Subscribe to Updates

    Get the latest creative news from FooBar about art, design and business.

    What's Hot

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಸುವರ್ಣ ಮಹೋತ್ಸವದ ಅಂಗವಾಗಿ ‘ಭಜನಾ ಸ್ಪರ್ಧಾ ಸಂಭ್ರಮ -2026’ | ಜನವರಿ 11

    January 9, 2026

    ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು | ಜನವರಿ 15

    January 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಟಿ. ಗಿರಿಜಾ ಸಾಹಿತ್ಯ ದತ್ತಿ ಪುರಸ್ಕಾರ’ಕ್ಕೆ ಡಾ. ಬಿ.ಎಸ್. ಶೈಲಜ ಇವರು ಆಯ್ಕೆ
    Awards

    ‘ಟಿ. ಗಿರಿಜಾ ಸಾಹಿತ್ಯ ದತ್ತಿ ಪುರಸ್ಕಾರ’ಕ್ಕೆ ಡಾ. ಬಿ.ಎಸ್. ಶೈಲಜ ಇವರು ಆಯ್ಕೆ

    September 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ‘ಟಿ. ಗಿರಿಜಾ ದತ್ತಿ ಪುರಸ್ಕಾರ’ಕ್ಕೆ ಖ್ಯಾತ ವಿಜ್ಞಾನ ಬರಹಗಾರರು ಮತ್ತು ಜವಹರಲಾಲ್ ನೆಹರು ತಾರಾಲಯದ ನಿವೃತ್ತ ನಿರ್ದೇಶಕರೂ ಆದ ಡಾ. ಬಿ.ಎಸ್. ಶೈಲಜ ಇವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶ್ರೀಮತಿ ಟಿ.ಎಸ್. ಶೈಲಜ ಇವರು ಸೂಕ್ಷ್ಮ ಸಂವೇದನಾಶೀಲ ಬರಹಗಾರ್ತಿ ಟಿ. ಗಿರಿಜಾ ಇವರ ಹೆಸರಿನಲ್ಲಿ ದತ್ತಿ ಸ್ಥಾಪಿಸಿದ್ದು ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಲೇಖಕಿಯವರಿಗೆ ಈ ಗೌರವ ಸಲ್ಲುತ್ತದೆ. ನಾಡೋಜ ಡಾ. ಮಹೇಶ ಜೋಶಿಯವರ ನೇತೃತ್ವದಲ್ಲಿ ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ದತ್ತಿದಾನಿಗಳ ಪರವಾಗಿ ಅರುಂಧತಿ ರಮೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಿ.ಎಂ. ಪಟೇಲ್ ಪಾಂಡು, ಎಚ್.ಬಿ. ಮದನ ಗೌಡ, ಗೌರವ ಕೋಶಾಧ್ಯಕ್ಷರಾದ ಡಿ.ಆರ್. ವಿಜಯ ಕುಮಾರ್ ಭಾಗವಹಿಸಿದ್ದರು.

    2025ನೆಯ ಸಾಲಿನ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಡಾ. ಬಿ.ಎಸ್. ಶೈಲಜ ಇವರು ಕನ್ನಡದ ಮಹತ್ವದ ಬರಹಗಾರ ಬ.ನ. ಸುಂದರರಾಯರ ಮಗಳು. ಭಾರತೀಯ ಭೌತ ವಿಜ್ಞಾನ ಸಂಸ್ಥೆಯಿಂದ ಡಾಕ್ಟರೇಟ್ ಪಡೆದ ಇವರು ಜವಹರಲಾಲ್ ನೆಹರು ತಾರಾಲಯದಲ್ಲಿ ಹಲವು ಮಹತ್ವದ ಹುದ್ದೆಗಳನ್ನು ನಿರ್ವಹಿಸಿ ಯಶಸ್ವಿಯಾಗಿದ್ದು ಮಾತ್ರವಲ್ಲದೆ ಕನ್ನಡದಲ್ಲಿ ವಿಜ್ಞಾನವನ್ನು ಅದರಲ್ಲಿಯೂ ಭೌತ ವಿಜ್ಞಾನವನ್ನು ಜನಪ್ರಿಯಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಕಳೆದ ಅರವತ್ತು ವರ್ಷಗಳಿಂದ ನಿರಂತರವಾಗಿ ಬರೆಯುತ್ತಿರುವ ಅವರ ಲೇಖನಗಳು ನಾಡಿನ ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿಯೂ ಪ್ರಕಟವಾಗಿವೆ. ಕನ್ನಡದಲ್ಲಿ ಆರು ನೂರು ಮತ್ತು ಇಂಗ್ಲೀಷಿನಲ್ಲಿ ಇನ್ನೂರಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಅವರು 150 ಸಂಶೋಧನಾ ಪ್ರಬಂಧಗಳನ್ನು ಮಂಡಿಸಿ ಜಾಗತಿಕ ಗಮನ ಸೆಳೆದಿದ್ದಾರೆ. ಅತ್ಯುತ್ತಮ ಅನುವಾದಕರೂ ಆಗಿರುವ ಅವರ ‘ರುದ್ರಪ್ರಯಾಗದ ನರಭಕ್ಷಕ ಚಿರತೆ’, ‘ಗಲಿವರನ ಪ್ರವಾಸ’ ಮಹತ್ವದ ಅನುವಾದಗಳಾಗಿವೆ. ‘ಖಗೋಳ ದರ್ಶನ’ ಎನ್ನುವ ಬೃಹತ್ ಸಂಪುಟ ಅವರು ಕನ್ನಡಕ್ಕೆ ನೀಡಿರುವ ಮಹತ್ವದ ಕೊಡುಗೆ. ಶ್ರೀಮತಿ ಟಿ. ಗಿರಿಜಾ ದತ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಡಾ. ಬಿ.ಎಸ್. ಶೈಲಜ ಇವರನ್ನು ವಿಶೇಷವಾಗಿ ಅಭಿನಂದಿಸಿರುವ ನಾಡೋಜ ಡಾ. ಮಹೇಶ ಜೋಶಿಯವರು ಇವರಿಂದ ಸಮಾಜಕ್ಕೆ ಇನ್ನಷ್ಟು ಕೊಡುಗೆಗಳು ಲಭಿಸಲಿ ಎಂದು ಆಶಿಸಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಪ್ರಸಿದ್ಧ ಸಂಶೋಧಕ, ಸಾಹಿತಿ ಡಾ. ಕೆ.ಜಿ. ವಸಂತ ಮಾಧವರಿಗೆ ನುಡಿ ನಮನ ಕಾರ್ಯಕ್ರಮ
    Next Article ಶ್ರೀ ಕ್ಷೇತ್ರ ಪೊಳಲಿಯಲ್ಲಿ ‘ಪೊಳಲಿ ಯಕ್ಷೋತ್ಸವ- 2025’ | ಸೆಪ್ಟೆಂಬರ್ 27
    roovari

    Add Comment Cancel Reply


    Related Posts

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಸುವರ್ಣ ಮಹೋತ್ಸವದ ಅಂಗವಾಗಿ ‘ಭಜನಾ ಸ್ಪರ್ಧಾ ಸಂಭ್ರಮ -2026’ | ಜನವರಿ 11

    January 9, 2026

    ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು | ಜನವರಿ 15

    January 9, 2026

    ಬ್ಯಾರಿವಾರ್ತೆ ದಶಮಾನೋತ್ಸವ ಸಂಭ್ರಮದ ಪಯುಕ್ತ ‘ಬ್ಯಾರಿ ಲೇಖನ’ ಸ್ಪರ್ಧೆ

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.