Subscribe to Updates

    Get the latest creative news from FooBar about art, design and business.

    What's Hot

    ಸವಣೂರಿನ ಶ್ರೀ ವಿನಾಯಕ ಸಭಾಭವನದಲ್ಲಿ ತಾಳಮದ್ದಳೆ ಕಾರ್ಯಕ್ರಮ

    September 8, 2025

    ‘ಕಲಾ ನಿಧಿ ರಾಷ್ಟ್ರೀಯ ಪ್ರಶಸ್ತಿ’ಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

    September 8, 2025

    ಅನುಕರಣೀಯ ವ್ಯಕ್ತಿತ್ವ -ಆದರ್ಶ ಮಹಿಳೆ -ಶ್ರೀಮತಿ ಗಾಯತ್ರಿ ನಾಗೇಶ್ -ಕೃತಿ ಬಿಡುಗಡೆ | ಸೆಪ್ಟೆಂಬರ್ 9

    September 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ಪ್ರಶಸ್ತಿ’ಗೆ ಡಾ. ಬಿ.ಎಸ್. ಪ್ರಣತಾರ್ತಿ ಹರನ್ ಆಯ್ಕೆ
    Awards

    ‘ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ಪ್ರಶಸ್ತಿ’ಗೆ ಡಾ. ಬಿ.ಎಸ್. ಪ್ರಣತಾರ್ತಿ ಹರನ್ ಆಯ್ಕೆ

    September 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಟಿತ ‘ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’ಗೆ ಹಿರಿಯ ಸಂಶೋಧಕ ಮೈಸೂರಿನ ಡಾ. ಬಿ.ಎಸ್. ಪ್ರಣತಾರ್ತಿಹರನ್ ಇವರನ್ನು ಆಯ್ಕೆ ಮಾಡಲಾಗಿದೆ.

    ಕನ್ನಡದ ಹಿರಿಯ ವಿದ್ವಾಂಸರಾದ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿಯವರ ಅಭಿಮಾನಿಗಳು ಮತ್ತು ಬಂಧುಗಳು 2001ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿ ನಿಧಿಯನ್ನು ಸ್ಥಾಪಿಸಿದ್ದು, ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿಗಳು ಕಾರ್ಯ ನಿರ್ವಹಿಸಿದ ಹಳಗನ್ನಡ ಸಾಹಿತ್ಯದ ಅಧ್ಯಯನ, ಛಂದಸ್ಸು, ವ್ಯಾಕರಣ, ನಿಘಂಟು ರಚನೆ, ಗ್ರಂಥ ಸಂಪಾದನೆ, ಭಾಷಾ ಶಾಸ್ತ್ರ ಮೊದಲಾದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿರುವವರನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಬೇಕೆಂಬುದು ದತ್ತಿಯ ಆಶಯವಾಗಿದೆ.

    2025ನೆಯ ಸಾಲಿಗೆ ‘ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ಪ್ರಶಸ್ತಿ’ಗೆ ಆಯ್ಕೆಯಾಗಿರುವ ಡಾ. ಬಿ.ಎಸ್. ಪ್ರಣತಾರ್ತಿಹರನ್ ಬಾನುಲಿ ನಿಲಯದಲ್ಲಿ ಎಂಟು ವರ್ಷ ಸೇವೆ ಸಲ್ಲಿಸಿದ ನಂತರ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ 25 ವರ್ಷ ಸೇವೆ ಸಲ್ಲಿಸಿದವರು. ಸಂಕೇತಿ ಸಮುದಾಯದ ಅಧ್ಯಯನಕ್ಕೆ ಪಿ.ಎಚ್.ಡಿ. ಪದವಿಯನ್ನು ಪಡೆದು, ಜೊತೆಗೆ ‘ಸಂಕೇತಿ’ ಸಮುದಾಯವನ್ನೇ ಕೇಂದ್ರವಾಗಿರಿಸಿದ ಕೃತಿಗಳನ್ನೂ ಇವರು ರಚಿಸಿದ್ದಾರೆ. ಅವರ ಸಂಶೋಧನೆ ಮತ್ತು ಸಂಪಾದನೆಯ ನಲವತ್ತು ಕೃತಿಗಳು ಹತ್ತು ಸಂಪುಟಗಳಲ್ಲಿ ಅಡಕಗೊಂಡಿದ್ದು, ಅಮೂಲ್ಯವಾದ ಹಸ್ತಪ್ರತಿಗಳನ್ನೂ ಸಂಗ್ರಹಿಸಿದ್ದಾರೆ.

    ನಾಡೋಜ ಡಾ. ಮಹೇಶ ಜೋಶಿಯವರ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ದತ್ತಿದಾನಿಗಳ ಪರವಾಗಿ ಟಿ.ವಿ. ಚಿತ್ಕಲಾ, ಎಲ್.ಎಸ್. ಶಿವಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಿ.ಎಂ. ಪಟೇಲ್ ಪಾಂಡು, ಎಚ್.ಬಿ. ಮದನ್ ಗೌಡ, ಗೌರವ ಕೋಶಾಧ್ಯಕ್ಷರಾದ ಡಿ.ಆರ್. ವಿಜಯ ಕುಮಾರ್ ಭಾಗವಹಿಸಿದ್ದರು. ಸಮಿತಿಯು ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿಗೆ ಹಿರಿಯ ಸಂಶೋಧಕ ಡಾ. ಬಿ.ಎಸ್. ಪ್ರಣತಾರ್ತಿ ಹರನ್ ಇವರನ್ನು ವಿಶೇಷವಾಗಿ ಅಭಿನಂದಿಸಿ, ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಇನ್ನಷ್ಟು ಕೊಡುಗೆಗಳು ಲಭಿಸಲಿ ಎಂದು ಆಶಿಸಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಶಾರದಾ ಕಲಾ ಮಂಟಪದಲ್ಲಿ ತಾಳಮದ್ದಳೆ ಕಾರ್ಯಕ್ರಮ
    Next Article ಉಜಿರೆಯ ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸಮಾಲೆ -8’ | ಸೆಪ್ಟೆಂಬರ್ 09
    roovari

    Add Comment Cancel Reply


    Related Posts

    ಸವಣೂರಿನ ಶ್ರೀ ವಿನಾಯಕ ಸಭಾಭವನದಲ್ಲಿ ತಾಳಮದ್ದಳೆ ಕಾರ್ಯಕ್ರಮ

    September 8, 2025

    ‘ಕಲಾ ನಿಧಿ ರಾಷ್ಟ್ರೀಯ ಪ್ರಶಸ್ತಿ’ಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

    September 8, 2025

    ಅನುಕರಣೀಯ ವ್ಯಕ್ತಿತ್ವ -ಆದರ್ಶ ಮಹಿಳೆ -ಶ್ರೀಮತಿ ಗಾಯತ್ರಿ ನಾಗೇಶ್ -ಕೃತಿ ಬಿಡುಗಡೆ | ಸೆಪ್ಟೆಂಬರ್ 9

    September 8, 2025

    ಕೋಟದಲ್ಲಿ ಗುರುವಂದನೆ, ಸಾಧಕ ದಂಪತಿಗಳಿಗೆ ಸನ್ಮಾನ ಮತ್ತು ಯಕ್ಷಗಾನ ತಾಳಮದ್ದಳೆ

    September 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.