Subscribe to Updates

    Get the latest creative news from FooBar about art, design and business.

    What's Hot

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಡಾ. ನಾ. ಮೊಗಸಾಲೆ ಪೌರಾಭಿನಂದನೆ ಹಾಗೂ ಸಾಹಿತ್ಯಸಮೀಕ್ಷೆ’ | ಆಗಸ್ಟ್ 10
    Book Release

    ‘ಡಾ. ನಾ. ಮೊಗಸಾಲೆ ಪೌರಾಭಿನಂದನೆ ಹಾಗೂ ಸಾಹಿತ್ಯಸಮೀಕ್ಷೆ’ | ಆಗಸ್ಟ್ 10

    August 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಕಾಸರಗೋಡು, ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ, ಶಂಪಾ ಪ್ರತಿಷ್ಠಾನ (ರಿ.) ಬೆಂಗಳೂರು ಮತ್ತು ವಿಕಾಸ ಮೀಯಪದವು ಇವರ ಸಂಯುಕ್ತ ಆಶ್ರಯದಲ್ಲಿ ‘ಡಾ. ನಾ. ಮೊಗಸಾಲೆ ಪೌರಾಭಿನಂದನೆ ಹಾಗೂ ಸಾಹಿತ್ಯ ಸಮೀಕ್ಷೆ’ ಕಾರ್ಯಕ್ರಮವನ್ನು ದಿನಾಂಕ 10-08-2024ರಂದು ಬೆಳಗ್ಗೆ 10-00 ಗಂಟೆಗೆ ಮೀಯಪದವು ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ ಶಾಲೆಯ ನಾರಾಯಣೀಯಂ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

    ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷರಾದ ಡಾ. ರಾಮಾನಂದ ಬನಾರಿ ಇವರ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಡಾ. ಮಹೇಶ್ ಜೋಶಿ ಇವರು ಉದ್ಘಾಟನೆ ಮಾಡಲಿದ್ದಾರೆ. ‘ಸಾಹಿತ್ಯ ಸಮೀಕ್ಷೆ’ ಗೋಷ್ಠಿ 1ರಲ್ಲಿ ಮೊಗಸಾಲೆಯವರ ಕಾವ್ಯದ ಬಗ್ಗೆ ಸಾಹಿತಿ ಮತ್ತು ವಿಮರ್ಶಕ ಶ್ರೀ ರಮೇಶ್ ಭಟ್ ಬೆಳಗೋಡು, ಕಾದಂಬರಿಗಳ ಬಗ್ಗೆ ವಿಮರ್ಶಕ ಕಾದಂಬರಿಕಾರ ಡಾ. ಬಿ. ಜನಾರ್ದನ ಭಟ್, ಸಣ್ಣ ಕತೆಗಳ ಬಗ್ಗೆ ಸಾಹಿತಿ ಡಾ. ಸುಭಾಷ್ ಪಟ್ಟಾಜೆ ಮಾಹಿತಿ ನೀಡಲಿರುವರು. ಮಧ್ಯಾಹ್ನ 1-00 ಗಂಟೆಗೆ ಶ್ರೀಮತಿ ಸಂಧ್ಯಾ ಗೀತಾ ಬಾಯಾರು ಮತ್ತು ಬಳಗದವರಿಂದ ಮೊಗಸಾಲೆ ಕಾವ್ಯ ಗಾಯನ ಪ್ರಸ್ತುತಗೊಳ್ಳಲಿದೆ. ಗೋಷ್ಠಿ 2ರಲ್ಲಿ ‘ನೀರು’ ಕಾದಂಬರಿಯ ಬಗ್ಗೆ ಕು. ಸ್ವಾತಿ ಕೆ. ಪೊನ್ನೆತೋಡು, ‘ಭಾರತ ಕಥಾ’ ಕಾದಂಬರಿಯ ಬಗ್ಗೆ ಕು. ಅನನ್ಯ ಬೇಕಲ, ‘ಧರ್ಮಯುದ್ಧ’ ಕಾದಂಬರಿಯ ಬಗ್ಗೆ ಕು. ಪಲ್ಲವಿ ಕೆ. ಮಲ್ಲ ಇವರುಗಳು ಮಾತನಾಡಲಿದ್ದಾರೆ. 2-45 ಗಂಟೆಗೆ ಮೊಗಸಾಲೆಯವರೊಂದಿಗೆ ಲೋಕಾಭಿರಾಮ ಮಾತುಕತೆ ಮತ್ತು 3-30 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಇವರು ವಹಿಸಲಿದ್ದು, ಸರಕಾರಿ ಕಾಲೇಜು ಬೆಟ್ಟಂಪಾಡಿ ಇದರ ಪ್ರಾಂಶುಪಾಲರಾದ ಡಾ. ವರದರಾಜ್ ಚಂದ್ರಗಿರಿ ಇವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಎಚ್.ಎಲ್. ಸೀತಾದೇವಿಗೆ ‘ನಾಗಮಣಿ ಎಸ್. ರಾವ್ ಪ್ರಶಸ್ತಿ’
    Next Article ಸುಳ್ಯದಲ್ಲಿ ಮುಂಗಾರು ಕವಿಗೋಷ್ಠಿ ‘ವರ್ಷ ವೈಭವ’
    roovari

    Comments are closed.

    Related Posts

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.