ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಸಮೂಹ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ 10ರ ಕಾರ್ಯಕ್ರಮವನ್ನು ದಿನಾಂಕ 25 ಮೇ 2026ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ಆಯೋಜಿಸಲಾಗಿದೆ.
ಉಡುಪಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ನಡೆಯುವ ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಕುದ್ಕಾಡಿ ಪುತ್ತೀರು ಇಲ್ಲಿರುವ ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಕಲ್ಚರ್ (ರಿ.) ಇದರ ವಿದ್ಯಾರ್ಥಿಗಳಿಂದ ಸಂಸ್ಥೆಯ ನಿರ್ದೇಶಕರಾದ ವಿದುಷಿ ನಯನ ವಿ. ರೈ ಮತ್ತು ವಿದುಷಿ ಸ್ವಸ್ತಿಕ ಆರ್. ಶೆಟ್ಟಿ ಇವರ ನಿರ್ದೇಶನದಲ್ಲಿ ನೃತ್ಯಪ್ರದರ್ಶನ ನಡೆಯಲಿದೆ.

