Subscribe to Updates

    Get the latest creative news from FooBar about art, design and business.

    What's Hot

    ಗಣೇಶ್ ಕಾಸರಗೋಡು ಇವರಿಗೆ ‘ರಾಷ್ಟ್ರೀಯ ಪ್ರಶಸ್ತಿ’

    August 19, 2025

    ಚೇಳ್ಯಾರು ಗುತ್ತಿನ ಮನೆಯಲ್ಲಿ ಆಗೋಳಿ ಮಂಜಣ್ಣ ನೆಂಪು ಮತ್ತು ಉಪನ್ಯಾಸ ಕಾರ್ಯಕ್ರಮ

    August 19, 2025

    ಕಟೀಲು ಪದವಿ ಪೂರ್ವ ಕಾಲೇಜಿನಲ್ಲಿ ರಂಗಗೀತೆ ಕಾರ್ಯಾಗಾರ

    August 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು.
    Competition

    ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು.

    December 13, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು ದಿನಾಂಕ 09 ಡಿಸೆಂಬರ್ 2024ರ ಸೋಮವಾರದಂದು ಕರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಇದರ ಸಪ್ತಸ್ವರ ವೇದಿಕೆಯಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತಾ ದೇವಿ ಜಿ. ಎಸ್. ಮಾತನಾಡಿ “ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಅಂದರೆ ಅರ್ಧ ಜಯಶಾಲಿಯಾದಂತೆ. ಪಠ್ಯ ವಿಷಯದ ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭೆಯನ್ನು ತೋರಿಸಿ ವಿಜೇತರಾಗಿ.” ಎಂದು ಶುಭ ಹಾರೈಸಿದರು.
    ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಇದರ ಉಪನಿರ್ದೇಶಕರಾದ ಶ್ರೀ ಮಾರುತಿ ಮಾತನಾಡಿ “ಗ್ರಾಮಾಂತರ ಭಾಗದಲ್ಲಿ ಇಂತಹ ಶೈಕ್ಷಣಿಕ ಸಂಸ್ಥೆಯನ್ನು ಕಟ್ಟಿ ಅನೇಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವುದು ಅದ್ಭುತ ಸಾಧನೆಯೇ ಸರಿ. ವಿದ್ಯಾರ್ಥಿಗಳು ಭಾರತದ ಮುಂದಿನ ಆಶಾಕಿರಣಗಳು, ಭವಿಷ್ಯತ್ತಿನಲ್ಲಿ ದೇಶವನ್ನು ಆಳುವವರು, ಆದುದರಿಂದ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು.” ಎಂದರು.
    ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ “ಒಂದು ಉತ್ತಮ ಧ್ಯೇಯೋದ್ದೇಶವನ್ನು ಇಟ್ಟುಕೊಂಡು ಸಂಸ್ಥೆಯನ್ನು ಏಳು ಮಂದಿ ಸಮಾನ ಮನಸ್ಕರು ಸೇರಿ ಕಟ್ಟಿರುವೆವು. ಅದು ಇಂದು ಹೆಮ್ಮರವಾಗಿ ಬೆಳೆಯುವುದಕ್ಕೆ ಎಲ್ಲರೂ ಕಾರಣೀಕರ್ತರು.” ಎಂದು ತಮ್ಮ ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು.
    ವೇದಿಕೆಯಲ್ಲಿ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತಾ ದೇವಿ ಜಿ. ಎಸ್., ಉಪ ನಿರ್ದೇಶಕರಾದ ಶ್ರೀ ಮಾರುತಿ, ತಹಶೀಲ್ದಾರರಾದ ಶ್ರೀ ಪ್ರದೀಪ್ ಆರ್., ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುನೀತಾ ಪೂಜಾರಿ, ಸಂಸ್ಥೆಯ ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್, ಡಾ. ಗಣನಾಥ ಶೆಟ್ಟಿ, ಆದರ್ಶ ಎಂ. ಕೆ. ಹಾಗೂ ಗಣಪತಿ ಭಟ್ ಕೆ. ಎಸ್. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜೀವಶಾಸ್ತ್ರ ವಿಭಾಗದ ಉಪನ್ಯಾಸಕರದ ಶ್ರೀ ಲೋಹಿತ್ ನಿರೂಪಿಸಿ, ವಂದಿಸಿದರು.
    ಅಪರಾಹ್ನ 3.00 ಘಂಟೆಗೆ ಪ್ರಾರಂಭಗೊಂಡ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀ ವರ್ಗೀಸ್ ಪಿ. ಮಾತನಾಡಿ “ಜೀವನದ ಪ್ರತಿ ಹಂತದಲ್ಲೂ ನಾವು ತಿದ್ದಿಕೊಂಡು ಮುನ್ನಡೆಯಬೇಕು. ಸೋಲು ಗೆಲುವಿಗಿಂತ ನಾನು ಏನು ಕಲಿತೆ ಎಂಬುವುದು ಬಹುಮುಖ್ಯ.” ಎಂದು ತಿಳಿಸಿದರು.


    ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀ ದಿನೇಶ್ ಎಂ. ಕೊಡವೂರು ಇವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಘಟಿಸಿದ ಕ್ರಿಯೇಟಿವ್ ಸಂಸ್ಥೆಯ ಎಲ್ಲಾ ಸಂಸ್ಥಾಪಕರುಗಳಿಗೆ ಅಭಿನಂದನೆಗಳನ್ನು ತಿಳಿಸುತ್ತಾ ವಿದ್ಯಾರ್ಥಿಗಳಿಗೆ ಶುಭನುಡಿಗಳನ್ನಾಡಿದರು.
    ಸಹ ಸಂಸ್ಥಾಪಕರಲ್ಲಿ ಓರ್ವರಾದ ಶ್ರೀ ಅಶ್ವತ್ ಎಸ್.ಎಲ್. ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಗಣ್ಯರನ್ನು ಸ್ವಾಗತಿಸಿ “ಶಿಕ್ಷಣ ಕೇವಲ ತರಗತಿ ಕೋಣೆಯಲ್ಲಿ ಕಲಿಯುವ ವಿದ್ಯಾರ್ಜನೆಗೆ ಸೀಮಿತವಾಗಿರದೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಉನ್ನತೀಕರಿಸಿ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಮುಂತಾದ ಎಲ್ಲಾ ವಿಚಾರಗಳನ್ನು ವಿದ್ಯಾರ್ಥಿ ಜೀವನದಲ್ಲಿ ರೂಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮೌಲ್ಯಯುತ ಬದುಕು ನಮ್ಮೆಲ್ಲರದ್ದಾಗಬೇಕು.”. ಎಂದರು.
    ವೇದಿಕೆಯಲ್ಲಿ ಉಪ ನಿರ್ದೇಶಕರಾದ ಶ್ರೀ ಮಾರುತಿ, ಉಡುಪಿ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಶ್ರೀಮತಿ ಸುಚೇತಾ, ಸಂಸ್ಥಾಪಕರುಗಳಾದ ಅಮೃತ್ ರೈ, ವಿಮಲ್ ರಾಜ್ ಜಿ. ಉಪಸ್ಥಿತರಿದ್ದರು.
    ಕಾರ್ಯಕ್ರಮವನ್ನು ಶ್ರೀಮತಿ ಪ್ರಿಯಾಂಕ ನಿರೂಪಿಸಿ, ವಂದಿಸಿ, ವಿಜೇತ ವಿದ್ಯಾರ್ಥಿಗಳ ಪಟ್ಟಿಯನ್ನು ಕನ್ನಡ ಉಪನ್ಯಾಸಕ ಶಿವಕುಮಾರ್ ವಾಚಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ‘ಶ್ರೀ ಆಂಜನೇಯ 56’ | ಡಿಸೆಂಬರ್ 25
    Next Article ಗೋಧೂಳಿಯಲ್ಲಿ ಗಜಲ್ – ಭಜನ್ ಸುಧೆ ಹರಿಸಿದ ಒಸ್ಮಾನ್ ಮೀರ್ ಹಾಗೂ ಅಮೀರ್ ಮೀರ್
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಸಂಸ್ಕೃತಿ ಜಾತ್ರೆ’ | ಆಗಸ್ಟ್ 21

    August 19, 2025

    ಭರತಾಂಜಲಿಯ ತ್ರಿಂಶತ್ ಪ್ರಯುಕ್ತ ‘ನೃತ್ಯ ರತ್ನ ಶೋಧ’ ಭರತನಾಟ್ಯ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 31

    August 18, 2025

    ಕಲಾಂಗಣ್ ನಲ್ಲಿ ‘ಕೊಂಕಣಿ ಮಾನ್ಯತಾ ದಿನಾಚರಣೆ -2025’ | ಆಗಸ್ಟ್ 20

    August 18, 2025

    ಉಡುಪಿಯಲ್ಲಿ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ

    August 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.