Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಾಮಂಜೂರಿನಲ್ಲಿ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಿಗಾಗಿ ಸಾಂಸ್ಕೃತಿಕ ಸ್ಪರ್ಧೆ | ನವೆಂಬರ್ 23
    Competition

    ವಾಮಂಜೂರಿನಲ್ಲಿ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಿಗಾಗಿ ಸಾಂಸ್ಕೃತಿಕ ಸ್ಪರ್ಧೆ | ನವೆಂಬರ್ 23

    November 22, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ವಾಮಂಜೂರು : ಅಂಗವಿಕಲರ ಕಲ್ಯಾಣ ಸಂಸ್ಥೆ (ರಿ.) ಮತ್ತು ಎಸ್.ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇದರ ಆಶ್ರಯದಲ್ಲಿ ದಿನಾಂಕ 23 ನವೆಂಬರ್ 2024ರಂದು ಪೂರ್ವಾಹ್ನ 10-00 ಗಂಟೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಿಗಾಗಿ ಸಾಂಸ್ಕೃತಿಕ ಸ್ಪರ್ಧೆ ‘ಕಲೋತ್ಸವ’ವನ್ನು ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ (ರಿ) ಉಜಿರೆ ಇದರ ಆಡಳಿತಕ್ಕೆ ಒಳಪಟ್ಟ ರಜತ ಮಹೋತ್ಸವದ ಸಂದರ್ಭದಲ್ಲಿ ದಿವಂಗತ ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರ ಸ್ಮರಣಾರ್ಥ ಈ ಸ್ಪರ್ಧೆಯನ್ನು ನಡೆಸಲಾಗುವುದು.

    ಇದರ ಉದ್ಘಾಟನೆಯನ್ನು ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ (ರಿ) ಇದರ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್. ಇವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಮಂಗಳೂರಿನ ಅಂಗವಿಕಲರ ಕಲ್ಯಾಣ ಸಂಸ್ಥೆ (ರಿ) ಇದರ ಕಾರ್ಯದರ್ಶಿಗಳಾದ ಪ್ರೊಫೆಸರ್ ಎ. ರಾಜೇಂದ್ರ ಶೆಟ್ಟಿ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಮಂಗಳೂರು ಪದವು ವಾರ್ಡ್ ಕಾರ್ಪೊರೇಟರ್ ಶ್ರೀ ಭಾಸ್ಕರ್ ಕೆ., ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಸುಚರಿತ ಶೆಟ್ಟಿ, ಅಂಗವಿಕಲರ ಕಲ್ಯಾಣ ಸಂಸ್ಥೆ ರಿಜಿಸ್ಟರ್ ಇದರ ಖಜಾಂಚಿಯಾದ ಡಾ. ಕೆ. ದೇವರಾಜ್, ಸೆಂಟ್ರಲ್ ಆಫೀಸ್ ಯೂನಿಯನ್ ಬ್ಯಾಂಕ್ ಹಿರಿಯ ಪ್ರಬಂಧಕರಾದ ಶ್ರೀ ಸುಧೀಂದ್ರ ಮತ್ತು ಆಡಳಿತ ಮಂಡಳಿ ಸದಸ್ಯರಾದ ಶ್ರೀ ಉದಯಕುಮಾರ್ ಕುಡುಪು ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. ಸುಮಾರು 19 ಶಾಲೆಗಳಿಂದ 240 ಭಿನ್ನ ಸಾಮರ್ಥ್ಯವುಳ್ಳ ಮಕ್ಕಳು ತಮ್ಮ ಕಲಾ ಪ್ರತಿಭೆಯನ್ನು ಈ ಕಲೋತ್ಸವದಲ್ಲಿ ಪ್ರಸ್ತುತಪಡಿಸಲಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಕೇರಳ ಶಾಲಾ ‘ಕಲೋತ್ಸವಂ’ನ ಸಮಾರೋಪ ಸಮಾರಂಭ
    Next Article ಪಲಿಮಾರಿನಲ್ಲಿ ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ‘ನೆಲದುಲಿ’ಯ ಸಮಾರೋಪ ಸಮಾರಂಭ
    roovari

    Add Comment Cancel Reply


    Related Posts

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಕಾರಂತ ಥೀಮ್ ಪಾರ್ಕ್‌ನಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ | ಕೊನೆಯ ದಿನಾಂಕ ಜನವರಿ 20

    January 10, 2026

    ಸುವರ್ಣ ಮಹೋತ್ಸವದ ಅಂಗವಾಗಿ ‘ಭಜನಾ ಸ್ಪರ್ಧಾ ಸಂಭ್ರಮ -2026’ | ಜನವರಿ 11

    January 9, 2026

    ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು | ಜನವರಿ 15

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.