Subscribe to Updates

    Get the latest creative news from FooBar about art, design and business.

    What's Hot

    ಭಜನೆಯಿಂದ ಮನಶಾಂತಿ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್ – ‘ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತೋತ್ಸವ’
    Music

    ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್ – ‘ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತೋತ್ಸವ’

    May 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಇದರ ಸಹಯೋಗದೊಂದಿಗೆ ಟ್ರಸ್ಟ್ ನ ಐದನೇ ವಾರ್ಷಿಕೋತ್ಸವದ ಪ್ರಯುಕ್ತ ‘ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತೋತ್ಸವ’ವು ದಿನಾಂಕ 07-05-2023ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ.ಕೆ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಂಡಿತ್ ರವಿಕಿರಣ್ ಮಣಿಪಾಲ್, ಎಂ.ಆರ್.ಪಿ.ಎಲ್. ಹಾಗೂ ಒ.ಎನ್‌.ಜಿ.ಸಿ. ಜನರಲ್ ಮ್ಯಾನೇಜರ್ ಮಂಜುನಾಥ ಎಚ್.ವಿ. ಮೊದಲಾದವರು ಉಪಸಿತರಿದ್ದರು.

    ಧ್ಯಾನ ಸಂಗೀತ ಅಕಾಡೆಮಿ ಕಲಾ ಟಸ್ಟ್ ಇದರ ಆಧ್ಯಕ್ಷರಾದ ಶ್ರೀಮತಿ ಲೋಕೇಶ್ ಇವರು ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ, ಸಂಗೀತಗಾರರಾದ ಹಿರಿಯ ಕಲಾವಿದ ರಮಾನಾಥ್ ಕೋಟೆಕಾರ್ ಅವರನ್ನು ಸಮ್ಮಾನಿಸಲಾಯಿತು.

    ಅನಂತರ ನಡೆದ ಪ್ರಖ್ಯಾತ ಹಿಂದೂಸ್ಥಾನಿ ಗಾಯಕರಾದ ಪಂಡಿತ್‌ ಕುಮಾರ್ ಮರ್ಡೂರ್ ಧಾರವಾಡ, ಶ್ರೀಮತಿ ಮೇಧಾ ಭಟ್‌ ಸಿದ್ದಾಪುರ, ಶ್ರೀ ವಿಶಾಲ ಭಗವಾನ್ ರಾವ್ ಮಹರ್ ಗುಡೆ, ಅಮಿತ್ ಕುಮಾರ್ ಬೆಂಗ್ರೆ ಹಾಗೂ ಧ್ಯಾನ ಸಂಗೀತ ಕಲಾ ಅಕಾಡೆಮಿಯ ವಿದ್ಯಾರ್ಥಿಗಳಿಂದ ಹಿಂದೂಸ್ಥಾನಿ ಗಾಯನ ಕಾರ್ಯಕ್ರಮ ನಡೆಯಿತು. ಸಹ ವಾದನದಲ್ಲಿ ತಬಲ ವಾದಕರಾಗಿ ಶ್ರೀಧ‌ರ್ ಮಾಂಡ್ರೆ ಧಾರವಾಡ, ಶ್ರೀ ವಿಘ್ನೇಶ್ ಕಾಮತ್ ಕೋಟೇಶ್ವರ, ಹಾರ್ಮೋನಿಯಂ ವಾದನದಲ್ಲಿ ಶ್ರೀ ಶಶಿಕಿರಣ್ ಮಣಿಪಾಲ್, ಶ್ರೀ ಪ್ರಸಾದ್ ಕಾಮತ್ ಉಡುಪಿ ಮೊದಲಾದವರು ಭಾಗವಹಿಸಿದ್ದರು.

    ಈ ಕಾರ್ಯಕ್ರಮದಲ್ಲಿ ಸಂದೇಶ್‌ ಕಾಮತ್‌ ಸ್ವಾಗತಿಸಿ, ಪ್ರತಾಪ್ ಕುಮಾರ್ ವಾರ್ಷಿಕ ವರದಿ ವಾಚಿಸಿ, ಅಮಿತ್ ಕುಮಾರ್ ಬೆಂಗ್ರೆ ಅವರು ವಂದಿಸಿ, ಆಶಾಲತಾ ಮತ್ತು ಡಾ. ರತಿ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಇವರಿಂದ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’
    Next Article ಕನ್ನಡ ಸಾಹಿತ್ಯ ಪರಿಷತ್ತು – ‘ದತ್ತಿ ಉಪನ್ಯಾಸ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ಭಜನೆಯಿಂದ ಮನಶಾಂತಿ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಸುಗಮ ಸಂಗೀತ’ ಕಾರ್ಯಕ್ರಮ | ಮೇ 25        

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.