Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪೆರ್ವಾಜೆ ಶಾಲೆಯಲ್ಲಿ ನಾಟಕ ಮತ್ತು ಕವನ ಸಂಕಲನ ಕೃತಿ ಬಿಡುಗಡೆ ಕಾರ್ಯಕ್ರಮ
    Book Release

    ಪೆರ್ವಾಜೆ ಶಾಲೆಯಲ್ಲಿ ನಾಟಕ ಮತ್ತು ಕವನ ಸಂಕಲನ ಕೃತಿ ಬಿಡುಗಡೆ ಕಾರ್ಯಕ್ರಮ

    May 27, 2025Updated:May 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಶಾರದಾ ಮಹಿಳಾ ಮಂಡಲದ ಅಧ್ಯಕ್ಷೆ ಸಾವಿತ್ರಿ ಮನೋಹರ ಇವರ ಹಾಗೂ ಪುತ್ರಿ ಸ್ವಾತಿ ಅಜಿತ್ ಶರ್ಮರವರ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 19 ಮೇ 2025ರಂದು ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆ ಹಾಗೂ ಶಾರದಾ ಮಹಿಳಾ ಮಂಡಳಿ ಅನಂತಶಯನ ಇವುಗಳ ಸಹಭಾಗಿತ್ವದಲ್ಲಿ ಪೆರ್ವಾಜೆ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.

    ನಿವೃತ್ತ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಮನೋಹರರವರು ತಮ್ಮ ಕೃತಿಯ ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು. ಇವರ ‘ಮಾನನಿಧಿ ಮೌನವಾದ’ ಎಂಬ ನಾಟಕ ಕೃತಿಯನ್ನು ಲೇಖಕಿ ಡಾ. ಜಾನಕಿ ಸುಂದರೇಶ್ ಬಿಡುಗಡೆ ಮಾಡಿ ಕೃತಿಯ ಕುರಿತು ಮಾತನಾಡಿದರು. ಸ್ವಾತಿ ಅಜಿತ್ ಶರ್ಮರವರ ‘ಪಂಜರದೊಳಗಿನ ಪಕ್ಷಿ’ ಚೊಚ್ಚಲ ಕವನ ಸಂಕಲನವನ್ನು ಇವರ ಹೆತ್ತವರಾದ ನಿವೃತ್ತ ಮುಖ್ಯೋಪಾಧ್ಯಾಯರಾದ ಮನೋಹರ ರಾವ್ ಹಾಗೂ ಸಾವಿತ್ರಿ ಮನೋಹರರವರು ಲೋಕಾರ್ಪಣೆ ಮಾಡಿದರು. ಸ್ವಾತಿ ಅಜಿತ್ ಶರ್ಮ ತಮ್ಮ ಕೃತಿಯ ಕುರಿತು ಮಾತನಾಡಿದರು. ನಿವೃತ್ತ ಅಧ್ಯಾಪಕಿ ಸುಲೋಚನ ತಿಲಕ್ ‘ಪಂಜರದೊಳಗಿನ ಪಕ್ಷಿ’ ಕೃತಿಯ ಕುರಿತು ಮಾತನಾಡಿದರು.

    ಅಧ್ಯಕ್ಷತೆಯನ್ನು ಜಾಗೃತಿಯ ಅಧ್ಯಕ್ಷೆ ಪ್ರೊ. ಮಿತ್ರಪ್ರಭಾ ಹೆಗ್ಡೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೂರ್ಣಚಂದ್ರ ಹಂದಿಗೋಡು ಇವರ ತೆಂಗಿನ ಕರಟದಿಂದ ಮಾಡಿದ ಕರಕುಶಲ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಕನ್ನಡದಲ್ಲಿ ಪೂರ್ಣ ಅಂಕಗಳನ್ನು ಪಡೆದ ಕುಮಾರಿ ಅಕ್ಷರರನ್ನು ಸನ್ಮಾನ ಮಾಡಲಾಯಿತು. ಪ್ರಾರ್ಥನೆಯನ್ನು ಕುಮಾರಿ ಆದ್ಯಾ ಶರ್ಮ, ವಿಶ್ರುತ್ ಶರ್ಮ, ನಿರ್ಜರ ರಾವ್, ಓಂಕಾರ್ ರಾವ್ ರವರು ನೆರವೇರಿಸಿದರು. ಸ್ವಾಗತವನ್ನು ಜಾಗೃತಿಯ ಕಾರ್ಯದರ್ಶಿ ಮಾಲತಿ ಜಿ. ಪೈ, ಧನ್ಯವಾದ ಶಿಕ್ಷಕಿ ಲಕ್ಷ್ಮಿ ಹೆಗ್ಡೆ, ಕಾರ್ಯಕ್ರಮ ನಿರೂಪಣೆ ಶಿಕ್ಷಕಿ ಜ್ಯೋತಿ ಪಾಠಕ್ ನಿರ್ವಹಿಸಿದರು.

    baikady Book release felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಅರೆಹೊಳೆಯ ನಂದಗೋಕುಲ ರಂಗಶಾಲೆಯಲ್ಲಿ ವಸತಿ ಸಹಿತ 45 ದಿನಗಳ ‘ರಂಗ ಶಿಕ್ಷಣ’ | ಜುಲೈ
    Next Article ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ‘ಬೆಳದಿಂಗಳ ಸೋನೆಮಳೆ’ ಆಯ್ಕೆ
    roovari

    Add Comment Cancel Reply


    Related Posts

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.