Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಂತಾವರ ಕನ್ನಡ ಸಂಘದ ಮೂರು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ
    Awards

    ಕಾಂತಾವರ ಕನ್ನಡ ಸಂಘದ ಮೂರು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

    October 20, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕಾಂತಾವರ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ. ನಾ. ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ರ ಸಾಲಿನ ಮೂರು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀ ಬಾಲಕೃಷ್ಣ  ಆಚಾರ್ ಮತ್ತು ಅವರ ಪತ್ನಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ವಾಣಿ ಬಿ. ಆಚಾರ್ ಇವರು ಕನ್ನಡ ಸಂಘದಲ್ಲಿ ಸ್ಥಾಪಿಸಿದ ದತ್ತಿನಿಧಿಯ ‘ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ’ಯನ್ನು ಕಾಂತಾವರದ ನಿವೃತ್ತ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ವಿಠಲ ಬೇಲಾಡಿಯವರಿಗೆ, ಕನ್ನಡ ಸಂಘದಲ್ಲಿ ಮೊಗಸಾಲೆ ಕುಟುಂಬದವರು ಸ್ಥಾಪಿಸಿದ ದತ್ತಿನಿಧಿಯ ‘ಕಾಂತಾವರ ಸಾಹಿತ್ಯ ಪ್ರಶಸ್ತಿ’ಯನ್ನು ಸುಳ್ಯ ತಾಲೂಕಿನ ಅಜ್ಜಾವರದ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿಗಳಾದ ಡಾ. ಪ್ರಭಾಕರ ಶಿಶಿಲ ಇವರಿಗೆ ಮತ್ತು ಕನ್ನಡ ಸಂಘದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅಧ್ಯಾಪಿಕೆ ಶ್ರೀಮತಿ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ಇವರು ಸ್ಥಾಪಿಸಿದ ದತ್ತಿನಿಧಿಯ ‘ಕಾಂತಾವರ ಅನುವಾದ ಸಾಹಿತ್ಯ ಪ್ರಶಸ್ತಿ’ಯನ್ನು ಕುಂದಾಪುರದ ನಿವೃತ್ತ ಪ್ರಾಧ್ಯಾಪಕಿ ಹಾಗೂ ಸಾಹಿತಿ ಡಾ. ಪಾರ್ವತಿ ಜಿ. ಐತಾಳ್ ಇವರಿಗೆ ನೀಡುವುದೆಂದು ನಿರ್ಣಯಿಸಲಾಗಿದೆ. ಪ್ರಶಸ್ತಿಯು ತಲಾ 10,000 ರೂಪಾಯಿಗಳ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 01 ನವಂಬರ್ 2024 ರಂದು ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ‘ಕಾಂತಾವರ ಉತ್ಸವ’ದಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.
                                                                                              ಡಾ. ಪಾರ್ವತಿ ಜಿ. ಐತಾಳ್
                                                                                         ಡಾ. ಪ್ರಭಾಕರ ಶಿಶಿಲ 
                                                                                                        ವಿಠಲ ಬೇಲಾಡಿ

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
    Next Article ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ‘ಜಾನಪದ ಹಬ್ಬ-2024’ | ಅಕ್ಟೋಬರ್ 27 
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.