Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡು ಕನ್ನಡ ಗ್ರಾಮದ ಪುಸ್ತಕಹಬ್ಬ, ಪುಸ್ತಕದಾನ, ಶ್ರೇಷ್ಠದಾನ ಯೋಜನೆಗೆ 38 ಕೃತಿಗಳ ಕೊಡುಗೆ
    Literature

    ಕಾಸರಗೋಡು ಕನ್ನಡ ಗ್ರಾಮದ ಪುಸ್ತಕಹಬ್ಬ, ಪುಸ್ತಕದಾನ, ಶ್ರೇಷ್ಠದಾನ ಯೋಜನೆಗೆ 38 ಕೃತಿಗಳ ಕೊಡುಗೆ

    February 15, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 27 ಮಾರ್ಚ್ 2025ರಂದು ನಡೆಯುವ ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ -2025 ಮತ್ತು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕನ್ನಡ ಗ್ರಾಮ, ಕಾಸರಗೋಡು ಹಾಗೂ ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ನೇತೃತ್ವದಲ್ಲಿ ಕರ್ನಾಟಕ ಗಡಿನಾಡ ಉತ್ಸವ ಹಾಗೂ ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಬೆಂಗಳೂರು ಕನ್ನಡ ನಾಟಕೋತ್ಸವವನ್ನು ಆಯೋಜಿಸಲಾಗಿದೆ.

    ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ ಕವಿ, ಸಾಹಿತಿಗಳು, ಮುಖ್ಯ ಅತಿಥಿಗಳು, ಕನ್ನಡ ವಿದ್ಯಾರ್ಥಿಗಳಿಗೆ ನೀಡಲು ಪುಸ್ತಕ ಹಬ್ಬ, ಪುಸ್ತಕ ದಾನ – ಶ್ರೇಷ್ಠದಾನ ಸಾಹಿತ್ಯ ಪುಸ್ತಕಗಳ ಕೊಡುಗೆಗಳಿಗೆ ಆಹ್ವಾನ ಎಂದು ಮಾಧ್ಯಮಗಳಲ್ಲಿ ಪ್ರಕಟಗೊಂಡ ಮಾಹಿತಿಯನ್ವಯ ಬೆಳ್ತಂಗಡಿಯ ಮೂಲದ ಮಹಾರಾಷ್ಟ್ರದ ಕಲ್ಯಾಣದ ಲೇಖಕಿ, ಕವಯತ್ರಿ, ಕುಮುದಾ ಡಿ. ಶೆಟ್ಟಿಯವರು 38 ಕೃತಿಗಳ ಕೊಡುಗೆಯನ್ನು ನೀಡಿದ್ದಾರೆ. ಅವರಿಗೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಕೃತಜ್ಞತೆ ಸಲ್ಲಿಸಿದ್ದಾರೆ. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ 25ನೇ ಬೆಳ್ಳಿ ಹಬ್ಬ ವರ್ಷದ ನೆನಪಿಗಾಗಿ 60 ಕನ್ನಡ ಶಾಲಾ ಕಾಲೇಜುಗಳ ಗ್ರಂಥ ಭಂಡಾರಕ್ಕೆ ನಾಡಿನ ಕವಿ, ಸಾಹಿತಿ, ಲೇಖಕರು, ಬರಹಗಾರರು, ಮಾಧ್ಯಮದವರು, ಪ್ರಕಾಶಕರು ಹಾಗೂ ಸಂಘ ಸಂಸ್ಥೆಗಳು, ಮಠ, ಆಶ್ರಮ, ದೇವಸ್ಥಾನಗಳು, ಉದಾರವಾಗಿ ನೀಡಿದ ಸಾಹಿತ್ಯ ಕೃತಿಗಳನ್ನು ಪುಸ್ತಕ ಹಬ್ಬ, ಪುಸ್ತಕದಾನ, ಶ್ರೇಷ್ಠ ದಾನ ಯೋಜನೆಯನ್ವಯ ಗ್ರಂಥಗಳನ್ನು ಹಸ್ತಾಂತರಿಸಲಾಗುವುದು.

    ಈ ಕಾಸರಗೋಡು ಕನ್ನಡ ಗ್ರಾಮದ ಪುಸ್ತಕ ಹಬ್ಬ ಪುಸ್ತಕದಾನ ಶ್ರೇಷ್ಠದಾನ ಯೋಜನೆಗೆ ಸಾಹಿತ್ಯ ಕೃತಿಗಳು, ಪುಸ್ತಕಗಳನ್ನು ನೀಡುವುದರೊಂದಿಗೆ, ತಾವು ಉದಾರವಾಗಿ ಧನ ಸಹಾಯ ನೀಡಿ ಪ್ರೋತ್ಸಾಹಿಸಿ ನಮ್ಮೊಂದಿಗೆ ಕೈಜೋಡಿಸಲು ಅವಕಾಶ ನೀಡಲಾಗುವುದು. ಈ ಪುಸ್ತಕದಾನ ಯೋಜನೆಗೆ ಧನ ಸಹಾಯ ನೀಡಿ ಪ್ರೋತ್ಸಾಹಿಸುವವರು ಶಿವರಾಮ ಕಾಸರಗೋಡು ಗೂಗಲ್ ಪೇ ನಂಬ್ರ : 9448572016 ಇಲ್ಲಿಗೆ ಪಾವತಿಸಬಹುದು. ಮಂಗಳೂರು ಸಂಪರ್ಕ ವಿಳಾಸ : ಶಿವರಾಮ ಕಾಸರಗೋಡು, ಶ್ರೀ ಮಹಾಮಾಯಾ, ವೈಧ್ಯನಾಥ ನಗರ, 1ನೇ ಮುಖ್ಯ ಅಡ್ಡ ರಸ್ತೆ, ಮಾಡೂರು ಅಂಚೆ, ಕೋಟೆಕಾರು, ಉಳ್ಳಾಲ ತಾಲೂಕು -575022 ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ. ಮೊಬೈಲ್ : 9448572016, 9901951965.

    Literature
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಗಿರಿನಗರದ ದೇವ ಕೃಪಾ ಆಡಿಟೋರಿಯಂನಲ್ಲಿ ಸಂಗೀತ ಕಾರ್ಯಕ್ರಮ | ಫೆಬ್ರವರಿ 19
    Next Article ಅಂಬಾತನಯ ಮುದ್ರಾಡಿ ಸಂಸ್ಮರಣಾ ಪುಸ್ತಕ ಪ್ರಶಸ್ತಿಗೆ ‘ಸಾಕುತಂದೆ ರೂಮಿ’ ನಾಟಕ ಕೃತಿ ಆಯ್ಕೆ
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.