Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ಎಲ್.ಸಿ. ಸೋನ್ಸ್ ಶ್ರದ್ಧಾಂಜಲಿ ಸಭೆ ಮತ್ತು ಕೃತಿ ಬಿಡುಗಡೆ
    Book Release

    ಡಾ. ಎಲ್.ಸಿ. ಸೋನ್ಸ್ ಶ್ರದ್ಧಾಂಜಲಿ ಸಭೆ ಮತ್ತು ಕೃತಿ ಬಿಡುಗಡೆ

    April 18, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    18 ಎಪ್ರಿಲ್ 2023, ಮೂಡುಬಿದಿರೆ: ಮೂಡುಬಿದಿರೆಯು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಸಿದ್ಧಿ ಹೊಂದುವಲ್ಲಿ ಡಾ. ಎಲ್.ಸಿ ಸೋನ್ಸ್ ಅವರ ಕೊಡುಗೆಯೂ ಮಹತ್ವದ್ದಾಗಿದೆ. ಕೃಷಿಕರು ಕೂಡಾ ಹೇಗೆ ಗೌರವಯುತವಾಗಿ ಬದುಕಬಹುದೆಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಪರಿಸರದ ಕುರಿತಾಗಿ ವಿಶೇಷ ಕಾಳಜಿ ಹೊಂದಿದ್ದ ಸೋನ್ಸ್ ಅವರು ಜಾತಿ ಮತ ಪಂಥವನ್ನು ಮೀರಿ ಬೆಳೆದ ರೀತಿ ಎಲ್ಲರಿಗೂ ಆದರ್ಶಪ್ರಾಯವಾದುದು ಎಂಬುದಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವ ಅವರು ಇಲ್ಲಿ ಮಾತನಾಡುತ್ತಾ ತಿಳಿಸಿದರು. ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದ ರತ್ನಾಕರವರ್ಣಿ ಸಭಾಂಗಣದಲ್ಲಿ ಡಾ. ಎಲ್.ಸಿ.ಸೋನ್ಸ್ ಅಭಿಮಾನಿ ಬಳಗ, ಮೂಡುಬಿದಿರೆ ಇದರ ಮತಿಯಿಂದ ನಡೆದ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
    ಡಾ. ನರೇಂದ್ರ ರೈ ದೇರ್ಲ ಅವರ “ ಎಲ್.ಸಿ.ಸೋನ್ಸ್ ಸೃಷ್ಟಿಸಿದ ಫಲ ಪ್ರಪಂಚ ಸೋನ್ಸ್ ಫಾರ್ಮ್” ಎಂಬ ಕೃತಿಯನ್ನು ಮೂಡುಬಿದಿರೆ ಜೈನಮಠದ ಜಗದ್ಗುರು ಸ್ವಸ್ತಿಶ್ರೀ ಡಾ. ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಬಿಡುಗಡೆಗೊಳಿಸಿ ಸೋನ್ಸರ ಒಡನಾಟ ಹಾಗೂ ಅವರ ಆದರ್ಶ ವ್ಯಕ್ತಿತ್ವವನ್ನು ನೆನಪಿಸಿಕೊಂಡರು. ಡಾ. ನರೇಂದ್ರ ರೈ ದೇರ್ಲ ಅವರು ಕೃತಿ ರಚನೆಯ ಹಿನ್ನೆಲೆಯ ಬಗ್ಗೆ ವಿವರಿಸುತ್ತಾ ಹಸ್ತಪ್ರತಿಯನ್ನು ನೋಡಿ ಸಂತೋಷಪಟ್ಟಿದ್ದ ಸೋನ್ಸ್ ಅವರ ಅನುಮತಿಯಂತೆ ಪುಸ್ತಕ ಬಿಡುಗಡೆಗೆ ಇಂದಿನ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಇಂದು ಅವರ ಶ್ರದ್ಧಾಂಜಲಿ ಸಭೆಯಲ್ಲಿ ಈ ಕೃತಿ ಬಿಡುಗಡೆಗೊಳ್ಳುತ್ತಿರುವುದು ಖೇದದ ಸಂಗತಿಯಾಗಿದೆ ಅಂದರು. ಅಡಿಕೆ ಪತ್ರಿಕೆಯ ಸಂಪಾದಕರಾದ ಶ್ರೀ ಪಡ್ರೆಯವರು ಕೃತಿ ಪರಿಚಯ ನೆರವೇರಿಸಿದರು. ಇತಿಹಾಸ ತಜ್ಞ, ವಿಶ್ರಾಂತ ಪ್ರ‍್ರ್ರಾಧ್ಯಾಪಕರಾದ ಡಾ. ಪುಂಡಿಕಾಯ್ ಗಣಪಯ್ಯ ಭಟ್ ಅವರು ನುಡಿ ನಮನ ಸಲ್ಲಿಸಿದರು. ಮಾಜಿ ಸಚಿವರಾದ ಅಭಯಚಂದ್ರ ಜೈನ್, ಸಂಪತ್ ಸಾಮ್ರಾಜ್ಯ , ನಾರಾಯಣ ಪಿ.ಎಂ. ಶ್ರೀಪತಿ ಭಟ್, ಕುಲದೀಪ್ ಎಂ, ಪುಷ್ಪರಾಜ್ ಬಿ, ಡಾ. ಸೋನ್ಸ್ ಅವರ ಪತ್ನಿ ಬೆನಿಟಾ ಸೋನ್ಸ್, ಪುತ್ರ ಸುನೀಲ್ ಸೋನ್ಸ್, ಪುತ್ರಿ ಸೋನಿಯಾ ಮಾರ್ಟಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಜಿ ಅಧ್ಯಕ್ಷರಾದ ರಾಜವರ್ಮ ಬೈಲಂಗಡಿ ಸ್ವಾಗತಿಸಿದರು. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

     

    Share. Facebook Twitter Pinterest LinkedIn Tumblr WhatsApp Email
    Previous Article‘ಬಹುಮುಖಿ ಪಾತ್ರಪ್ರವೀಣ’ ದಿನೇಶ್ ನಾಯ್ಕ
    Next Article ಬ್ರಹ್ಮಾವರದಲ್ಲಿ ಜಾನಪದ ವೈಭವ: ಯಕ್ಷಗಾನ ಕಲಾವಿದ ಸರ್ವೋತ್ತಮ ಗಾಣಿಗ ಹಾರಾಡಿ ಅವರಿಗೆ ಜಾನಪದ ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಮೈಸೂರಿನಲ್ಲಿ ಸಿತಾರ್ ವಾದನ, ಪುಸ್ತಕ ಲೋಕಾರ್ಪಣೆ ಮತ್ತು ಸಿತಾರ್ ತರಗತಿಗಳ ಪ್ರಾರಂಭೋತ್ಸವ | ಮೇ 31

    May 30, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.