Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ಶ್ರೀಧರ್ ಎಚ್‌.ಜಿ. ಕೃತಿ ‘ನಾಥ ಪಂಥ’ ಲೋಕಾರ್ಪಣೆ
    Book Release

    ಡಾ. ಶ್ರೀಧರ್ ಎಚ್‌.ಜಿ. ಕೃತಿ ‘ನಾಥ ಪಂಥ’ ಲೋಕಾರ್ಪಣೆ

    July 15, 2023Updated:August 19, 2023No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ವಿವೇಕಾನ೦ದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಕನ್ನಡ ವಿಭಾಗ, ಕನ್ನಡ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಆಂತರಿಕ ಗುಣಮಟ್ಟ ಮತ್ತು ಭರವಸೆ ಘಟಕ ಇದರ ಸಹಯೋಗದಲ್ಲಿ ಡಾ. ಶ್ರೀಧರ ಎಚ್.ಜಿ. ರಚನೆಯ ‘ನಾಥ ಪಂಥ’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ : 13-07-2023ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು.

    ಈ ಕೃತಿಯನ್ನು ಲೋಕಾರ್ಪಣೆ ಮಾಡಿದ ಮೈಸೂರು ಮಹಾರಾಣಿ ಕಲಾ ಕಾಲೇಜಿನ ಪ್ರಾಚಾರ್ಯ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ.ಬಿ.ಎ.ವಸಂತ ಕುಮಾರ್ ಮಾತನಾಡುತ್ತಾ “ನಾಥ ಪಂಥ ಕೃತಿ ವ್ಯಷ್ಟಿಯ ಮೂಲಕ ಹೊರ ಬಂದಿರುವ ಸಮಷ್ಟಿ. ಆತ್ಮಹತ್ಯೆಯೇ ಮುಂದಿನ ದಾರಿ, ಬೇರೆ ಯಾವುದೇ ದಾರಿ ಇಲ್ಲ ಎನ್ನುವ ವ್ಯಕ್ತಿಯ ಮನಸ್ಸನ್ನು ಆತ್ಮ ಮತ್ತು ವಿಕಾಸದೆಡೆಗೆ ಕೊಂಡೊಯ್ಯಲು ನಾಥ ಪಂಥ ಸಹಾಯವಾಗುತ್ತದೆ. ಜೀವನದ ಪ್ರತಿ ಹಂತದಲ್ಲೂ ಈ ಕೃತಿಯ ಪಾತ್ರ ಮಹತ್ವವಾದದ್ದು, ಅಂತೆಯೇ ಪಂಥಗಳ ಕುರಿತು ಅಧ್ಯಯನ ಮಾಡುವವರಿಗೆ ಈ ಪುಸ್ತಕ ಮಾದರಿಯಾಗಲಿದೆ. ಬದುಕಿನಲ್ಲಿ ಸಂತೋಷವನ್ನು ಕಾಣಲು ಇಂತಹ ಪುಸ್ತಕಗಳನ್ನು ಓದಬೇಕು. ಎಲ್ಲರಲ್ಲೂ ಒಂದು ಶಕ್ತಿ ಇರುತ್ತದೆ. ಆ ಶಕ್ತಿಯ ಮೇಲೆ ನಂಬಿಕೆ ಇಡುವುದರ ಮೂಲಕ ಇದನ್ನು ಸಾಕಾರಗೊಳಿಸಿಕೊಳ್ಳಬೇಕು. ನೋವು ಮತ್ತು ಕಷ್ಟದಿಂದ ಹೊರಬರುವುದಕ್ಕಿರುವ ದಾರಿಯೇ ನಾಥ ಪಂಥ. ಪ್ರೀತಿ ಮತ್ತು ಪ್ರಜ್ಞೆ ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ಇವೆರಡನ್ನೂ ಈ ಪುಸ್ತಕ ತಿಳಿಸಿ ಕೊಡುತ್ತದೆ” ಎಂದು ತಿಳಿಸಿದರು.

    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ, “ನಾಥ ಪಂಥ ಒಂದು ಸಂಶೋಧನಾ ಗ್ರಂಥ. ಇದು ಇತಿಹಾಸದ ಸಾಕಷ್ಟು ವಿಚಾರಗಳನ್ನು ತಿಳಿಸಿ ಕೊಡುತ್ತದೆ. ಇಂತಹ ಪುಸ್ತಕಗಳು ಸಂಸ್ಕೃತಿಯನ್ನು ತಿಳಿಸುವುದರ ಜೊತೆಗೆ ಉಳಿಸಲೂ ಮುಂದಿನ ಪೀಳಿಗೆಗೆ ಸಹಕಾರಿಯಾಗಲಿದೆ. ಹೊಸ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ನಿರಾತಂಕವಾಗಿ ರೂಪಿಸಿಕೊಳ್ಳಲು ಪುಸ್ತಕವನ್ನು ಓದಬೇಕೇ ಹೊರತು ಪರೀಕ್ಷೆಯ ದೃಷ್ಟಿಯಿಂದಲ್ಲ” ಎಂದರು.

    ಎಸ್.ಡಿ.ಎಂ. ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಜಶೇಖರ ಹಳೆಮನೆ ಮಾತನಾಡುತ್ತಾ “ಪರಂಪರೆಯನ್ನು ಮುಂದುವರೆಸುವ ಮಹತ್ವದ ಕೃತಿ ಹಾಗೂ ಹಿಂದೂ ಧರ್ಮದ ಕವಲುಗಳನ್ನು ಶೋಧ ಮಾಡುವ ಕೃತಿಯೇ ನಾಥ ಪಂಥ. ವಚನಕಾರರನ್ನು ಅರ್ಥ ಮಾಡಿಕೊಳ್ಳಲು ಈ ಕೃತಿ ಸಹಾಯಕವಾಗುತ್ತದೆ. ಇಂತಹ ಪುಸ್ತಕಗಳನ್ನು ಬರೆಯಲು ಸಂತನಿಂದ ಮಾತ್ರ ಸಾಧ್ಯ’ ಎಂದರು.

    ಈ ಸಂದರ್ಭ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ಮುರಳೀಕೃಷ್ಣ ಕೆ.ಎನ್. ಶುಭಾಶಂಸನೆಗೈದರು. ಕೃತಿಯ ಲೇಖಕ, ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ ಕುಲಸಚಿವರಾದ ಡಾ. ಶ್ರೀಧರ್ ಎಚ್‌.ಜಿ. ಪ್ರಸ್ತಾವಿಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್‌. ವಂದಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಗೀತಾ ಕುಮಾರಿ ಟಿ. ನಿರ್ವಹಿಸಿದರು.

    ಡಾ. ಶ್ರೀಧರ್ ಎಚ್.ಜಿ. ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆ ಹಳ್ಳ ಎಂಬ ಊರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ. ಪದವಿಯನ್ನು ಪ್ರಥಮ ರ್ಯಾಂ ಕ್ ಮತ್ತು ಚಿನ್ನದ ಪದಕದೊಂದಿಗೆ ಉತ್ತೀರ್ಣರಾಗಿದ್ದಾರೆ.
    ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ಇವರ ಮಾರ್ಗದರ್ಶನದಲ್ಲಿ ‘ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಯುದ್ಧಕಲೆ’ (ಕ್ರಿ.ಶ.450ರಿಂದ 1350) ಎಂಬ ವಿಷಯವನ್ನು ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದರು. 1987ರಿಂದ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಪ್ರಸ್ತುತ ವಿಭಾಗ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಕಾಲೇಜಿನ ಆಂತರಿಕ ಭರವಸೆ ಕೋಶದ ಸಂಯೋಜಕರಾಗಿ ಕೆಲಸವನ್ನು ನಿರ್ವಹಿಸಿದ ಇವರು ನ್ಯಾಕ್ ಸಮಿತಿಯ ಮೂರನೆಯ ಭೇಟಿಯಲ್ಲಿ ಕಾಲೇಜಿಗೆ ‘ಎ’ ಗ್ರೇಡ್ ಬರುವಲ್ಲಿ ವಿಶೇಷವಾಗಿ ಶ್ರಮಿಸಿದ್ದಾರೆ. ಕರ್ನಾಟಕ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಇತ್ಯಾದಿ ಕನ್ನಡಪರ ಸಂಘಟನೆಗಳಲ್ಲಿ ಕಾರ್ಯದರ್ಶಿಗಳಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಅನುಭವಿಗಳು. 2022ರ ಸೆಪ್ಟಂಬರ್‌ನಲ್ಲಿ ನಡೆದ ಪುತ್ತೂರು ತಾಲೂಕು 21ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸುವ ಅವಕಾಶ ದೊರೆತದ್ದು ಸಾಹಿತ್ಯ ಕ್ಷೇತ್ರದಲ್ಲಿ ಇವರು ಮಾಡಿದ ಸೇವೆಗೆ ಸಂದ ಗೌರವ.

    ಇವರ ಪ್ರಕಟಿತ ಕೃತಿಗಳು :
    ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಯುದ್ಧಕಲೆ, ಪ್ರೊ. ಎಂ. ಮರಿಯಪ್ಪ ಭಟ್ಟ – ಜೀವನ ಸಾಧನೆ, ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ಯುದ್ಧವರ್ಣನೆಗಳು, ವಿದ್ವತ್ತೆಗೆ ರೂಪಕ ಕಡವ ಶಂಭುಶರ್ಮ, ಕರಾವಳಿಯ ರಾಜಕೀಯ ಮುತ್ಸದ್ಧಿ ಉರಿಮಜಲು ಕೆ. ರಾಮಭಟ್, ಗೀತಾಸಾರದ ಕವಿ ಬಡೆಕ್ಕಿಲ ವೆಂಕಟರಮಣ ಭಟ್ಟ, ಶಾಸ್ತ್ರ ಸಂಕಲ್ಪ (ಸಂಶೋಧನಾ ಲೇಖನಗಳ ಸಂಕಲನ), ನವೋದಯ ಗಣ್ಯ ಸಾಹಿತಿ ಮಚ್ಚಿಮಲೆ ಶಂಕರನಾರಾಯಣ ರಾಯರು, ರಸದಾಳಿ (ಸಂಶೋಧನಾ ಲೇಖನಗಳ ಸಂಕಲನ), ನಾಥಪಂಥ (ದೇಸಿ ದರ್ಶನ ಮಾಲೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು), ‘ಶಿಖಂಡಿ’ (ಬಿಡುಗಡೆಯ ಕಥನ) ಇದು ನಾಟಕ ಕೃತಿ. ‘ಪ್ರಸ್ಥಾನ: ಬದುಕು ಮುಳುಗಿದ ಕಥನ 2021 (ರಾಜ್ಯಮಟ್ಟದ ಚಡಗ ಕಾದಂಬರಿ ಪ್ರಶಸ್ತಿ ಪುರಸ್ಕೃತ ಕೃತಿ) ಚಪಡ :ಇದು ಅಕ್ಷರದ ಪಯಣ 2021 (ರಾಜ್ಯಮಟ್ಟದ ಪ್ರೊ.ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಕೃತಿ) ಇವು ಇವರ ರಚನೆಯ ಕಾದಂಬರಿಗಳು.

    ಡಾ. ಶ್ರೀಧರರು ರಚಿಸಿದ ಐವತ್ತಕ್ಕಿಂತಲೂ ಹೆಚ್ಚು ಸಂಶೋಧನಾ ಲೇಖನಗಳು ಪ್ರಕಟವಾಗಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವಾರು ಪ್ರತಿಷ್ಟಿತ ಗೋಷ್ಟಿಗಳಲ್ಲಿ ಭಾಗವಹಿಸಿದ ಇವರು ಸುಮಾರು ಎಂಬತ್ತಕ್ಕಿಂತಲೂ ಹೆಚ್ಚು ಪ್ರಭಂಧಗಳನ್ನು ಮಂಡಿಸಿದ್ದು, ಮಾತ್ರವಲ್ಲದೆ ಸುಮಾರು ಹದಿನಾರಕ್ಕಿಂತಲೂ ಹೆಚ್ಚು ಸಂಪಾದಿತ ಕೃತಿಗಳು ಇವರ ಲೇಖನಿಯಿಂದ ಮೂಡಿಬಂದಿರುವುದು ಇವರ ಹೆಗ್ಗಳಿಕೆ. ಸಹಸಂಪಾದಕರಾಗಿಯೂ ಕೆಲಸ ಮಾಡಿದ ಇವರು ಮಂಗಳೂರು ವಿಶ್ವವಿದ್ಯಾಲಯದ ಪದವಿ ತರಗತಿಗಳ ಪಠ್ಯಪುಸ್ತಕಗಳ ಸಂಪಾದಕರಾಗಿಯೂ ಕೆಲಸ ಮಾಡಿದ್ದು ಶ್ಲಾಘನೀಯ.

    ‘ಸಹೃದಯ ಪ್ರಾಧ್ಯಾಪಕ ಪ್ರಶಸ್ತಿ’, ‘ಸಾಧಕ ಗೌರವ ಪ್ರಶಸ್ತಿ’, ‘ರಾಜ್ಯೋತ್ಸವ ಪ್ರಶಸ್ತಿ’, ‘ಪ್ರೊ.ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’, ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’, ‘ಚಡಗ ರಾಜ್ಯ ಮಟ್ಟದ ಪ್ರಶಸ್ತಿ’ ‘ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ’, ಇವೆಲ್ಲಾ ಪ್ರಶಸ್ತಿಗಳು ಸಾಹಿತ್ಯದ ವಿವಿಧ ಮಜಲುಗಳಲ್ಲಿ ಡಾ.ಶ್ರೀಧರ್ ಮಾಡಿದ ಶ್ರದ್ಧೆ ಮತ್ತು ಪ್ರಾಮಾಣಿಕ ಸೇವೆಗೆ ಪ್ರತಿಯಾಗಿ ಜನತೆ ನೀಡಿದ ಪುರಸ್ಕಾರ.

    Share. Facebook Twitter Pinterest LinkedIn Tumblr WhatsApp Email
    Previous Article‘ಕೇಶವ ಭಟ್ಟ ಪ್ರಶಸ್ತಿ’ಗೆ ಹಿರಿಯ ಜಾನಪದ ವಿದ್ವಾಂಸರಾದ ಡಾ. ಎನ್.ಆರ್. ನಾಯಕ್ ಮತ್ತು ಡಾ. ಹರಿಕೃಷ್ಣ ಭರಣ್ಯ ಆಯ್ಕೆ
    Next Article ಕಾರ್ಕಳದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಮೈಸೂರಿನಲ್ಲಿ ಸಿತಾರ್ ವಾದನ, ಪುಸ್ತಕ ಲೋಕಾರ್ಪಣೆ ಮತ್ತು ಸಿತಾರ್ ತರಗತಿಗಳ ಪ್ರಾರಂಭೋತ್ಸವ | ಮೇ 31

    May 30, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.