Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ನಟನದಲ್ಲಿ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ | ಆಗಸ್ಟ್ 03

    August 1, 2025

    ‘ಗೀತೋತ್ಸವ -2025’ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನ | ಆಗಸ್ಟ್ 02 ಮತ್ತು 03

    August 1, 2025

    ಎಡನೀರಿನಲ್ಲಿ ಸಮಾರೋಪಗೊಂಡ ಯಕ್ಷಗಾನ ತಾಳಮದ್ದಳೆ ದಶಾಹ

    August 1, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಡಾ. ಕೆ.ಬಿ. ಸೂರ್ಯಕುಮಾರ್ ಇವರಿಗೆ ಸನ್ಮಾನ
    Felicitation

    ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಡಾ. ಕೆ.ಬಿ. ಸೂರ್ಯಕುಮಾರ್ ಇವರಿಗೆ ಸನ್ಮಾನ

    August 1, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾದ ಡಾ. ಕೆ.ಬಿ. ಸೂರ್ಯಕುಮಾರ್ ಇವರನ್ನು ದಿನಾಂಕ 30 ಜುಲೈ 2025ರಂದು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ವೈದ್ಯರ ಶ್ರೇಷ್ಠ ಪುಸ್ತಕಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಮಡಿಕೇರಿಯ ಖ್ಯಾತ ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್ ಇವರು ಬರೆದು, ಹರಿವು ಪ್ರಕಾಶನದವರು ಪ್ರಕಟಿಸಿರುವ ‘ಮಂಗಳಿ’ – ತೃತೀಯ ಲಿಂಗಿಗಳ ಜೀವನ ಆಧಾರಿತ ಒಂದು ಕಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಪ್ರಮುಖರು ಹಾಗೂ ಪದಾಧಿಕಾರಿಗಳು ನಗರದಲ್ಲಿರುವ ಡಾ. ಸೂರ್ಯಕುಮಾ‌ರ್ ಅವರ ಕ್ಲಿನಿಕ್ ನಲ್ಲಿ ಸನ್ಮಾನಿಸಿ, ಗೌರವಿಸಿದರು.

    ಈ ಸಂದರ್ಭ ಮಾತನಾಡಿದ ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, “ಕೊಡಗಿನಲ್ಲಿ ಹುಟ್ಟಿ, ಬೆಳೆದ ಡಾ. ಕೆ.ಬಿ. ಸೂರ್ಯಕುಮಾ‌ರ್ ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ ಬರಹಗಾರರು. ವಿಧಿ ವಿಜ್ಞಾನ ವಿಭಾಗದಲ್ಲಿ ತಜ್ಞತೆ ಹೊಂದಿರುವ ಇವರು ಸುಮಾರು ನಾಲ್ಕು ದಶಕಗಳಿಗಿಂತ ಹೆಚ್ಚಿನ ವೈದ್ಯಕೀಯ ಅನುಭವಗಳನ್ನು ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಆಗಿ ವಿದ್ಯಾರ್ಥಿಗಳಿಗೆ ಧಾರೆ ಎರೆಯುವುದರ ಜೊತೆಗೆ, ರೋಗಿಗಳ ಶುಶೂಷೆಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ. ತಮ್ಮ ವೈದ್ಯಕೀಯ ಜೀವನದಲ್ಲಿ ಕಂಡಂತಹ ಅನೇಕ ಪ್ರಕರಣಗಳ ಬಗ್ಗೆ ಅವರು ಕಥಾನಕ ರೂಪದಲ್ಲಿ ಬರೆದ ಲೇಖನಗಳು ಈಗಾಗಲೇ ‘ವೈದ್ಯ ಕಂಡ ವಿಸ್ಮಯ’, ‘ಕೌತುಕಗಳ ಮಾಯಾಜಾಲ’, ‘ವೈದ್ಯ ಲೋಕದ ಕಥೆಗಳು’, ‘ನಿಗೂಢ ಕೊಲೆಗಳು’ ಎಂಬ ಪುಸ್ತಕಗಳಾಗಿ ಹೊರಬಂದು ಓದುಗರ ಮೆಚ್ಚುಗೆ ಗಳಿಸಿದೆ. ಕನ್ನಡದಲ್ಲಿ ವೈದ್ಯಕೀಯ ವಿವರಣೆಗಳು ಸ್ವಲ್ಪ ಕಡಿಮೆ ಇರುವ ಈ ದಿನಗಳಲ್ಲಿ ಸಾಮಾನ್ಯ ರೋಗಗಳ ಕಿರುನೋಟ ಬೀರುವ ‘ವೈದ್ಯಕೀಯ ಕೈಪಿಡಿ’ ಎಂಬ ಪುಸ್ತಕ ಇತ್ತೀಚೆಗೆ ಹೊರ ಬಂದಿದೆ. ಡಾ. ಸೂರ್ಯಕುಮಾರ್ ವೈದ್ಯ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳು ಬಹಳಷ್ಟು, ಇವರ ಸೇವೆ ಸದಾಕಾಲ ಇದೇ ರೀತಿ ಬೆಳಗುತ್ತಿರಲಿ. ಮುಂದಿನ ದಿನಗಳಲ್ಲಿಯೂ ಮತ್ತಷ್ಟು ಸಂಶೋಧನಾ ಕೃತಿಗಳು ಹೊರಬರುವಂತಾಗಲಿ. ಕೊಡಗು ಕನ್ನಡ ಭವನ ಮತ್ತು ಚುಟುಕು ಸಾಹಿತ್ಯ ಪರಿಷತ್ತು ಹಲವು ಸಾಧಕರನ್ನು ಇದೇ ರೀತಿ ಗುರುತಿಸಿ, ಪ್ರೋತ್ಸಾಹಿಸುತ್ತಿದೆ” ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಂ.ಎ. ರುಬೀನಾ, ಕೊಡಗು ಕನ್ನಡ ಭವನ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಬೊಟ್ಟೋಳಂಡ ನಿವ್ಯಾ ಕಾವೇರಮ್ಮ, ರಂಜಿತ್ ಜಯರಾಂ, ಸದಸ್ಯ ಪಿ.ಎಸ್. ಸುರ್ಜಿತ್ ಹಾಗೂ ಕ್ಲಿನಿಕ್ ಸಿಬ್ಬಂದಿ ಹಾಜರಿದ್ದರು.

    baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ರಾಣಿ ಅಬ್ಬಕ್ಕದೇವಿಯ ಜೊತೆ ಪಯಣ’ ಕೃತಿ ಲೋಕಾರ್ಪಣೆ
    Next Article ಎಡನೀರಿನಲ್ಲಿ ಸಮಾರೋಪಗೊಂಡ ಯಕ್ಷಗಾನ ತಾಳಮದ್ದಳೆ ದಶಾಹ
    roovari

    Add Comment Cancel Reply


    Related Posts

    ಮೈಸೂರಿನ ನಟನದಲ್ಲಿ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ | ಆಗಸ್ಟ್ 03

    August 1, 2025

    ‘ಗೀತೋತ್ಸವ -2025’ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನ | ಆಗಸ್ಟ್ 02 ಮತ್ತು 03

    August 1, 2025

    ಎಡನೀರಿನಲ್ಲಿ ಸಮಾರೋಪಗೊಂಡ ಯಕ್ಷಗಾನ ತಾಳಮದ್ದಳೆ ದಶಾಹ

    August 1, 2025

    ಮಂಗಳೂರಿನಲ್ಲಿ ‘ರಾಣಿ ಅಬ್ಬಕ್ಕದೇವಿಯ ಜೊತೆ ಪಯಣ’ ಕೃತಿ ಲೋಕಾರ್ಪಣೆ

    August 1, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.