Subscribe to Updates

    Get the latest creative news from FooBar about art, design and business.

    What's Hot

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ಡಾ. ಕೆ. ಚಿನ್ನಪ್ಪ ಗೌಡ ಇವರಿಗೆ ‘ಡಾ. ಜೀ.ಶಂ.ಪ. ತಜ್ಞ ಪ್ರಶಸ್ತಿ’ ಪ್ರದಾನ
    Awards

    ಬೆಂಗಳೂರಿನಲ್ಲಿ ಡಾ. ಕೆ. ಚಿನ್ನಪ್ಪ ಗೌಡ ಇವರಿಗೆ ‘ಡಾ. ಜೀ.ಶಂ.ಪ. ತಜ್ಞ ಪ್ರಶಸ್ತಿ’ ಪ್ರದಾನ

    April 8, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು ಡಾ. ಕೆ. ಚಿನ್ನಪ್ಪ ಗೌಡರು ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿರುವ ಸಾಧನೆಯನ್ನು ಗುರುತಿಸಿ 2023ನೇ ಸಾಲಿನ ಡಾ. ಜೀ.ಶಂ.ಪ. ತಜ್ಞ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಬೀದರ್‌ನಲ್ಲಿ ನಡೆದಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಿನ್ನಪ್ಪ ಗೌಡರಿಗೆ ಭಾಗವಹಿಸಲು ಅಸಾಧ್ಯವಾಗಿದ್ದ ಕಾರಣ ಅವರನ್ನು ಬೆಂಗಳೂರಿನ ಅಕಾಡೆಮಿಯ ಕಚೇರಿಯಲ್ಲಿ ದಿನಾಂಕ 03 ಏಪ್ರಿಲ್ 2025ರಂದು ಏರ್ಪಡಿಸಿದ್ದ ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು.

    ಬಳಿಕ ಮಾತನಾಡಿದ ಅವರು, “ಭೂತಾರಾಧನೆಯಂತಹ ಜನಪದ ಧಾರ್ಮಿಕ ರಂಗಭೂಮಿಯನ್ನು ಮೊದಲ ಬಾರಿಗೆ ಸಮಗ್ರ ಅಧ್ಯಯನ ನಡೆಸಿದ ಚಿನ್ನಪ್ಪ ಗೌಡರು ಭೂತಾರಾಧನೆಯ ಪ್ರಭೇದವಾದ ಜಾಲಾಟವನ್ನು ಬೆಳಕಿಗೆ ತಂದು ಅದರ ವೈಶಿಷ್ಟ್ಯಗಳನ್ನು ತಿಳಿಸಿದವರು. ಅವರ ಅಧ್ಯಯನ ಒಂದು ಮಾದರಿ ಅಧ್ಯಯನ. ತುಳು ಜಾನಪದದ ಪ್ರಮುಖ ಪ್ರಕಾರಗಳ ಕುರಿತಂತೆ ಅಧ್ಯಯನ ನಡೆಸಿರುವ ಡಾ. ಗೌಡರು ಪಾಡ್ಡನಗಳು, ಸಿರಿ ಸಂಧಿ, ಕಬಿತೆಗಳು ಮತ್ತು ಅಜ್ಜಿಕತೆಗಳಿಗೆ ಹೊಸ ವ್ಯಾಖ್ಯಾನಗಳನ್ನು ನೀಡಿದ್ದಾರೆ. ಸಂಶೋಧನೆ, ಅಂತಾರಾಷ್ಟ್ರೀಯ ಯೋಜನೆ ಮತ್ತು ಅನುವಾದಗಳ ಮೂಲಕ ಕರ್ನಾಟಕ ಜಾನಪದಕ್ಕೆ ಜಾಗತಿಕ ಮನ್ನಣೆಯನ್ನು ತಂದುಕೊಟ್ಟರು. ಗೌಡರು ಇತ್ತೀಚಿಗೆ ಪ್ರಕಟಿಸಿದ ‘ಕರಾವಳಿ ಕಥನಗಳು’ ಮತ್ತು ಮಹತ್ವದ ಪ್ರಸ್ತಾವನೆಯುಳ್ಳ ಮಾಚಾರು ಗೋಪಾಲ ನಾಯ್ಕರ ‘ಸಿರಿ ಸಂಧಿ’ ಇವು ರಾಷ್ಟ್ರೀಯ ಮನ್ನಣೆಗೆ ಅರ್ಹವಾದ ಕೃತಿಗಳು” ಎಂದರು. ‘ಭೂತಾರಾಧನೆ-ಜಾನಪದೀಯ ಅಧ್ಯಯನ’ ಕೃತಿಯ ವಿಸ್ತ್ರತ ಆವೃತ್ತಿ ಮರುಮುದ್ರಣಗೊಳ್ಳುತ್ತಿರುವುದಕ್ಕೆ ಶುಭಾಶಯಗಳನ್ನು ಸಲ್ಲಿಸಿದರು.

    ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರೊ. ಕೆ. ಚಿನ್ನಪ್ಪ ಗೌಡ, “ಇದು ಜಾನಪದ ಭೀಷ್ಮ ಡಾ. ಜೀ. ಶಂ. ಪರಮಶಿವಯ್ಯ ಹೆಸರಿನಲ್ಲಿರುವ ಪ್ರಶಸ್ತಿಯಾದುದರಿಂದ ವಿಶೇಷ ಮನ್ನಣೆ, ಗೌರವ. ಜೀಶಂಪ ನನ್ನಂತಹ ಎರಡನೆಯ ಘಟ್ಟದ ಜಾನಪದ ಸಂಗ್ರಹ ಮತ್ತು ಅಧ್ಯಯನಕಾರರಿಗೆ ಪ್ರಾತಸ್ಮರಣೀಯರು. ಅವರ ಆದರ್ಶ, ಪರಿಶ್ರಮ, ಜಾನಪದ ಪ್ರೀತಿಯನ್ನು ಇಟ್ಟುಕೊಂಡು ಕೆಲಸ ಮಾಡಿದವನು ನಾನು. ಅಮೃತ ಸೋಮೇಶ್ವರ, ಬಿ.ಎ. ವಿವೇಕ ರೈ ಇವರ ಮಾರ್ಗದರ್ಶನ, ಕು.ಶಿ. ಹರಿದಾಸ ಭಟ್ಟರ ಪ್ರೋತ್ಸಾಹ ಮತ್ತು ಫಿನ್ಲೆಂಡ್ ವಿದ್ವಾಂಸ ಲೌರಿ ಹೊಂಕೊರವರ ಜಾನಪದ ವಿದ್ವತ್ತು ಇವೆಲ್ಲ ನನ್ನನ್ನು ಬೆಳೆಸಿವೆ” ಎಂದು ಹೇಳಿ ಕೃತಜ್ಞತೆ ಸಲ್ಲಿಸಿದರು. ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ರಿಜಿಸ್ಟ್ರಾರ್ ಎನ್. ನಮ್ರತಾ, ಅಕಾಡೆಮಿ ಸದಸ್ಯ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಭಾಗವಹಿಸಿದ್ದರು.

    baikady folk Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಉದಯರಾಗ ಸರಣಿ ಕಾರ್ಯಕ್ರಮದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಚೇರಿ
    Next Article ಕಾಸರಗೋಡಿನಲ್ಲಿ ಶ್ರೀ ರಾಮನವಮಿಯ ಪ್ರಯುಕ್ತ ತಾಳಮದ್ದಳೆ ಕಾರ್ಯಕ್ರಮ
    roovari

    Add Comment Cancel Reply


    Related Posts

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25

    May 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications