Subscribe to Updates

    Get the latest creative news from FooBar about art, design and business.

    What's Hot

    ಯಕ್ಷದೇಗುಲ ಕಾಂತಾವರದ ‘ಯಕ್ಷೋಲ್ಲಾಸ’ | ಜುಲೈ 20

    July 18, 2025

    ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನದಲ್ಲಿ ಸಮಾರೋಪಗೊಂಡ ಯಕ್ಷಗಾನ ತರಬೇತಿ

    July 18, 2025

    ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯಲ್ಲಿ ಪ್ರಾರಂಭಗೊಂಡ ಯಕ್ಷಶಿಕ್ಷಣ

    July 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿಶ್ವ ಕೊಂಕಣಿ ನಾಟಕ ಮಹೋತ್ಸವದಲ್ಲಿ ನಾಟಕ ಪ್ರದರ್ಶನ ಮತ್ತು ರಂಗಶ್ರೇಷ್ಠ, ಅನುವಾದ ಪ್ರಶಸ್ತಿ ಪ್ರದಾನ | ಫೆಬ್ರವರಿ 08
    Awards

    ವಿಶ್ವ ಕೊಂಕಣಿ ನಾಟಕ ಮಹೋತ್ಸವದಲ್ಲಿ ನಾಟಕ ಪ್ರದರ್ಶನ ಮತ್ತು ರಂಗಶ್ರೇಷ್ಠ, ಅನುವಾದ ಪ್ರಶಸ್ತಿ ಪ್ರದಾನ | ಫೆಬ್ರವರಿ 08

    February 7, 2025Updated:February 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ವಿಶ್ವ ಕೊಂಕಣಿ ಕೇಂದ್ರ ವತಿಯಿಂದ ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಹಾಗೂ ಅನುವಾದ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 08 ಫೆಬ್ರವರಿ 2025ರಂದು ಸಂಜೆ 4-00 ಗಂಟೆಗೆ ನಗರದ ಕೊಡಿಯಾಲ್ ಬೈಲ್‌ನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಡೆಯಲಿದೆ.

     

    ಹಿರಿಯ ರಂಗಕರ್ಮಿ ಗುಲ್ವಾಡಿ ರಾಮದಾಸ್ ದತ್ತಾತ್ರೇಯ ಭಟ್ ಇವರು ಈ ಬಾರಿಯ ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಪ್ರಶಸ್ತಿ ಹಾಗೂ ಹಿರಿಯ ಸಾಹಿತಿ-ಅನುವಾದಕಿ ಡಾ. ಗೀತಾ ಶೆಣೈಯವರು ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ಅನುವಾದ ಪ್ರಶಸ್ತಿ ಸ್ವೀಕರಿಸಲಿರುವರು.

     

    ಈ ಅಂತಾರಾಜ್ಯ ಕೊಂಕಣಿ ನಾಟಕ ಮಹೋತ್ಸವದಲ್ಲಿ ಎರಡು ಪ್ರಸಿದ್ಧ ಕೊಂಕಣಿ ನಾಟಕಗಳ ಪ್ರದರ್ಶನ ನಡೆಯಲಿದ್ದು, ನೆರೆಯ ಮಹಾರಾಷ್ಟ್ರದ ಸುಧಾಕರ ಭಟ್ ಅವರ ನೇತೃತ್ವದ ಪ್ರಸಿದ ಕಲಾತಂಡ ಅಮ್ಮಿ ರಂಗಕರ್ಮಿ (ರಿ.) ಮುಂಬೈ ಇವರು ‘ಪೋಸ್ಟ್ ಕಾರ್ಡ್’ ಮತ್ತು ಕರ್ನಾಟಕ ಕೇರಳ ರಾಜ್ಯಗಳನ್ನು ಪ್ರತಿನಿಧಿಸಿ ಕಾಸರಗೋಡು ಚಿನ್ನಾ ಅವರ ನೇತೃತ್ವದ ರಂಗ ಚಿನ್ನಾರಿ ಕಾಸರಗೋಡು-ಅಭಿನಯಿಸುವ ಜನಪ್ರಿಯ ‘ಕರ್ಮಾಧೀನ್’ ಕೊಂಕಣಿ ನಾಟಕ ಪ್ರದರ್ಶನಗೊಳ್ಳಲಿದೆ.

     

    award drama konkani
    Share. Facebook Twitter Pinterest LinkedIn Tumblr WhatsApp Email
    Previous Articleಬೆಳ್ತಂಗಡಿಯಲ್ಲಿ ಭರತನಾಟ್ಯಂ ರಂಗಪ್ರವೇಶ ಕಾರ್ಯಕ್ರಮ | ಫೆಬ್ರವರಿ 15
    Next Article ‘ಎಸ್.ಪಿ. ವರದರಾಜು ವಾರ್ಷಿಕ ಪ್ರಶಸ್ತಿ’ಪ್ರದಾನ ಸಮಾರಂಭ | ಫೆಬ್ರವರಿ 11
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ಜುಲೈ 19

    July 18, 2025

    ಬೆಂಗಳೂರಿನಲ್ಲಿ ‘ಕೇರಳ – ಕರ್ನಾಟಕ ಕನ್ನಡ ನುಡಿ ಸಂಭ್ರಮ’ | ಜುಲೈ 20

    July 18, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಕಣಿವೆಯ ಹಾಡು’ | ಜುಲೈ 20

    July 18, 2025

    ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪಣಂಬೂರು ವೆಂಕಟರಾಯ ಐತಾಳ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ

    July 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.