Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ
    Dance

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪೆರಿಯ : ಬೇಕಲ ಗೋಕುಲಂ ಗೋಶಾಲೆಯ ಪರಂಪರಾ ವಿದ್ಯಾಪೀಠದ ಆಶ್ರಯದಲ್ಲಿ ಜರುಗುತ್ತಿರುವ ‘ವೈಶಾಖ ನಟನಂ’ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ದಿನಾಂಕ 9 ಮೇ 2026ರಂದು ಆಂಧ್ರಪ್ರದೇಶದ ನೃತ್ಯ ತಂಡಗಳು ಪ್ರದರ್ಶಿಸಿದ ಕುಚಿಪುಡಿ ನೃತ್ಯವು ಕಲಾ ರಸಿಕರನ್ನು ಭಕ್ತಿ ಮತ್ತು ಆನಂದದ ಪರಾಕಾಷ್ಠೆಗೆ ಕೊಂಡೊಯ್ದವು. ಹೈದರಾಬಾದ್‌ನ ಶಂಕರಿ ನಾಟ್ಯಶಾಲೆ, ಮೆಹರ್ ಪ್ರಭಾಕರ್ ಮತ್ತು ತಂಡ ಹಾಗೂ ತಿರುಪತಿಯ ರೇಖಾ ಸತೀಶ್ ಇವರ ತಂಡಗಳು ಈ ಪವಿತ್ರ ವೇದಿಕೆಯಲ್ಲಿ ಈಗಾಗಲೇ ನೃತ್ಯ ಸಮರ್ಪಣೆ ಮಾಡಿವೆ.

    ಅಮೃತವರ್ಷಿಣಿ ರಾಗದ ಲಯಕ್ಕೆ ತಕ್ಕಂತೆ ಹೆಜ್ಜೆಹಾಕಿದ ಅಮೃತವರ್ಷಿಣಿ ನೃತ್ಯ ವಿದ್ಯಾಲಯದ ಚಿಪ್ಪಿ ಪಿಳ್ಳೆ ಮತ್ತು ತಂಡದ ಪ್ರದರ್ಶನವು ಪ್ರೇಕ್ಷಕರಲ್ಲಿ ಧನ್ಯತಾ ಭಾವ ಮೂಡಿಸಿತು. ಪ್ರಕೃತಿಯೂ ಸ್ಪಂದಿಸುವಂತೆ, ನೃತ್ಯ ಪ್ರದರ್ಶನದ ವೇಳೆ ಬೀಸಿದ ಮಾರುತ ಮತ್ತು ಮಳೆಹನಿಗಳು ಕಾರ್ಯಕ್ರಮಕ್ಕೆ ದೈವಿಕ ಮೆರುಗನ್ನು ನೀಡಿದವು.

    ಆಂಧ್ರಪ್ರದೇಶದ ಆರು ವರ್ಷದ ಬಾಲಕಿ ಆದ್ಯ ಲಕ್ಷ್ಮಿ ಇವರ ಕುಚಿಪುಡಿ ನೃತ್ಯವು ಪ್ರೇಕ್ಷಕರ ವಿಶೇಷ ಗಮನ ಸೆಳೆಯಿತು. ಈ ಬಾರಿಯ ವೈಶಾಖ ನಟನಂ ಉತ್ಸವದ ಅತ್ಯಂತ ಕಿರಿಯ ವಯಸ್ಸಿನ ನೃತ್ಯ ಕಲಾವಿದೆ ಎಂಬ ಕೀರ್ತಿಗೆ ಇವರು ಭಾಜನರಾಗಿದ್ದಾರೆ. ನೃತ್ಯೋತ್ಸವದ ಹತ್ತನೇ ದಿನವಾದ ಭಾನುವಾರ ರಾತ್ರಿ 8-00 ಗಂಟೆಗೆ ಪ್ರಸಿದ್ಧ ನಟಿ ಹಾಗೂ ನೃತ್ಯ ಕಲಾವಿದೆ ರಚನಾ ನಾರಾಯಣನ್‌ಕುಟ್ಟಿ ಇವರಿಂದ ಕುಚಿಪುಡಿ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ. ವೈಶಾಖ ನಟನಂ ಸರಣಿಯಲ್ಲಿ ಇವರು ಸತತ ಮೂರನೇ ವರ್ಷ ನೃತ್ಯ ಪ್ರದರ್ಶಿಸುತ್ತಿರುವುದು ಗಮನಾರ್ಹ.

    baikady dance Kuchipudi Music roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ರಂಗ ನಮನ’
    Next Article ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ
    roovari

    Add Comment Cancel Reply


    Related Posts

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ರಂಗ ನಮನ’

    May 11, 2026

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಮೈಸೂರು ಜಿಲ್ಲಾ ಘಟಕದ ವತಿಯಿಂದ ವಿಚಾರ ಸಂಕಿರಣ

    May 11, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.