Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಆರ್ಯಭಟ ಪ್ರಶಸ್ತಿ’ಗೆ ಶ್ರೇಷ್ಠ ನಾಟಕಕಾರ ಡಾ. ಸಂಜೀವ ದಂಡೆಕೇರಿ ಆಯ್ಕೆ
    Awards

    ‘ಆರ್ಯಭಟ ಪ್ರಶಸ್ತಿ’ಗೆ ಶ್ರೇಷ್ಠ ನಾಟಕಕಾರ ಡಾ. ಸಂಜೀವ ದಂಡೆಕೇರಿ ಆಯ್ಕೆ

    April 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಬೆಂಗಳೂರಿನ ಆರ್ಯಭಟ ಕಲ್ಚರಲ್ ಆರ್ಗನೈಸೇಷನ್ ಸಂಸ್ಥೆಯು ರಾಷ್ಟ್ರ- ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದ ಅಸಾಧಾರಣ ಸಾಧಕರಿಗೆ ನೀಡುವ 51ನೇ ವರ್ಷದ ಬೆಂಗಳೂರಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಕರಾವಳಿ ಕರ್ನಾಟಕದ ಶ್ರೇಷ್ಠ ನಾಟಕಕಾರ, ನಿರ್ದೇಶಕ ತುಳು ರಂಗಭೂಮಿ ಮತ್ತು ಚಿತ್ರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ಡಾ.ಸಂಜೀವ ದಂಡೆಕೇರಿ ಆಯ್ಕೆಯಾಗಿದ್ದಾರೆ. ನಾಟಕ ರಂಗದೊಂದಿಗೆ ಡಾ. ಸಂಜೀವ ದಂಡೆಕೇರಿ ಮಾಡಿರುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ದಿನಾಂಕ 23 ಮೇ 2026ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

    ಆಯುರ್ವೇದ ವೈದ್ಯ ಡಾ. ಸಂಜೀವ ದಂಡೆಕೇರಿ, ತುಳು ಭಾಷೆಯಲ್ಲಿ ಸುಮಾರು 20 ಜನಪ್ರಿಯ ನಾಟಕಗಳನ್ನು ರಚಿಸಿದ್ದಾರೆ. ಇವರ ಪ್ರಥಮ ನಾಟಕ ‘ಕಲ್ಪಂದಿ ತಿಮ್ಮೆ’ 1962ರಲ್ಲಿ ರಂಗ ಪ್ರದರ್ಶನಗೊಂಡಿದೆ. ‘ಬಯ್ಯ ಮಲ್ಲಿಗೆ’ ತುಳು ನಾಟಕ 58 ವರ್ಷಗಳಲ್ಲಿ ದೇಶ – ವಿದೇಶಗಳಲ್ಲಿ ಸುಮಾರು 28 ಸಾವಿರ ಪ್ರದರ್ಶನಗಳನ್ನು ಕಂಡಿದೆ. ‘ಪೊಣ್ಣ ಜನ್ಮ, ‘ಕಾವೇರಿ’, ‘ಬೊಲ್ಲಿ ಮೂಡ್ಂಡ್’, ‘ಪೂ ಪನ್ನೀರ್’, ‘ಪಾದ ಕಾಣಿಕೆ’, ‘ಸರಸ್ವತಿ’, ‘ಒಂಜೇ ಕರ್ಲ್’, ‘ಗಂಗಾ ರಾಮ್’ ಮತ್ತಿತರ ನಾಟಕಗಳನ್ನೂ ರಚಿಸಿದ್ದಾರೆ. ಹಲವು ಚಲನಚಿತ್ರಗಳಿಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದೆ ಇವರು, ರಂಗಭೂಮಿ ಮತ್ತು ಚಲನಚಿತ್ರಗಳ ಜೊತೆಗೆ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು. ‘ಬಯ್ಯ ಮಲ್ಲಿಗೆ’ ನಾಟಕ ಅದೇ ಹೆಸರಿನಲ್ಲಿ ಸಿನಿಮಾ ಆಗಿಯೂ ಮೂಡಿ ಬಂದಿದೆ. ‘ಬೊಳ್ಳಿದೋಟ’ ಸಿನಿಮಾವನ್ನು ಕೂಡಾ ನಿರ್ಮಿಸಿದ್ದಾರೆ. ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ, ರಂಗಚಾವಡಿ ಸಹಿತ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

    award baikady roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಭವ್ಯವಾಗಿ ನೆರವೇರಿದ ‘ಅರಳು 2026’ ಸಮಾರೋಪ ಸಮಾರಂಭ
    Next Article ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬರಹಕ್ಕೆ ಆಹ್ವಾನ | ಕೊನೆಯ ದಿನಾಂಕ ಮೇ 15
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.