Subscribe to Updates

    Get the latest creative news from FooBar about art, design and business.

    What's Hot

    ‘ದೀಪಾವಳಿ ಕುಟುಂಬ ಮಿಲನ’ದಲ್ಲಿ ನೃತ್ಯ ವೈವಿಧ್ಯ ಮತ್ತು ಪುರಸ್ಕಾರ ಪ್ರದಾನ

    November 5, 2025

    ಮಂಗಳೂರಿನಲ್ಲಿ ಕನಕ ಜಯಂತಿ ಪ್ರಯುಕ್ತ ಏಕವ್ಯಕ್ತಿ ನಾಟಕ ಮತ್ತು ಯಕ್ಷಗಾನ ಪ್ರದರ್ಶನ | ನವೆಂಬರ್ 08

    November 5, 2025

    ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಅಮೋಘ ಯಕ್ಷಗಾನ ಬಯಲಾಟ | ನವೆಂಬರ್ 07

    November 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ದೀಪಾವಳಿ ಕುಟುಂಬ ಮಿಲನ’ದಲ್ಲಿ ನೃತ್ಯ ವೈವಿಧ್ಯ ಮತ್ತು ಪುರಸ್ಕಾರ ಪ್ರದಾನ
    Bharathanatya

    ‘ದೀಪಾವಳಿ ಕುಟುಂಬ ಮಿಲನ’ದಲ್ಲಿ ನೃತ್ಯ ವೈವಿಧ್ಯ ಮತ್ತು ಪುರಸ್ಕಾರ ಪ್ರದಾನ

    November 5, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಡ್ಯಾರ್‌ನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 31 ಅಕ್ಟೋಬರ್ 2025ರಂದು ಸಂಸ್ಕಾರ ಭಾರತೀ ಇದರ ವತಿಯಿಂದ ‘ದೀಪಾವಳಿ ಕುಟುಂಬ ಮಿಲನ’ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಾಗ್ಮಿ ದಾಮೋದರ ಶರ್ಮ “ಭಾರತ ಬೆಳಕಿನ ದೇಶ ಜ್ಞಾನ ಪರಂಪರೆಯಿಂದ ಈ ಬೆಳಕು ಲಭ್ಯವಾಗಿದೆ. ಪ್ರಕೃತಿಯನ್ನು ಪೂಜಿಸುವ ಭಾರತೀಯರು ಭಾವನೆಗಳೊಂದಿಗೆ ಬದುಕನ್ನು ಕಟ್ಟಿಕೊಂಡವರು. ಭಾರತದ ವೈಭವಪೂರ್ಣ ಕಥಾನಕಗಳು, ನಮ್ಮಲ್ಲಿನ ಉನ್ನತವಾದ ಹಾಗೂ ಮೌಲ್ಯಯುತ ಸಂಸ್ಕಾರಗಳು ಈಗಿನ ಮಕ್ಕಳಿಗೆ ಸ್ಫೂರ್ತಿ- ಪ್ರೇರಣೆಯಾಗಬೇಕು. ಈ ನಿಟ್ಟಿನಲ್ಲಿ ಸಂಸ್ಕಾರ ಭಾರತೀ ಸಂಘಟನೆಯ ದೀಪಾವಳಿ ಕುಟುಂಬ ಮಿಲನ ಕಾರ್ಯಕ್ರಮ ಸರ್ವರಿಗೂ ಮಾದರಿ” ಎಂದು ಹೇಳಿದರು.

    ಸಂಸ್ಕಾರ ಭಾರತೀ ಮಂಗಳೂರು ನಗರ ಅಧ್ಯಕ್ಷ ಪುರುಷೋತ್ತಮ ಕೆ. ಭಂಡಾರಿ ಅಧ್ಯಕ್ಷತೆ ವಹಿಸಿದ್ದು, “ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ದಶಕಗಳ ಕಾಲದಿಂದ ದೀಪಾವಳಿ ಹಬ್ಬವನ್ನು ಎಲ್ಲರನ್ನು ಸೇರಿಸಿಕೊಂಡು ಬಹಳ ಅರ್ಥ ಪೂರ್ಣ ಕಾರ್ಯಕ್ರಮ ಸಂಸ್ಕಾರ ಭಾರತೀ ಮಾಡಿಕೊಂಡು ಬರುತ್ತಿದೆ. ಕಲಾವಿದರಿಗೆ ಪುರಸ್ಕಾರ, ಹಬ್ಬದೂಟ ಹೀಗೆ ಎಲ್ಲವನ್ನು ಶಿಸ್ತು ಬದ್ಧವಾಗಿ ಎಲ್ಲರ ಸಹಕಾರದಿಂದ ಆಚರಿಸಿಕೊಂಡು ಬಂದಿದೆ” ಎಂದರು.

    ದೇವಸ್ಥಾನದ ಗೌರವಾಧ್ಯಕ್ಷ ದಿವಾಕರ ನಾಯ್ಕ್ ಅಡ್ಯಾರ್, ಅಧ್ಯಕ್ಷ ರಮೇಶ್ ತುಂಬೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಾಲಕೃಷ್ಣ ಕತ್ತಲ್ ಸಾರ್ ಮತ್ತು ಬಳಗದವರಿಂದ ‘ತುಳುನಾಡ ಬಲೀಂದ್ರ ಲೆಪ್ಪುದ ಪೊರ್ಲು’ ನಡೆಯಿತು. ಸಂಘ ಶತಾಬ್ದ ಸಮಾಜದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಕಾರ ಭಾರತೀ ಸೇವಾ ಪುರಸ್ಕಾರವನ್ನು ಪ್ರದೀಪ್ ಕುಮಾರ್ ಶೆಟ್ಟಿ, ನಾರಾಯಣ ನಾಯ್ಕ್, ಗಜೇಂದ್ರ ಪೂಜಾರಿ, ಮಾಧವ ಉಳ್ಳಾಲ್, ರಮೇಶ್ ಕಾವೂರು, ಧನಂಜಯ ಕೊಟ್ಟಾರಿ ಇವರುಗಳಿಗೆ ನೀಡಲಾಯಿತು. ಈ ಅಭಿನಂದನಾ ಕಾರ್ಯಕ್ರಮ ಡಾ. ಅರುಣ್ ಉಳ್ಳಾಲ್ ನೆರವೇರಿಸಿದರು. ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ, ಭರತಾಂಜಲಿ ಕೊಟ್ಟಾರ ಇವರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ಪ್ರಸ್ತುತಗೊಂಡಿತು. ಶ್ರೀಧರ್ ಹೊಳ್ಳ ವಂದಿಸಿ, ದೀಪಕ್ ಅಡ್ಯಾ‌ರ್ ಕಾರ್ಯಕ್ರಮ ನಿರೂಪಿಸಿದರು.

    baikady bharatanatyam dance felicitation Music roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಕನಕ ಜಯಂತಿ ಪ್ರಯುಕ್ತ ಏಕವ್ಯಕ್ತಿ ನಾಟಕ ಮತ್ತು ಯಕ್ಷಗಾನ ಪ್ರದರ್ಶನ | ನವೆಂಬರ್ 08
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಕನಕ ಜಯಂತಿ ಪ್ರಯುಕ್ತ ಏಕವ್ಯಕ್ತಿ ನಾಟಕ ಮತ್ತು ಯಕ್ಷಗಾನ ಪ್ರದರ್ಶನ | ನವೆಂಬರ್ 08

    November 5, 2025

    ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಅಮೋಘ ಯಕ್ಷಗಾನ ಬಯಲಾಟ | ನವೆಂಬರ್ 07

    November 5, 2025

    ಸಾಲಿಗ್ರಾಮದಲ್ಲಿ ದಿವಂಗತ ವೈಕುಂಠ ಹೆಬ್ಬಾರ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ

    November 5, 2025

    ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ -2026’ಕ್ಕೆ ರಾಷ್ಟ್ರೀಯ ರಂಗತಂಡಗಳ ನಾಟಕಗಳಿಗೆ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 25

    November 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.