Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನ | ಡಿಸೆಂಬರ್ 19

    December 18, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ವಾದಿರಾಜ-ಕನಕ ಗಾಯನ ಸ್ಪರ್ಧೆ’ | ಡಿಸೆಂಬರ್ 27

    December 18, 2025

    ಮೂಡಬಿದಿರೆ ಜೈನಮಠದಲ್ಲಿ ‘ಮಹಾತ್ಮ’ ತುಳು ತಾಳಮದ್ದಳೆ

    December 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ. ಸುಳ್ಯ ತಾಲೂಕು ಘಟಕದಿಂದ ಸಾಹಿತಿ ಡಾ. ಕೆ. ಶಿವರಾಮ ಕಾರಂತರ ಜನ್ಮ ದಿನಾಚರಣೆ
    Literature

    ಕ.ಸಾ.ಪ. ಸುಳ್ಯ ತಾಲೂಕು ಘಟಕದಿಂದ ಸಾಹಿತಿ ಡಾ. ಕೆ. ಶಿವರಾಮ ಕಾರಂತರ ಜನ್ಮ ದಿನಾಚರಣೆ

    October 13, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸಾಂಸ್ಕೃತಿಕ ಸಂಘ ಐಕ್ಯೂಏಸಿ ವಿಭಾಗ ಮತ್ತು ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ಖ್ಯಾತ ಸಾಹಿತಿ ಡಾ. ಕೆ. ಶಿವರಾಮ ಕಾರಂತರ ಜನ್ಮ ದಿನಾಚರಣೆ ಕಾರ್ಯಕ್ರಮವು ದಿನಾಂಕ 10-10-2023ರಂದು ಬೆಳ್ಳಾರೆಯ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

    ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ಇವರು ಶಿವರಾಮ ಕಾರಂತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ “ಶಿವರಾಮ ಕಾರಂತರ ಬದುಕೇ ಯುವಜನರಿಗೆ ಸ್ಫೂರ್ತಿ. ಅವರು ನಿಷ್ಠುರವಾದಿ ನಿಲುವಿನ ಮೂಲಕ ಜೀವನ ಸಾಗಿಸಿ ಮಾದರಿಯಾದವರು” ಎಂದರು.

    ಡಾ.‌ಶಿವರಾಮ ಕಾರಂತರ ಬದುಕು ಬರಹದ ಕುರಿತು ವಿಶೇಷ ಉಪನ್ಯಾಸ ನೀಡಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿಯ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸುಬ್ರಹ್ಮಣ್ಯ ಕೆ. ಇವರು “ವ್ಯಕ್ತಿ ಹೇಗೆ ಬದುಕಬೇಕೆಂಬುದನ್ನು ಸಾಧಿಸಿ ತೋರಿಸಿದವರು ಶಿವರಾಮ ಕಾರಂತರು. ವ್ಯಕ್ತಿ ಹೇಗೆ ಶಕ್ತಿಯಾಗಬಹುದು ಎಂಬುದಕ್ಕೆ ಅವರು ಅತ್ಯುತ್ತಮ ಉದಾಹರಣೆ. ಪ್ರಯೋಗಶೀಲತೆಯ ಮೂಲಕ ಬದುಕಿದವರು‌. ಎಲ್ಲ ನೆಲೆಗಟ್ಟಿನಲ್ಲಿ ಕೆಲಸ ಮಾಡಿದ ಕಾರಂತರು ಬಾಳ್ವೆಯೇ ಬೆಳಕು ಎಂಬುದರ ಮೂಲಕ ಆದರ್ಶರಾದವರು. ಅವರ ಬರಹಗಳು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವಲ್ಲಿ ಅಪಾರ ಕೊಡುಗೆ ನೀಡಿವೆ. ಸಾಹಿತ್ಯದ ಜೊತೆಗೆ ನಿಷ್ಠುರ ಜೀವನದ ಮೂಲಕ ಮಾದರಿಯಾದ ವ್ಯಕ್ತಿತ್ವ ಅವರದು” ಎಂದು ಕಾರಂತರನ್ನು ಬಣ್ಣಿಸಿದರು.

    ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಸಭಾಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಂಘದ ಸಂಚಾಲಕರಾದ ಯತೀಶ್ ಕುಮಾರ್ ಮುಖ್ಯ ಅತಿಥಿಗಳಾಗಿದ್ದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ ಹಾಗೂ ಚಂದ್ರಮತಿ, ಜಿಲ್ಲಾ ಸಾಹಿತ್ಯ ಪರಿಷತ್ತಿನ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ ಸದಸ್ಯ ಸಂಕೀರ್ಣ ಚೊಕ್ಕಾಡಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

    ಶಿವರಾಮ ಕಾರಂತರ ಬದುಕು ಬರಹದ ಕುರಿತು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕು.ನಿರೀಕ್ಷಾ ಸ್ವಾಗತಿಸಿ, ಕು.ಮಾನಸ ಕಾರ್ಯಕ್ರಮ ನಿರೂಪಿಸಿ, ಕು.ಮನೀಷಾ ಧನ್ಯವಾದಗೈದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ವಿ.ವಿ ಗೆ ಡಾ.ಜಯಮಾಲಾರಿಂದ ಪುಸ್ತಕದಾನ
    Next Article ಕಲ್ಕೂರ ಪ್ರತಿಷ್ಠಾನದ ವತಿಯಿಂದ ಹಿರಿಯ ಸಾಹಿತಿ ಡಾ. ಕೋಟ ಶಿವರಾಮ ಕಾರಂತರ ಅರ್ಥಪೂರ್ಣ ಹುಟ್ಟುಹಬ್ಬ ಸಮಾರಂಭ 
    roovari

    Add Comment Cancel Reply


    Related Posts

    ಶ್ರೀ ರಾಮಾಶ್ರಮ ಶಾಲೆಯಲ್ಲಿ 115ನೇಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’

    December 18, 2025

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ತಂದೆ ಬದುಕು ಗುಲಾಬಿ’

    December 17, 2025

    ‘ಭೂತಾರಾಧನೆ’ ಡಾ. ಕೆ. ಚಿನ್ನಪ್ಪ ಗೌಡರ ಸಂಶೋಧನಾ ಕೃತಿ ಬಿಡುಗಡೆ ಸಮಾರಂಭ | ಡಿಸೆಂಬರ್ 20

    December 17, 2025

    ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರೊ. ಬಿ.ಎ. ವಿವೇಕ ರೈ ಇವರಿಂದ ಉಪನ್ಯಾಸ | ಡಿಸೆಂಬರ್ 22ರಿಂದ 24

    December 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.