Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯಮಟ್ಟದ ನಾಟಕೋತ್ಸವ ‘ದಶರಂಗ ಸಂಭ್ರಮ’ದ ಉದ್ಘಾಟನೆ
    Drama

    ರಾಜ್ಯಮಟ್ಟದ ನಾಟಕೋತ್ಸವ ‘ದಶರಂಗ ಸಂಭ್ರಮ’ದ ಉದ್ಘಾಟನೆ

    March 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ರಂಗಸಂಸ್ಕೃತಿ ಕಾರ್ಕಳ ಇದರ ದಶಮಾನೋತ್ಸವದ ಅಂಗವಾಗಿ ಡಾ ಮಂಜುನಾಥ ಪೈ ಸಾಂಸ್ಕೃತಿಕ ಪ್ರತಿಷ್ಠಾನ ಕಾರ್ಕಳ ಇದರ ಸಹಕಾರದೊಂದಿಗೆ ಸರಸ್ವತಿ ಮಂಜುನಾಥ ಪೈ ರಂಗ ಮಂಟಪದಲ್ಲಿ ಆಯೋಜಿಸಿರುವ ನಾಟಕೋತ್ಸವ ‘ದಶರಂಗ ಸಂಭ್ರಮ’ವು ದಿನಾಂಕ 21-03-2024ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ರಂಗ ಮಾಂತ್ರಿಕ ಡಾ. ಜೀವನ್ ರಾಮ್ ಸುಳ್ಯ ಇವರು ಮಾತನಾಡಿ “ನಾಟಕದ ಸ್ವಾದ ಮನಸ್ಸಿನ ಒತ್ತಡ ಹಾಗೂ ಬದುಕಿನ ಜಂಜಾಟವನ್ನು ಮರೆಸುವಲ್ಲಿ ನೆರೆವಾಗುತ್ತದೆ. ಕಲಾಭಿರುಚಿಯನ್ನು ಹೊಂದಿರುವ ಕಾರ್ಕಳದ ಜನತೆ ಸಂಗೀತ ನಾಟಕ ಇತ್ಯಾದಿ ಲಲಿತ ಕಲೆಗಳನ್ನು ನಿರಂತರವಾಗಿ ಪ್ರೋತ್ಸಾಹಿಸುತ್ತಾ ಬಂದಿದೆ” ಎಂದು ಹೇಳಿದರು.

    ಕಾರ್ಯಕ್ರಮ ಅಧ್ಯಕ್ಷತೆಯನ್ನು ರಂಗಸಂಸ್ಕೃತಿಯ ಅಧ್ಯಕ್ಷರಾದ ಉದ್ಯಮಿ ಎಸ್. ನಿತ್ಯಾನಂದ ಪೈ ವಹಿಸಿದ್ದರು. ಈ ಸಂದರ್ಭದಲ್ಲಿ ನಾಟಕೋತ್ಸವದ ಪ್ರೋತ್ಸಾಹಕರಾದ ರೊಟೇರಿಯನ್ ವೈ. ಮೋಹನ್ ಶೆಣೈ, ಉದ್ಯಮಿ ನಿಟ್ಟೆ ಅರುಣ್ ಕುಮಾರ್ ಹಾಗೂ ನಾಟಕ ನಿರ್ದೇಶಕರಾದ ಡಾ. ಜೀವನ್ ರಾಮ್ ಸುಳ್ಯ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ರಂಗಸಂಸ್ಕೃತಿಯ ಉಪಾಧ್ಯಕ್ಷರಾದ ರಾಮಚಂದ್ರ ಟಿ. ನಾಯಕ್, ರಮಿತಾ ಶೈಲೇಂದ್ರ ರಾವ್ ಸಹ ಸಂಚಾಲಕರಾದ ನಾಗೇಶ್ ನಲ್ಲೂರು ಉಪಸ್ಥಿತರಿದ್ದರು. ಸಂಚಾಲಕರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಪ್ರಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಗಣೇಶ್ ಜಾಲ್ಸೂರು ನಿರೂಪಿಸಿ, ಶಿವ ಸುಬ್ರಹ್ಮಣ್ಯ ಭಟ್ ಮತ್ತು ದೇವದಾಸ್ ನಾಯಕ್ ಸಹಕರಿಸಿದರು.

    ಆರಂಭದಲ್ಲಿ ‘ವಿಹಾನಾ’ ಮೆಲೋಡೀಸ್ ತಂಡದ ನಿರ್ದೇಶಕಿ ಗಾಯಕಿ ರಮ್ಯಾ ಸುಧೀಂದ್ರ ಮತ್ತು ಗಾಯಕ ಶಿವಕುಮಾರ್ ಅವರು ಕನ್ನಡ ಚಿತ್ರರಂಗದ ಹಳೆಯ ಹಾಡುಗಳನ್ನು ಹಾಡಿ ರಂಜಿಸಿದರು. ಉದ್ಘಾಟನಾ ಕಾರ್ಯಕ್ರಮದ ನಂತರ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇವರು ಅಭಿನಯಿಸಿರುವ ವೈದೇಹಿ ರಚಿತ ಡಾ. ಜೀವನ್ ರಾಮ್ ಸುಳ್ಯ ನಿರ್ದೇಶನದ ‘ನಾಯಿಮರಿ’ ನಾಟಕ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸರ್ಕಾರಿ ಕಾಲೇಜಿನಲ್ಲಿ  ಗೋವಿಂದ ಪೈ ಯವರ 141ನೇ ಜನ್ಮ ದಿನಾಚರಣೆ
    Next Article ‘ಮೌನ ದೊಳಗಿನ ಮಾತು’ ಕವನ ಸಂಕಲನದ ಬಿಡುಗಡೆ
    roovari

    Add Comment Cancel Reply


    Related Posts

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    ಸಮಾರೋಪಗೊಂಡ ರಜಾರಂಗು ‘ಚಂದಕ್ಕಿ ಬಾರೆ ಕಥೆ ಹೇಳೆ’ ಬೇಸಿಗೆ ಶಿಬಿರ

    May 5, 2025

    ಮೈಸೂರು ಮತ್ತು ಬೆಂಗಳೂರಿನಲ್ಲಿ ‘ಎದೆಗೆ ಬಿದ್ದ ಅಕ್ಷರ’ ನಾಟಕ ಪ್ರದರ್ಶನ | ಮೇ 04

    May 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.