ಕೈ ಹಿಡಿದು ಮುನ್ನಡೆಸುತ್ತಿವೆ, ಹಾಗಾಗಿ ಗುರಿಯ ಕಡೆಗೆ ಹೆಜ್ಜೆ ಇಡುವಂತೆ ಮಾಡಿದ ಗುರುಗಳಿಗೆ ನಾವು ಚಿರಋಣಿಯಾಗಿರಬೇಕು.” ಎಂದು ನುಡಿದರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಕೋಶಾಧಿಕಾರಿಗಳಾದ ಸಚಿನ್ ಶೆಣೈ ಮಾತನಾಡಿ ಸ್ಪರ್ಧೆಗಳಲ್ಲಿ ಭಾಗವಹಿಸುವಾಗ ಸಾಮಾನ್ಯವಾಗಿ ವಿದ್ಯಾರ್ಥಿಗಳು ಗೆಲುವನ್ನು ಮಾತ್ರವೇ ಬಯಸುತ್ತಾರೆ, ಆದರೆ ಫಲಿತಾಂಶದ ಬಗ್ಗೆ ಚಿಂತಿಸುವುದಕ್ಕಿಂತ ಭಾಗವಹಿಸುವಿಕೆ ತುಂಬಾ ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ತಾವು ಪಡೆದ ಅನುಭವಗಳಿಂದ ಧನಾತ್ಮಕವಾಗಿ ಬೆಳೆಯಬೇಕು.” ಎಂದು ಹಿತನುಡಿದರು.
     ಇದೇ ಸಂದರ್ಭದಲ್ಲಿ ಎರಡು ದಿನಗಳಲ್ಲಿ ನಡೆದ 17 ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿದ ಶಾಲಾ ತಂಡಗಳನ್ನು ಗುರುತಿಸಲಾಯಿತು.
    ಕಾರ್ಯಕ್ರಮದಲ್ಲಿ ವಿವೇಕಾನಂದ ವಸತಿ ನಿಲಯಗಳ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಪ್ರಭು ಹಾಗೂ ವಿವೇಕಾನಂದ ಪದವಿಪಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ .ಪಿ, ವಿವೇಕಾನಂದ ಪದವಿಪಪೂರ್ವ ಕಾಲೇಜಿನ   ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರಾದ ಯಂ. ದೇವಿಚರಣ್‌ ರೈ ಉಪಸ್ಥಿತರಿದ್ದರು. ಉಪನ್ಯಾಸಕಿ ದಯಾಮಣಿ ಟಿ. ಕೆ. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಶರ್ಮಿಳಾ ನಿರೂಪಿಸಿ, ಉಪನ್ಯಾಸಕಿ ಪುಷ್ಪಲತಾ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಲೋಕಾರ್ಪಣೆಗೊಂಡ ‘ಕಂದನ ಮುತ್ತು’
    Next Article ಮಕ್ಕಳ ಸಾಹಿತ್ಯ ಕೃತಿಗಳ ಆಹ್ವಾನ | ಡಿಸೆಂಬ‌ರ್ 15
    roovari

    Add Comment Cancel Reply


    Related Posts

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ಖಿದ್ಮಾ ಫೌಂಡೇಶನ್ ಇದರ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ

    June 2, 2025

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.