Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬ್ರಹ್ಮಾವರ ದಶಾವತಾರ ಯಕ್ಷ ಶಿಕ್ಷಣ ಕೇಂದ್ರ ವಾರ್ಷಿಕೋತ್ಸವ
    Yakshagana

    ಬ್ರಹ್ಮಾವರ ದಶಾವತಾರ ಯಕ್ಷ ಶಿಕ್ಷಣ ಕೇಂದ್ರ ವಾರ್ಷಿಕೋತ್ಸವ

    October 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬ್ರಹ್ಮಾವರ : ಶ್ರೀ ದಶಾವತಾರ ಯಕ್ಷ ಶಿಕ್ಷಣ ಕೇಂದ್ರ (ರಿ) ಬ್ರಹ್ಮಾವರ ಇದರ ನಾಲ್ಕನೆಯ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 15-10-2023 ರಂದು ಬ್ರಹ್ಮಾವರ ಸಾಲಿಕೇರಿಯ ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
    ಸಾಲಿಕೇರಿ ದುರ್ಗಾಪರಮೇಶ್ವರಿ ದೇವಳದ ಆಡಳಿತ ಮುಕ್ತೇಸರರಾದ ಎಸ್. ಸುರೇಶ್ ಶೆಟ್ಟಿಗಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಸವ್ಯಸಾಚಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಉಪನ್ಯಾಸಕ ಹಾಗೂ ಹವ್ಯಾಸಿ ಯಕ್ಷಗಾನ ಕಲಾವಿದರಾದ ಕೋಟ ಸುಜಯೀಂದ್ರ ಹಂದೆ “ಜಗತ್ತಿನ ಶ್ರೀಮಂತ ಕಲೆ ಯಕ್ಷಗಾನ. ಯಕ್ಷಗಾನದ ಈ ಶ್ರೀಮಂತಿಕೆಗೆ ಅದರದೇ ಆದ ಅನನ್ಯತೆಯೊಂದು ಕಾರಣವಾದರೆ, ಮತ್ತೊಂದು ಕಾರಣ ತಮ್ಮ ಮನೆ, ಸಂಸಾರದಿಂದ ದೂರವುಳಿದು ಸರಿಯಾದ ನಿದ್ದೆ ಮುದ್ದೆಯಿಲ್ಲದೆ ರಂಗವನ್ನು ಸಂಪನ್ನಗೊಳಿಸಿದ ಹಿರಿಯ ಕಲಾವಿದರು. ಆಧುನಿಕ ಸೌಲಭ್ಯಗಳಿಲ್ಲದ ಆ ಕಾಲದಲ್ಲೂ ಕಲೆಯ ಮೇಲಿರುವ ಅವರೆಲ್ಲರ ಶ್ರದ್ಧಾ ಭಕ್ತಿಯ ರಸಪಾಕವೇ ಯಕ್ಷಗಾನದ ಹಿರಿಮೆ. ಹಾಗಾಗಿ ಇಂದಿನ ಕಲಾವಿದರಿಗೆ ಸಿಕ್ಕ ಯಾವುದೇ ಪ್ರಶಸ್ತಿ, ಪುರಸ್ಕಾರ ಅರ್ಪಿತವಾಗಬೇಕಾದುದು ಅಂದಿನ ಮೇರು ಕಲಾವಿದರಿಗೆ” ಎಂದು ಹೇಳಿದರು.
    ಬ್ರಹ್ಮಾವರ ರೋಟರಿ ವೆಲ್ಫೇರ್ ಟ್ರಸ್ಟಿನ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಹಿರಿಯ ಮದ್ದಳೆ ವಾದಕರಾದ ಬಿರ್ತಿ ಬಾಲಕೃಷ್ಣ, ಅಜಪುರ ಯಕ್ಷಗಾನ ಸಂಘದ ಗೌರವಾಧ್ಯಕ್ಷ ಕೃಷ್ಣಸ್ವಾಮಿ ಜೋಷಿ, ಉದ್ಯಮಿ ಕಿಶೋರ್ ಕುಮಾರ್ ಕುಕ್ಕುಡೆ, ಅರ್ಥಧಾರಿ ಪದ್ಮನಾಭ ಗಾಣಿಗ, ಕೇಂದ್ರದ ಗೌರವಾಧ್ಯಕ್ಷರಾದ ದಯಾನಂದ ನಾಯಕ್ ಸುಂಕೇರಿ, ಕೇಂದ್ರದ ಗುರು ಕಾರ್ತಿಕ್ ಶೆಟ್ಟಿಗಾರ್ ಉಪಸ್ಥಿತರಿದ್ದು, ಕೇಂದ್ರದ ಅಧ್ಯಕ್ಷ ಶ್ರೀಧರ ಶೆಟ್ಟಿಗಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
    ಶ್ರೀಮತಿ ದಿವ್ಯ ಸ್ವಾಗತಿಸಿ, ಜಯಶ್ರೀ ಸುಧೀರ್ ಪ್ರಸ್ತಾವಿಸಿದರು. ಕಾರ್ಯದರ್ಶಿ ಜಯಲಕ್ಷ್ಮೀ ಶೆಟ್ಟಿಗಾರ್ ವಂದಿಸಿ, ರಾಜೇಶ್ ಶೆಟ್ಟಿಗಾರ್ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ರಾಜ್ಯೋತ್ಸವ ಕವಿಗೋಷ್ಠಿಯು | ನವೆಂಬರ್ 5ರಂದು 
    Next Article ವಿಶ್ವಕರ್ಮ ಕಲಾ ಪರಿಷತ್ ಆಯೋಜಿಸಿದ ‘ವಿಶ್ವಕರ್ಮ ಕಲಾ ಸಿಂಚನ 2023’
    roovari

    Add Comment Cancel Reply


    Related Posts

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ತಾಳಮದ್ದಳೆ ಜ್ಞಾನಯಜ್ಞ’ | ಮೇ 26

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025

    ಕರ್ನಾಟಕ ಯಕ್ಷ ಭಾರತಿಯಿಂದ ಸೂರ್ಯನಾರಾಯಣ ಭಟ್ ಸನ್ಮಾನ

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.