Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಂ. ಜಿ. ಎಂ. ಕಾಲೇಜಿನಲ್ಲಿ ಕವಿ ಡುಂಡಿರಾಜ್ ರೊಂದಿಗೆ ಮಾತುಕತೆ
    Literature

    ಎಂ. ಜಿ. ಎಂ. ಕಾಲೇಜಿನಲ್ಲಿ ಕವಿ ಡುಂಡಿರಾಜ್ ರೊಂದಿಗೆ ಮಾತುಕತೆ

    March 26, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ, ಐ. ಕ್ಯು. ಎಸಿ. ಹಾಗೂ ಕನ್ನಡ ವಿಭಾಗ ಎಂ. ಜಿ. ಎಂ. ಕಾಲೇಜು ಉಡುಪಿ ಇದರ ಆಶ್ರಯದಲ್ಲಿ ದಿ. ಡಾ. ಉಪ್ಪಂಗಳ ರಾಮ ಭಟ್ ನೆನಪು, ಪುಸ್ತಕ ವಿತರಣೆ ಹಾಗೂ ಪ್ರಸಿದ್ಧ ಕವಿ ಡುಂಡಿರಾಜ್ ಅವರೊಂದಿಗೆ ಮಾತುಕತೆ ಕಾರ್ಯಕ್ರಮ ದಿನಾಂಕ 22 ಮಾರ್ಚ್ 2025ರ ಶನಿವಾರ ಎಂ. ಜಿ. ಎಂ. ಕಾಲೇಜಿನ ಎ. ವಿ. ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಚುಟುಕು ಕವಿ, ಸಾಹಿತಿ ಎಚ್. ಡುಂಡಿರಾಜ್ ಮಾತನಾಡಿ “ಶಿಕ್ಷಣ ನಮಗೆ ಬದುಕಲು ದಾರಿ ತೋರಿಸಿದರೆ ಸಾಹಿತ್ಯ ಮತ್ತು ಕಲೆ ನಮ್ಮ ವ್ಯಕ್ತಿತ್ವ ವಿಕಸನಕ್ಕೆ ದಾರಿ ತೋರಿಸಿದೆ. ಕವನಗಳು ಹುಟ್ಟುವುದು ಆಕಸ್ಮಿಕವಾದರೂ ಕೂಡ, ಕವಿಯ ಭಾವನೆಗಳು ಅದರಲ್ಲಿ ಅಡಕವಾಗಿರುತ್ತವೆ. ಕವಿಗೆ ಸರಿಯಾದ ಕಾವ್ಯ ಪ್ರಜ್ಞೆಯಿದ್ದಾಗ ಮಾತ್ರ ಉತ್ತಮ ಕವನಗಳು ಹಾಗೂ ಸಾಹಿತ್ಯ ಬರಲು ಸಾಧ್ಯ. ವಿದ್ಯಾರ್ಥಿಗಳು ಓದುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಕವನಗಳನ್ನು ಬರೆಯುವ ಹವ್ಯಾಸ ಈಗಿನಿಂದಲೇ ರೂಡಿಸಿಕೊಂಡಾಗ ಮುಂದಿನ ದಿನಗಳಲ್ಲಿ ಉತ್ತಮ ಸಾಹಿತಿಯಾಗಿ ಗುರುತಿಸಿಕೊಳ್ಳಬಹುದು. ಚುಟುಕುಗಳು ಸಣ್ಣ ಸಣ್ಣ ಪದವಾಗಿದ್ದರೂ ಕೂಡ ಅನೇಕ ರೀತಿಯ ಗಂಭೀರವಾದ ವಿಚಾರಗಳು ಹಾಗೂ ಹಾಸ್ಯದ ವಿಡಂಬನೆಯೊಂದಿಗೆ ಕೂಡಿರುವುದರಿಂದ ಹೆಚ್ಚಿನವರು ಅದನ್ನು ಇಷ್ಟಪಡುತ್ತಾರೆ” ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಮಾತನಾಡಿ “ಈ ರೀತಿ ಕಾರ್ಯಕ್ರಮಗಳು ನಮ್ಮ ಕಾಲೇಜಿನಲ್ಲಿ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಪ್ರಜ್ಞೆ ಹೆಚ್ಚಾಗಲು ಪೂರಕ” ಎಂದರು.

    ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಡಾ. ವಿಶ್ವನಾಥ್ ಪೈ, ಐ. ಕ್ಯೂ. ಎಸಿ. ಸಂಯೋಜಿಕೆ ಶೈಲಜಾ, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಪುತ್ತಿ ವಸಂತ್ ಕುಮಾರ್, ಕ. ಸಾ. ಪ. ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾದ೯ನ್ ಕೊಡವೂರು ಮುಂತಾದವರು ಉಪಸ್ಥಿತರಿದ್ದರು.

    ಕ. ಸಾ. ಪ. ಉಡುಪಿ ತಾಲೂಕು ಅಧ್ಯಕ್ಷರಾದ ರವಿರಾಜ್ ಎಚ್.ಪಿ ಸ್ವಾಗತಿಸಿ, ಪ್ರಸ್ತಾವನೆಗೈದು, ತಾಲೂಕು ಸಂ. ಕಾಯ೯ದಶಿ೯ ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿ, ಸಾಮಾಜಿಕ ಜಾಲತಾಣ ವಿಭಾಗದ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ ವಂದಿಸಿದರು. ಈ ಸಂದರ್ಭ ಡಾ. ಉಪ್ಪಂಗಳ ರಾಮ್ ಭಟ್ ಇವರ ಕೃತಿಗಳನ್ನು ಶಂಕರಿ ರಾಮ ಭಟ್ ವಿದ್ಯಾರ್ಥಿಗಳಿಗೆ
    ವಿತರಿಸಿ ಶುಭ ಹಾರೈಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಲೋಕರ್ಪಣೆಗೊಂಡ ಸಾಹಿತಿ ಶಶಿಲೇಖಾ ಬಿ. ಇವರ ಮೂರು ಕೃತಿಗಳು
    Next Article ಸೂರಿಕುಮೇರು ಕೆ. ಗೋವಿಂದ ಭಟ್ ಇವರಿಗೆ ‘ಯಕ್ಷವಿದ್ಯಾ ಮಾನ್ಯ’ ಪ್ರಶಸ್ತಿ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.