Subscribe to Updates

    Get the latest creative news from FooBar about art, design and business.

    What's Hot

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ಪದ್ಮಾ ಮೂರ್ತಿಯವರಿಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ | ಅಕ್ಟೋಬರ್ 15ರಂದು
    Awards

    ಡಾ. ಪದ್ಮಾ ಮೂರ್ತಿಯವರಿಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ | ಅಕ್ಟೋಬರ್ 15ರಂದು

    October 11, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಾಜ್ಯ ಸರಕಾರ ನೀಡುವ ಪ್ರಸಕ್ತ ಸಾಲಿನ (2023-24) ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಬೆಂಗಳೂರಿನ ಸಂಗೀತ ಕಲಾವಿದೆ ಡಾ. ಪದ್ಮಾ ಮೂರ್ತಿಯವರನ್ನು ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಅರಮನೆಯ ಮುಖ್ಯ ವೇದಿಕೆಯಲ್ಲಿ ದಸರಾ ಉದ್ಘಾಟನಾ ಸಮಾರಂಭದ ದಿನದಂದು ರಾಜ್ಯದ ಒಬ್ಬರು ಹಿರಿಯ ಸಂಗೀತ ಸಾಧಕರನ್ನು ಗುರುತಿಸಿ ಅವರಿಗೆ ‘ರಾಜ್ಯ ಸಂಗೀತ ವಿದ್ವಾನ್‌ ಪ್ರಶಸ್ತಿ’ಯನ್ನು ನೀಡಿ ರಾಜ್ಯ ಸರಕಾರದಿ೦ದ ಗೌರವಿಸಲಾಗುತ್ತದೆ. ಪ್ರಶಸ್ತಿಯು ರೂ.5 ಲಕ್ಷ ನಗದು ಮತ್ತು ಸರಸ್ವತಿ ವಿಗ್ರಹದ ಸ್ಮರಣಿಕೆ, ಪ್ರಶಸ್ತಿ ಫಲಕ, ಶಾಲು, ಹಾರ ಮತ್ತು ಫಲತಾಂಬೂಲಗಳನ್ನು ಒಳಗೊಂಡಿದೆ.

    ದಿನಾಂಕ 15-10-2023ರಂದು ಮೈಸೂರು ಅರಮನೆಯ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿರುವರು. ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ಗಾಗಿ ಪ್ರಸಿದ್ಧ ಕ್ಲಾರಿಯೋನೆಟ್ ವಾದಕರಾದ ಡಾ. ಪಂಡಿತ್‌ ನರಸಿಂಹಲು ವಡವಾಟಿ ಅವರ ಅಧ್ಯಕ್ಷತೆಯ ಸಮಿತಿಯು ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಡಾ. ಪದ್ಮಾ ಮೂರ್ತಿಯವರನ್ನು ಆಯ್ಕೆ ಮಾಡಿದೆ.

    ಡಾ. ಪದ್ಮಾ ಮೂರ್ತಿಯವರಿಗೆ ಈಗ 91 ವರ್ಷ. ಬೆಂಗಳೂರಿನಲ್ಲಿ ವಾಸವಾಗಿರುವ ಅವರು, ಮೈಸೂರು ವಾಸು ದೇವಾಚಾರ್ಯ, ಟಿ. ಚೌಡಯ್ಯ, ಟಿ. ಪುಟ್ಟಸ್ವಾಮಯ್ಯನವರ ಬಳಿ ಸಂಗೀತಾಭ್ಯಾಸ; ಎಚ್.ಎಸ್. ಕೃಷ್ಣಮೂರ್ತಿ, ಆರ್.ಎಸ್. ಕೇಶವಮೂರ್ತಿ ಬಳಿ ವೀಣಾ ವಾದನ ಕಲಿತಿದ್ದಾರೆ. ಬಿಎಸ್‌ಸಿ, ಎಂಎ, ಪಿಎಚ್‌.ಡಿ, ಡಿ.ಲಿಟ್. ಪದವಿ ಪಡೆದಿದ್ದಾರೆ. ಸಂಗೀತದಲ್ಲಿ ವಿದ್ವತ್‌, ಸೈಕಾಲಜಿ ಆಫ್ ಮ್ಯೂಸಿಕ್ ಎಂಬ ವಿಷಯಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿದ್ದು, ಇವರಿಗೆ ಕರ್ನಾಟಕ ಕಲಾಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.

    Share. Facebook Twitter Pinterest LinkedIn Tumblr WhatsApp Email
    Previous Articleಹಿರಿಯ ಪತ್ರಕರ್ತ ರಂಗನಾಥ ರಾವ್ ನಿಧನ
    Next Article ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ರಂಗ ನಮನ’ | ಅಕ್ಟೋಬರ್ 13ರಿಂದ 15ರವರೆಗೆ
    roovari

    Add Comment Cancel Reply


    Related Posts

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.