Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರು ಕ.ಸಾ.ಪ.ದಿಂದ ದ.ರಾ. ಬೇಂದ್ರೆಯವರ 129ನೆಯ ಜನ್ಮದಿನಾಚರಣೆ
    Literature

    ಬೆಂಗಳೂರು ಕ.ಸಾ.ಪ.ದಿಂದ ದ.ರಾ. ಬೇಂದ್ರೆಯವರ 129ನೆಯ ಜನ್ಮದಿನಾಚರಣೆ

    February 3, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಾಟಾಗಿದ್ದು ವರಕವಿ ದ.ರಾ. ಬೇಂದ್ರೆಯವರ 129ನೆಯ ಜನ್ಮದಿನದ ಕಾರ್ಯಕ್ರಮವು ದಿನಾಂಕ 31 ಜನವರಿ 2025ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಮಾತನಾಡಿ “ಬೇಂದ್ರೆಯವರ ದೃಷ್ಟಿ ‘ಬಡತನ ಸಿರಿತನ ಕಡೇತನಕ ಉಳಿದಾವೇನ’ ಎಂಬುದು. ಅಲ್ಲದೆ ಅವರ ಕಾವ್ಯದ ಮೂಲದೃಷ್ಟಿ – ಎನ್ನಪಾಡೆನಗಿರಲಿ ಅದರ ಹಾಡನ್ನಷ್ಟೇ ನೀಡುವೆನು ರಸಿಕ ನಿನಗೆ – ಎಂಬ ರಸಯೋಗಿಯ ಸಂಕಲ್ಪದಿಂದ ಪ್ರಚೋದಿತವಾದದ್ದು. ‘ರಸವೇ ಜನನ ವಿರಸವೇ ಮರಣ ಸಮರಸವೇ ಜೀವನ’ ಎಂದು ಬದುಕನ್ನು ಎದೆಗಪ್ಪಿಕೊಂಡು ಅರಳಿದ ಕಾವ್ಯಚೇತನ ಅವರದ್ದು. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗುತ್ತ ಹೋಗುವ ಪವಾಡಸದೃಶ ಶಕ್ತಿ. ಬದುಕೇ ಕಾವ್ಯವಾಗುವ ಸಹಜ ಕವಿ ಹೃದಯವನ್ನು ಇಂಥ ಕಡೆ ಗುರುತಿಸಬಹುದು. ಬದುಕಿಗೆ ತೀವ್ರವಾಗಿ ಸ್ಪಂದಿಸುವ ಕವಿಚೇತನವಾದದ್ದರಿಂದಲೇ ಭೃಂಗದ ಬೆನ್ನೇರಿ ಬಂತು ಕಲ್ಪನಾ ವಿಲಾಸ, ಪಾತರಗಿತ್ತಿ ಪಕ್ಕಗಳ ವೈಭವಗಳು ನವಿಲು ಗರಿಗೆದರಿದಂತೆ ಮೈತೆರೆಯುತ್ತಾ ಹೋಗುತ್ತದೆ. ಶ್ರಾವಣವಾಗಲಿ, ಧಾರವಾಡದ ಚೆಲುವಾಗಲಿ ಬದುಕಿನ ಕಾವ್ಯ ಅಥವಾ ಸುಂದರ ಮುಖವಾಗಲೀ ಈ ಪ್ರತಿಭೆಗೆ ಸದಾ ಆಹ್ವಾನವಾಗಿರುತ್ತದೆ. ಬೇಂದ್ರೆಯವರ ಒಡನಾಟ ತಮಗೆ ಬಾಲ್ಯದಲ್ಲಿ ದೊರಕಿದ ಪ್ರಸಂಗಗಳನ್ನು ನೆನಪು ಮಾಡಿಕೊಂಡ ಅವರು ಅದು ತಮ್ಮ ಬದುಕನ್ನು ಶ್ರೀಮಂತಗೊಳಿಸಿತು ಎಂದರು.

    ಬೇಂದ್ರೆಯವರಿಗೆ ಜ್ಞಾನಪೀಠ ಬಂದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಏರ್ಪಡಿಸಿದ್ದ ಸನ್ಮಾನ ಸಮಾರಂಭಕ್ಕೆ ಅವರನ್ನು ಕರೆದುಕೊಂಡು ಹೋಗುವ ಅವಕಾಶ ಸಿಕ್ಕ ಬದುಕಿನ ಅಮೂಲ್ಯ ಘಳಿಗೆಯನ್ನು ನೆನಪು ಮಾಡಿಕೊಂಡ ನಾಡೋಜ ಡಾ. ಮಹೇಶ ಜೋಶಿ ಅಂದಿನ ಬೇಂದ್ರೆಯವರ ಮಾತುಗಳು ಎಲ್ಲರನ್ನೂ ಭಾವುಕವಾಗಿಸಿದ್ದವು. ಅವುಗಳು ಇನ್ನೂ ತಮ್ಮ ನೆನಪಿನ ಭಾವಕೋಶದಲ್ಲಿ ಜೀವಂತವಾಗಿದೆ. ಕುವೆಂಪು ಮತ್ತು ಬೇಂದ್ರೆ ಇಬ್ಬರ ಕಾವ್ಯದಲ್ಲಿಯೂ ಇರುವ ಅಧ್ಯಾತ್ಮಿಕ ಹಿನ್ನೆಲೆಯ ಮಹತ್ವವನ್ನು ಹೇಳಿದ ಅವರು ಇಬ್ಬರೂ ಕನ್ನಡ ಕಾವ್ಯದ ಎರಡು ಕಣ್ಣುಗಳಿದ್ದ ಹಾಗೆ ಎಂದು ವರ್ಣಿಸಿದರು. ಭಾಷಣ ಹಾಗೂ ಕಾವ್ಯವಾಚನದಲ್ಲಂತೂ ಬೇಂದ್ರೆಯವರದು ಅಸದೃಶವಾದ ಸೃಜನಶೀಲ ಪ್ರತಿಭೆ. ನಾವು ಓದುವ ಕವಿತೆಯಷ್ಟೇ ಅಲ್ಲದೆ ಕವಿಗೋಷ್ಠಿಯಲ್ಲಿ ಭಾಗವಹಿಸುವ ಎಲ್ಲರೂ ಕವಿತೆಯನ್ನು ಸಹೃದಯನ ಹೃದಯಕ್ಕೆ ಮುಟ್ಟಿಸಬೇಕೆಂಬುದು ಅವರ ಸದಾಗ್ರಹ. ವಾಸ್ತವವಾಗಿ ಬೇಂದ್ರೆಯವರ ವ್ಯಕ್ತಿತ್ವ ಕನ್ನಡಿಗರ ಮೇಲೆ ಪ್ರಭಾವ ಬೀರಿದ್ದೆ ಅವರ ಕಾವ್ಯದ ವಾಚನದ ಮೂಲಕ ಎನ್ನಬಹುದು. 87ನೆಯ ಅಖಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊ.ರು. ಚನ್ನಬಸಪ್ಪನವರು 1929ರ ಬೆಳಗಾವಿಯ ಸಾಹಿತ್ಯ ಸಮ್ಮೇಳನದಲ್ಲಿ ‘ಹಕ್ಕಿ ಹಾರುತಿದೆ ನೋಡಿದಿರಾ’ ಕವನವನ್ನು ಓದಿದಾಗ ವಾರಿ ರುಮಾಲು ಸುತ್ತಿದ್ದ ಬೇಂದ್ರೆಯವರ ಗಾರುಡಿಗ ವ್ಯಕ್ತಿತ್ವ ಮಾಸ್ತಿಯಂಥವರನ್ನೂ ಬೆರಗುಗೊಳಿತ್ತು. ಕಾರವಾರ ಸಾಹಿತ್ಯ ಸಮ್ಮೇಳನದಲ್ಲಿ ಬೇಂದ್ರೆಯವರ ಜೊತೆಗೆ ದಕ್ಕಿದ ನಿಕಟ ಒಡನಾಟದ ಘಟನೆಯನ್ನೂ, ತಮ್ಮ ‘ವಿಭೂತಿ’ ಕೃತಿಗೆ ಅವರು ಲೇಖನ ನೀಡಿದ ಸಂದರ್ಭವನ್ನೂ ನೆನಪು ಮಾಡಿಕೊಂಡು ತರೀಕರೆಯಲ್ಲಿ ತಾವು ಅಯೋಜಿಸಿದ್ದ ಪ್ರಥಮ ಜನಪದ ಸಮ್ಮೇಳನಕ್ಕೆ ಅವರು ಸರ್ವಾಧ್ಯಕ್ಷರಾಗಿದ್ದರು ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.

    ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ನೇ.ಭ. ರಾಮಲಿಂಗ ಶೆಟ್ಟರು ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಂಸದೀಯ ವ್ಯವಹಾರ ಇಲಾಖೆಯ ವಿಶ್ರಾಂತ ಕಾರ್ಯದರ್ಶಿ ಜಿ. ದಕ್ಷಿಣಾ ಮೂರ್ತಿ, ನಿವೃತ್ತ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಿ. ಶಿವಲಿಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು, ಕೋಶಾದ್ಯಕ್ಷರಾದ ಬಿ.ಎಂ. ಪಟೇಲ್ ಪಾಂಡು, ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಹಾವೇರಿ ಜಿಲ್ಲಾಧ್ಯಕ್ಷರಾದ ಲಿಂಗಯ್ಯ ಬಿ. ಹಿರೇಮಠ, ಬಳ್ಳಾರಿ ಜಿಲ್ಲಾಧ್ಯಕ್ಷರಾದ ನಿಷ್ಠಿ ರುದ್ರಪ್ಪ, ಡಾ. ಎಚ್.ಎಸ್. ಮುದ್ದೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗಳು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

    Literature
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ದಲಿತ ಸಾಹಿತಿ ಡಾ. ಸಿದ್ದಲಿಂಗಯ್ಯ
    Next Article ಶ್ರೀ ಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಾಂಗಣದಲ್ಲಿ ತಾಳಮದ್ದಳೆ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.