Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧಾರವಾಡದ ಗ್ರಂಥಮಾಲೆ ಅಟ್ಟದಲ್ಲಿ ಪಂಡಿತ್ ರಾಜೀವ್ ತಾರಾನಾಥರಿಗೆ ನುಡಿ ನಮನ
    Music

    ಧಾರವಾಡದ ಗ್ರಂಥಮಾಲೆ ಅಟ್ಟದಲ್ಲಿ ಪಂಡಿತ್ ರಾಜೀವ್ ತಾರಾನಾಥರಿಗೆ ನುಡಿ ನಮನ

    June 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ದಿನಾಂಕ 11-06-2024ರಂದು  ನಮ್ಮನ್ನಗಲಿದ ಹಿರಿಯ ಸರೋದ್ ಕಲಾವಿದರಾದ ಪಂಡಿತ್ ರಾಜೀವ್ ತಾರಾನಾಥರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 13-06-2024 ರಂದು ಧಾರವಾಡದ ಗ್ರಂಥಮಾಲೆ ಅಟ್ಟದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಮಾತನಾಡಿದ ಪಂಡಿತ್ ವೆಂಕಟೇಶ ಕುಮಾರ್ “ಪಂಡಿತ್ ರಾಜೀವ್ ತಾರಾನಾಥರು ನಮ್ಮ ದೇಶದ ಶ್ರೇಷ್ಠ ಸಂಗೀತಗಾರರು. ಸ್ಪಷ್ಟವಾದಿ, ನೇರ ನಿಷ್ಠುರರಾಗಿದ್ದ ಶ್ರೀಯುತರು ಅತ್ಯುತ್ತಮ ಮಾನವತಾವಾದಿಯೂ ಆಗಿದ್ದರು.  ಉಸ್ತಾದ್ ಅಲಿ ಅಕ್ಬರ್ ಖಾನ್ ಅವರಲ್ಲದೆ, ಅನೇಕ ಗುರುಗಳಿಂದ ಮಾರ್ಗದರ್ಶನ ಪಡೆದಿದ್ದರು. ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುವ ರಾಜೀವ್ ತಾರಾನಾಥರು ಮತ್ತೆ ಈ ಸಂಗೀತ ನಾಡಿನಲ್ಲಿ ಹುಟ್ಟಿಬರಲಿ” ಎಂದು ಆಶಿಸಿದರು.

    ಹಿರಿಯ ಲೇಖಕ ಜಿ. ಸಿ. ತಲ್ಲೂರ ಮಾತನಾಡಿ “ಇಂತಹ ಕಲಾವಿದರು ಅಪರೂಪ. ಸಂಗೀತ ಎಲ್ಲರ ಮನಸ್ಸು ತಟ್ಟಬೇಕು. ಸಂಗೀತದಲ್ಲಿ ಶುದ್ಧತೆ, ಪ್ರಮಾಣ ಬದ್ಧತೆ, ಸಂಸ್ಕೃತಿ, ಸಂಸ್ಕಾರ ಇದೆ. ಅದನ್ನು ಸಾಧಿಸಿ ತೋರಿಸಿದವರು ಪಂ. ರಾಜೀವ ತಾರನಾಥ.” ಎಂದು ಹೇಳಿದರು.

    ರಮಾಕಾಂತ ಜೋಶಿಯವರು ಮಾತನಾಡಿ “ರಾಜೀವ್, ಜಿ. ಬಿ. ಜೋಶಿ ಮತ್ತು ಮನೋಹರ ಗ್ರಂಥಮಾಲೆ ನಂಟು ಆರು ದಶಕಗಳದ್ದು. ಪುನಃ ಪುನಃ ಬಂದು ಸಂತೋಷ ಪಡುತ್ತಿದ್ದರು. ಅವರೊಬ್ಬ ಶ್ರೇಷ್ಠ ವ್ಯಕ್ತಿ. ಎಲ್ಲದರಲ್ಲೂ ಶ್ರೇಷ್ಠ. ಅತ್ಯುತ್ತಮ ವಿಮರ್ಶಕರಾಗಿದ್ದ ಅವರು ಸಾಹಿತ್ಯದಿಂದ ತುಸು ವಿಮುಖರಾಗಿ ಪೂರ್ತಿಯಾಗಿ ಸಂಗೀತದತ್ತ ವಾಲಿ ಭಾರತದ ಶ್ರೇಷ್ಠ ಸರೋದ್ ವಾದಕರಲ್ಲಿ ಒಬ್ಬರಾದರು. ಅವರ ಅಗಲುವಿಕೆಯಿಂದ ಧಾರವಾಡಕ್ಕೆ, ವಿಶೇಷವಾಗಿ ಮನೋಹರ ಗ್ರಂಥಮಾಲೆಗೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

    ಸಭೆಯಲ್ಲಿ ಉಪಸ್ಥಿತರಿದ್ದ ಶ್ಯಾಮಸುಂದರ ಬಿದರಕುಂದಿ, ವಿ. ಟಿ. ನಾಯಕ, ಶಂಕರ ಕುಂಬಿ, ಪ್ರಕಾಶ ಗರುಡ, ಶ್ರೀನಿವಾಸ ವಾಡಪ್ಪಿ, ಕೃಷ್ಣಾ ಕಟ್ಟಿ, ಶಶಿಧರ ನರೇಂದ್ರ,  ಅರಣ್ಯ ಕುಮಾರ, ಜಯಂತ, ವೀರಣ್ಣ ಪತ್ತಾರ, ಶ್ರೀಮತಿ ಸುಜಾತಾ ಗುರವ,  ಮೊದಲಾದವರು ಮಾತನಾಡಿ ತಮ್ಮ ಗೌರವ ನಮನವನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಅಶೋಕ ಮೊಕಾಶಿ, ಸಮೀರ ಜೋಶಿ, ಶ್ರೀಮತಿ ಸಾಧನಾ ಮಿರಜಕರ, ಎಸ್. ಎನ್. ದೇಶಪಾಂಡೆ, ವಿಶ್ವನಾಥ ಕೋಳಿವಾಡ ಮೊದಲಾದವರು ಉಪಸ್ಥಿತರಿದ್ದರು. ಹ. ವೆಂ. ಕಾಖಂಡಿಕಿ ಕಾರ್ಯಕ್ರಮ ನಿರ್ವಹಿಸಿದರು. ಮೃತರಿಗೆ ಒಂದು ನಿಮಿಷದ ಮೌನ ಆಚರಿಸಿ ಗೌರವ ಸಲ್ಲಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮಸ್ಕತ್‌ನಲ್ಲಿ ಶ್ರೀದೇವಿ ಮಹಾತ್ಮೆ…
    Next Article ಉಡುಪಿಯಲ್ಲಿ ಶಾಂತಿ ಮತ್ತು ಪ್ರೀತಿಗಾಗಿ ನೃತ್ಯ ಕಾರ್ಯಕ್ರಮ | ಜೂನ್ 16
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ಆಲಾಪ್’ ಶಾಸ್ತ್ರೀಯ ಸಂಗೀತ ಕಛೇರಿ | ಮೇ 10

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.