ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ಜಂಟಿ ಆಶ್ರಯದಲ್ಲಿ ‘ಮತ್ತೊಮ್ಮೆ ಕೂತು ಮಾತಾಡುವ’ ಕಾರ್ಯಕ್ರಮವನ್ನು ದಿನಾಂಕ 22 ಮಾರ್ಚ್ 2026ರಂದು ಸಂಜೆ ಗಂಟೆ 4-30ಕ್ಕೆ ಉಡುಪಿಯ ಶಾರದಾ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ‘ರಂಗವಲ್ಲಿ’ ಮನೆಯ ಹಿಂಬಾಗದ ಅಶ್ವತಕಟ್ಟೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಸಿದ್ಧ ರಂಗ ನಿರ್ದೇಶಕ, ರಂಗ ಮಾಂತ್ರಿಕ ಜೀವನ್ ರಾಮ್ ಸುಳ್ಯರವರ ಜೊತೆ ಕೂತು ಮಾತಾಡೋಣ. ಅವರ ರಂಗಾನುಭವ ಜೀವನಾನುಭವಗಳ ಸಿಹಿ ಕಹಿ ಅನುಭವಗಳ ಬಗ್ಗೆ ತಿಳಿಯೋಣ. ಒಂದಷ್ಟು ಹರಟೆ ಹೊಡೆಯೋಣ. ನೀವು ಬನ್ನಿ ನಿಮ್ಮವರನ್ನು ಕರೆತನ್ನಿ.

