Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಲಿಕೇರಿಯ ದಶಾವತಾರ ಯಕ್ಷಶಿಕ್ಷಣ ಕೇಂದ್ರ (ರಿ). ಆಯೋಜಿಸಿದ ಎರಡು ದಿನದ ಯಕ್ಷಗಾನ ಕಾರ್ಯಾಗಾರ | ಎಪ್ರಿಲ್ 22, 23
    Yakshagana

    ಸಾಲಿಕೇರಿಯ ದಶಾವತಾರ ಯಕ್ಷಶಿಕ್ಷಣ ಕೇಂದ್ರ (ರಿ). ಆಯೋಜಿಸಿದ ಎರಡು ದಿನದ ಯಕ್ಷಗಾನ ಕಾರ್ಯಾಗಾರ | ಎಪ್ರಿಲ್ 22, 23

    April 25, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬ್ರಹ್ಮಾವರ: “ಮನದ ಜಾಡ್ಯವನ್ನು ದೂರಮಾಡಬಲ್ಲ, ಆಂಗಿಕ, ಆಹಾರ್ಯ, ವಾಚಿಕ ಮತ್ತು ಸಾತ್ವಿಕ ಎಂಬ ಚತುರ್ವಿಧವಾದ ಅಭಿನಯಗಳಿಂದ ಕೂಡಿದ ಶ್ರೀಮಂತ ಕಲೆ ಯಕ್ಷಗಾನ. ಇಲ್ಲಿ ಕಣ್ಣಿಗೆ ಆಹ್ಲಾದ ನೀಡುವ ವೇಷಗಳಿವೆ, ಬುದ್ಧಿಗೆ ಆಹಾರ ಕೊಡುವ  ಮೌಲಿಕವಾದ ಸಾಹಿತ್ಯವಿದೆ, ಕಿವಿಗೆ ರಸಾಸ್ವಾದವನ್ನು ನೀಡುವ ಸಂಗೀತವಿದೆ. ಹೃದಯವನ್ನು ಬೆಳಗುವ ಯಕ್ಷಗಾನವನ್ನು ಶಾಸ್ತ್ರೀಯವಾಗಿ ಅಧ್ಯಯನ ಮಾಡಿ ಒಬ್ಬ ಕಲಾವಿದರಾಗುವುದರ ಜೊತೆಗೆ ರುಚಿಶುದ್ಧಿಯುಳ್ಳ ಪ್ರಜ್ಞಾವಂತ ಪ್ರೇಕ್ಷರಾಗುವುದು ಮುಖ್ಯ” ಏಂದು ಕನ್ನಡ ಉಪನ್ಯಾಸಕ, ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕರಾದ ಸುಜಯೀಂದ್ರ ಹಂದೆ ಹೇಳಿದರು.

    ಸಾಲಿಕೇರಿಯ  ದಶಾವತಾರ ಯಕ್ಷಶಿಕ್ಷಣ ಕೇಂದ್ರ (ರಿ). ಬ್ರಹ್ಮಾವರದ ರೋಟರಿ ಸಮಾಜ ಭವನದಲ್ಲಿ ಆಯೋಜಿಸಿದ ಎರಡು ದಿನದ ಯಕ್ಷಗಾನ ಕಾರ್ಯಾಗಾರದಲ್ಲಿ  ಏರ್ಪಡಿಸಿದ್ದ ಸಾಲಿಗ್ರಾಮ ಮಕ್ಕಳ ಮೇಳದ ಯಕ್ಷಗಾನ ಪ್ರಾತ್ಯಕ್ಷಿಕೆಯಲ್ಲಿ ಹಂದೆಯವರು ಮಾತನಾಡಿದರು.

    ಯಕ್ಷಗಾನದ ಇತಿಹಾಸ, ಬೆಳೆದು ಬಂದ ರೀತಿ, ಯಕ್ಷಗಾನದ ಒಳಹೊರಗು ಕುರಿತಂತೆ ಮಾತನಾಡಿದ ಹಂದೆಯವರು ಬಡಗು ತಿಟ್ಟಿನ ಬಾಲಗೋಪಾಲ, ಪೀಠಿಕಾ ಸ್ರೀವೇಷಗಳ ಕುಣಿತ ಸಹಿತ ಆಂಗಿಕಾಭಿನಯದ ವಿವಿಧ ತಾಳಗಳ ಪರಿಚಯ ಮಾಡಿಸಿದರು. ಪಾದ ಮತ್ತು ಹಸ್ತಗಳ ಸ್ಥಾನ ಮತ್ತು ವಿನ್ಯಾಸಗಳೊಂದಿಗೆ ಪಾತ್ರಾನುಸಾರವಾಗಿ ಪುರುಷ, ಸ್ತ್ರೀ, ಪುಂಡು, ಎರಡನೇ ವೇಷಗಳ ಕುಣಿತಗಳು ಹೊಂದುವ ವ್ಯತ್ಯಾಸವನ್ನು ನಿರೂಪಿಸಿದರು. ಪತಾಕ, ಅರ್ಧಪತಾಕ, ಸೂಚಿ, ಹಂಸಾಸ್ಯ, ಮುಷ್ಟಿ, ಸರ್ಪ, ಆಲಪದ್ಮ, ಮುಕುಳ, ಮೃಗಶಿರ ಮೊದಲಾದ ಹಸ್ತ ಮುದ್ರೆಗಳನ್ನು ವಿವಿಧ ಪ್ರಸಂಗದ ಪದ್ಯಗಳೊಂದಿಗೆ ಕುಣಿದು ತೋರಿಸಿದರು. ಶೃಂಗಾರ, ಹಾಸ್ಯ, ಕರುಣ, ವೀರ ಮೋದಲಾದ ನವರಸಗಳ ಅಭಿನಯವನ್ನು ಪ್ರಾತ್ಯಕ್ಷಿಕೆಯಲ್ಲಿ ಪ್ರದರ್ಶಿಸಲಾಯಿತು.

    ಭಾಗವತಿಕೆಯಲ್ಲಿ ನವೀನ ಕೋಟ, ಮದ್ದಳೆಯಲ್ಲಿ ಸ್ಕಂದ ಉರಾಳ, ಚಂಡೆಯಲ್ಲಿ ಸುದೀಪ ಉರಾಳ ಹಿಮ್ಮೇಳದಲ್ಲಿಯೂ ಮತ್ತು ಸುಹಾಸ ಕರಬ,  ಶ್ರೀಜಿತ್ ಸೋಮಯಾಜಿ ಮುಮ್ಮೇಳದಲ್ಲಿಯೂ  ಸಹಕರಿಸಿದರು.

    ಯಕ್ಷ ಶಿಕ್ಷಣ ಕೇಂದ್ರದ ಅಧ್ಯಕ್ಷ ಶ್ರೀದರ ಶೆಟ್ಟಿಗಾರ ಅಧ್ಯಕ್ಷತೆವಹಿಸಿದ್ದರು. ಹಿರಿಯ ಯಕ್ಷಗಾನ ಕಲಾವಿದರಾದ ಬಿರ್ತಿ ಬಾಲಕೃಷ್ಣ, ಪದ್ಮನಾಭ ಗಾಣಿಗ, ಉಪನ್ಯಾಸಕರಾದ ಶ್ರೀನಿವಾಸ ಸೋಮಯಾಜಿ ಉಪಸ್ಥಿತರಿದ್ದರು. ಕಾರ್ತಿಕ್ ನಿರ್ವಹಿಸಿದರು. ಸುಮಾರು ನಲವತ್ತು ಮಂದಿ ಯಕ್ಷ ಶಿಕ್ಷಣ ವಿದ್ಯಾರ್ಥಿಗಳು ಪ್ರಾತ್ಯಕ್ಷಿಕೆಯ ಫಲಾನುಭವಿಗಳಾದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿಶ್ವ ಕಲಾ ದಿನ | ಬೆಂಗಳೂರಿನಲ್ಲಿ “ದಾಕಹವಿಸ” ಚಿತ್ರಕಲಾ ಪ್ರಾತ್ಯಕ್ಷಿಕೆ ಮತ್ತು ಸಂವಾದ
    Next Article ಶ್ರೀಮತಿ ಗಂಗಾ ಪಾದೇಕಲ್ ಇವರಿಗೆ ‘ನಿರಂಜನ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    ಪರಿಚಯ ಲೇಖನ | ‘ಬೆಳೆಯುವ ಯಕ್ಷಸಿರಿ’ ಸಚಿನ್ ಶೆಟ್ಟಿ ನಾಗರಕೊಡಿಗೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.