Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧಾರವಾಡದ ಗ್ರಂಥಮಾಲೆ ಅಟ್ಟದಲ್ಲಿ ಪಂಡಿತ್ ರಾಜೀವ್ ತಾರಾನಾಥರಿಗೆ ನುಡಿ ನಮನ
    Music

    ಧಾರವಾಡದ ಗ್ರಂಥಮಾಲೆ ಅಟ್ಟದಲ್ಲಿ ಪಂಡಿತ್ ರಾಜೀವ್ ತಾರಾನಾಥರಿಗೆ ನುಡಿ ನಮನ

    June 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ದಿನಾಂಕ 11-06-2024ರಂದು  ನಮ್ಮನ್ನಗಲಿದ ಹಿರಿಯ ಸರೋದ್ ಕಲಾವಿದರಾದ ಪಂಡಿತ್ ರಾಜೀವ್ ತಾರಾನಾಥರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 13-06-2024 ರಂದು ಧಾರವಾಡದ ಗ್ರಂಥಮಾಲೆ ಅಟ್ಟದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಮಾತನಾಡಿದ ಪಂಡಿತ್ ವೆಂಕಟೇಶ ಕುಮಾರ್ “ಪಂಡಿತ್ ರಾಜೀವ್ ತಾರಾನಾಥರು ನಮ್ಮ ದೇಶದ ಶ್ರೇಷ್ಠ ಸಂಗೀತಗಾರರು. ಸ್ಪಷ್ಟವಾದಿ, ನೇರ ನಿಷ್ಠುರರಾಗಿದ್ದ ಶ್ರೀಯುತರು ಅತ್ಯುತ್ತಮ ಮಾನವತಾವಾದಿಯೂ ಆಗಿದ್ದರು.  ಉಸ್ತಾದ್ ಅಲಿ ಅಕ್ಬರ್ ಖಾನ್ ಅವರಲ್ಲದೆ, ಅನೇಕ ಗುರುಗಳಿಂದ ಮಾರ್ಗದರ್ಶನ ಪಡೆದಿದ್ದರು. ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುವ ರಾಜೀವ್ ತಾರಾನಾಥರು ಮತ್ತೆ ಈ ಸಂಗೀತ ನಾಡಿನಲ್ಲಿ ಹುಟ್ಟಿಬರಲಿ” ಎಂದು ಆಶಿಸಿದರು.

    ಹಿರಿಯ ಲೇಖಕ ಜಿ. ಸಿ. ತಲ್ಲೂರ ಮಾತನಾಡಿ “ಇಂತಹ ಕಲಾವಿದರು ಅಪರೂಪ. ಸಂಗೀತ ಎಲ್ಲರ ಮನಸ್ಸು ತಟ್ಟಬೇಕು. ಸಂಗೀತದಲ್ಲಿ ಶುದ್ಧತೆ, ಪ್ರಮಾಣ ಬದ್ಧತೆ, ಸಂಸ್ಕೃತಿ, ಸಂಸ್ಕಾರ ಇದೆ. ಅದನ್ನು ಸಾಧಿಸಿ ತೋರಿಸಿದವರು ಪಂ. ರಾಜೀವ ತಾರನಾಥ.” ಎಂದು ಹೇಳಿದರು.

    ರಮಾಕಾಂತ ಜೋಶಿಯವರು ಮಾತನಾಡಿ “ರಾಜೀವ್, ಜಿ. ಬಿ. ಜೋಶಿ ಮತ್ತು ಮನೋಹರ ಗ್ರಂಥಮಾಲೆ ನಂಟು ಆರು ದಶಕಗಳದ್ದು. ಪುನಃ ಪುನಃ ಬಂದು ಸಂತೋಷ ಪಡುತ್ತಿದ್ದರು. ಅವರೊಬ್ಬ ಶ್ರೇಷ್ಠ ವ್ಯಕ್ತಿ. ಎಲ್ಲದರಲ್ಲೂ ಶ್ರೇಷ್ಠ. ಅತ್ಯುತ್ತಮ ವಿಮರ್ಶಕರಾಗಿದ್ದ ಅವರು ಸಾಹಿತ್ಯದಿಂದ ತುಸು ವಿಮುಖರಾಗಿ ಪೂರ್ತಿಯಾಗಿ ಸಂಗೀತದತ್ತ ವಾಲಿ ಭಾರತದ ಶ್ರೇಷ್ಠ ಸರೋದ್ ವಾದಕರಲ್ಲಿ ಒಬ್ಬರಾದರು. ಅವರ ಅಗಲುವಿಕೆಯಿಂದ ಧಾರವಾಡಕ್ಕೆ, ವಿಶೇಷವಾಗಿ ಮನೋಹರ ಗ್ರಂಥಮಾಲೆಗೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

    ಸಭೆಯಲ್ಲಿ ಉಪಸ್ಥಿತರಿದ್ದ ಶ್ಯಾಮಸುಂದರ ಬಿದರಕುಂದಿ, ವಿ. ಟಿ. ನಾಯಕ, ಶಂಕರ ಕುಂಬಿ, ಪ್ರಕಾಶ ಗರುಡ, ಶ್ರೀನಿವಾಸ ವಾಡಪ್ಪಿ, ಕೃಷ್ಣಾ ಕಟ್ಟಿ, ಶಶಿಧರ ನರೇಂದ್ರ,  ಅರಣ್ಯ ಕುಮಾರ, ಜಯಂತ, ವೀರಣ್ಣ ಪತ್ತಾರ, ಶ್ರೀಮತಿ ಸುಜಾತಾ ಗುರವ,  ಮೊದಲಾದವರು ಮಾತನಾಡಿ ತಮ್ಮ ಗೌರವ ನಮನವನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಅಶೋಕ ಮೊಕಾಶಿ, ಸಮೀರ ಜೋಶಿ, ಶ್ರೀಮತಿ ಸಾಧನಾ ಮಿರಜಕರ, ಎಸ್. ಎನ್. ದೇಶಪಾಂಡೆ, ವಿಶ್ವನಾಥ ಕೋಳಿವಾಡ ಮೊದಲಾದವರು ಉಪಸ್ಥಿತರಿದ್ದರು. ಹ. ವೆಂ. ಕಾಖಂಡಿಕಿ ಕಾರ್ಯಕ್ರಮ ನಿರ್ವಹಿಸಿದರು. ಮೃತರಿಗೆ ಒಂದು ನಿಮಿಷದ ಮೌನ ಆಚರಿಸಿ ಗೌರವ ಸಲ್ಲಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮಸ್ಕತ್‌ನಲ್ಲಿ ಶ್ರೀದೇವಿ ಮಹಾತ್ಮೆ…
    Next Article ಉಡುಪಿಯಲ್ಲಿ ಶಾಂತಿ ಮತ್ತು ಪ್ರೀತಿಗಾಗಿ ನೃತ್ಯ ಕಾರ್ಯಕ್ರಮ | ಜೂನ್ 16
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026

    ಪುತ್ತೂರಿನಲ್ಲಿ ‘ಕುಮಾರವ್ಯಾಸ ಜಯಂತಿ’ ಆಚರಣೆಯ ಪ್ರಯುಕ್ತ ಗಮಕ ವಾಚನ- ವ್ಯಾಖ್ಯಾನ

    January 12, 2026

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.