Subscribe to Updates

    Get the latest creative news from FooBar about art, design and business.

    What's Hot

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ವತಿಯಿಂದ ಸಾಧಕರಿಗೆ ಗೌರವ ಸನ್ಮಾನ
    Bharathanatya

    ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ವತಿಯಿಂದ ಸಾಧಕರಿಗೆ ಗೌರವ ಸನ್ಮಾನ

    January 31, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಳ್ಳಾಲ : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ವತಿಯಿಂದ ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮವು ಕುತ್ತಾರಿನ ಹೊಟೇಲ್ ವೆಜಿನೇಷನ್ ಸಭಾಂಗಣದಲ್ಲಿ ದಿನಾಂಕ 25-11-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕ.ಸಾ.ಪ. ಜಿಲ್ಲಾ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಮಾತನಾಡಿ “ಸಮಾಜ ಕಟ್ಟುವ ಕೆಲಸ ನಮ್ಮಿಂದ ಆಗಬೇಕಾಗಿದೆ. ನೃತ್ಯ ಕ್ಷೇತ್ರದಲ್ಲಿ ಹಾಗೂ ಸಾಮಾಜಿಕವಾಗಿ ಸಾಧನೆಗಳನ್ನು ಮಾಡಿದ ಸಾಧಕರು ಜಿಲ್ಲಾಡಳಿತದಿಂದ ಗುರುತಿಸಲ್ಪಟ್ಟು, ಇದೀಗ ಅಬ್ಬಕ್ಕ ಉತ್ಸವ ಸಮಿತಿ ಅವರನ್ನು ಅಭಿನಂದಿಸುವ ಕಾರ್ಯಕ್ರಮವು ಮಹತ್ತರವಾದದ್ದು” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯ ರತ್ನ ವಿದ್ವಾನ್ ಮೋಹನ್ ಕುಮಾರ್ ಇವರನ್ನು ತಮ್ಮ 90ನೇ ವರ್ಧಂತಿ ಅಂಗವಾಗಿ ಹಾಗೂ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನೃತ್ಯ ಗುರುಗಳಾದ ವಿದ್ವಾನ್ ಪ್ರಮೋದ್ ಉಳ್ಳಾಲ್ ಮತ್ತು ಪ್ರಖ್ಯಾತ ಶಿಲ್ಪ ಕಲಾಕಾರರಾದ ಕಲಾರತ್ನ ಉಮೇಶ್ ಬೋಳಾರ್ ಅವರನ್ನು ಸನ್ಮಾನಿಸಲಾಯಿತು. ಡಾ. ದೇವಕಿ .ಆರ್ ಉಳ್ಳಾಲ್, ಶ್ರೀಮತಿ ಶಶಿಕಾಂತಿ ಉಳ್ಳಾಲ್ ಹಾಗೂ ಶ್ರೀ ಮತಿ ಅನುಪಮ ಸನ್ಮಾನಿತರ ಪರಿಚಯ ಮಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯರತ್ನ ಮೋಹನ್ ಕುಮಾರ್ ಅವರು, “ನೃತ್ಯ ಎಂಬುದು ಒಬ್ಬರ ಸೊತ್ತಲ್ಲ. ಎಲ್ಲರೂ ಕಲಿಯುವಂತಾಗಬೇಕು. ಪವಿತ್ರವಾದ ಕಲೆ ವೇದದಿಂದ ಬಂದಿದ್ದು, ಅದನ್ನು ಉಳಿಸಿ ಬೆಳೆಸುವ ಕಾರ್ಯ ಯುವಪೀಳಿಗೆಯದ್ದಾಗಿದೆ” ಎಂದು ಹೇಳಿದರು.

    ಮಾಜಿ ಶಾಸಕ ಜಯರಾಮ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಬ್ಬಕ್ಕ ಉತ್ಸವ ಸಮಿತಿಯ ಕೋಶಾಧಿಕಾರಿ ಆನಂದ ಅಸೈಗೋಳಿ, ಸದಸ್ಯ ಆಲಿಯಬ್ಬ, ಮಹೇಶ್, ಸದಾನಂದ ಬಂಗೇರ, ಜಾನಕಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದಿನಕರ ಉಳ್ಳಾಲ್ ಸ್ವಾಗತಿಸಿ, ಕೆ.ಎಂ.ಕೆ. ಮಂಜನಾಡಿ ಧನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಭದ್ರಾವತಿಯಲ್ಲಿ ವಿದ್ಯಾರ್ಥಿಗಳಿಗಾಗಿ ವಾಚನಾಭಿರುಚಿ ಕಮ್ಮಟ ಸಾಹಿತ್ಯ-ಸಂವಾದ-ಕುಶಲತೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ
    Next Article ಶಾರದಾ ವಿದ್ಯಾಲಯದಲ್ಲಿ ‘ರಾಮಕಥಾ ವೈವಿಧ್ಯ’ | ಫೆಬ್ರವರಿ 3
    roovari

    Add Comment Cancel Reply


    Related Posts

    ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13

    May 12, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ನೃತ್ಯ ಭಾನು’ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ | ಮೇ 09

    May 6, 2025

    ಮಂಗಳೂರಿನ ಪುರಭವನದಲ್ಲಿ ಕುಮಾರಿ ಕಿಯಾರಾ ಆ್ಯಶ್ಲಿನ್ ಪಿಂಟೋ ಇವರ ಶಾಸ್ತ್ರೀಯ ನೃತ್ಯ ರಂಗಪ್ರವೇಶ | ಮೇ 04

    May 1, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.