Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೈಂದೂರು ಶ್ರೀ ಶಾರದಾ ವೇದಿಕೆಯಲ್ಲಿ ಮೂಡಬಿದಿರೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ
    Drama

    ಬೈಂದೂರು ಶ್ರೀ ಶಾರದಾ ವೇದಿಕೆಯಲ್ಲಿ ಮೂಡಬಿದಿರೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ

    March 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೈಂದೂರು : ಬೈಂದೂರು ಶ್ರೀ ಶಾರದಾ ವೇದಿಕೆಯಲ್ಲಿ ‘ಲಾವಣ್ಯ’ದ ‘ರಂಗಪಂಚಮಿ-2024’ ಐದು ದಿನಗಳ ನಾಟಕೋತ್ಸವದ ನಾಲ್ಕನೇ ದಿನದ ಕಾರ್ಯಕ್ರಮವು ದಿನಾಂಕ 05-03-2024ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದ ಖ್ಯಾತ ರಂಗ ನಿರ್ದೇಶಕ ಡಾ. ಜೀವನ್‌ರಾಂ ಸುಳ್ಯ “ಅಭಿವೃದ್ಧಿಯ ನೆಪದಲ್ಲಿ ಜಲ, ವಾಯು, ಭೂಮಿಯ ಮೇಲೆ ಜನರು ಪ್ರಹಾರ ಮಾಡುತ್ತಿದ್ದು, ಆ ಮೂಲಕ ನಮ್ಮೊಳಗಿನ ಸಂಬಂಧಗಳು ಬೇರ್ಪಡುತ್ತಾ ಹೋಗುತ್ತಿದೆ. ಆದರೆ ರಂಗಭೂಮಿಯ ಮೂಲಕ ‘ಲಾವಣ್ಯ’ವು ಸಂಬಂಧವನ್ನು ಗಟ್ಟಿಮಾಡುವ ಪ್ರಯತ್ನ ಮಾಡುತ್ತಿದೆ. ಕಲಾವಿದರು ದೇಶದ ಸಾಂಸ್ಕೃತಿಕ ಸ್ವತ್ತಾಗಿದ್ದು, ಒಂದು ಊರಿನಲ್ಲಿ ಕಲಾವಿದರ ಸಂಖ್ಯೆ ಗರಿಷ್ಠವಾಗಿದ್ದರೆ ಅದು ಶ್ರೀಮಂತವಾದ ಊರಾಗಿರುತ್ತದೆ. ಕಳೆದ 46 ವರ್ಷಗಳಿಂದ ಹಲವು ತ್ರಾಸದಾಯಕ ಪರಿಸ್ಥಿತಿಯನ್ನು ಎದುರಿಸಿಯೂ, ತಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೇ, ಪರಸ್ಪರ ವಿಶ್ವಾಸದಿಂದ ಮುನ್ನೆಡೆದುಕೊಂಡು ಹೋಗುತ್ತಿರುವುದಲ್ಲದೇ, ಈ ಭಾಗದ ಜನರಿಗೆ ಮನೋರಂಜನೆಯೊಂದಿಗೆ ಉತ್ತಮ ಸಂದೇಶ ನೀಡುವ ಕೆಲಸ ಮಾಡುತ್ತಿದೆ” ಎಂದು ಶ್ಲಾಘಿಸಿದರು.

    ‘ಲಾವಣ್ಯ’ದ ಹಿರಿಯ ಸದಸ್ಯ ಸದಾಶಿವ ಶ್ಯಾನುಭೋಗ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಂಚೆ ಸೇವಕ ಶಂಕರ ನಾಯ್ಕ್ ಹಾಗೂ ಚಲನಚಿತ್ರ ಹಿನ್ನೆಲೆ ಗಾಯಕಿ ವಿಜಯಲಕ್ಷ್ಮೀ ಮೆಟ್ಟಿನಹೊಳೆ ಇವರನ್ನು ಸನ್ಮಾನಿಸಲಾಯಿತು. ಉದ್ಯಮಿ ನಾಕಟ್ಟೆ ಜಗನ್ನಾಥ ಶೆಟ್ಟಿ, ಉಪ್ಪುಂದ ಜೆಸಿಐ ಘಟಕದ ಅಧ್ಯಕ್ಷ ಮಂಜುನಾಥ ದೇವಾಡಿಗ, ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ, ಯು.ಬಿ.ಎಸ್. ಅಂಗ್ಲಮಾಧ್ಯಮ ಶಾಲಾ ಪ್ರತಿನಿಧಿ ಪ್ರೇಮಾ ವಿನಾಯಕ ಶೆಟ್ಟಿ ಉಪಸ್ಥಿತರಿದ್ದರು. ‘ಲಾವಣ್ಯ’ದ ನಿಕಟಪೂರ್ವಾಧ್ಯಕ್ಷ ಹರೇಗೋಡು ಉದಯ್ ಅಚಾರ್ಯ ಸ್ವಾಗತಿಸಿ, ಎಸ್. ಗಣಪತಿ ನಿರೂಪಿಸಿ, ರೋಶನ್ ವಂದಿಸಿದರು. ನಂತರ ಮೂಡಬಿದಿರೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ‘ನಾಯಿಮರಿ’ ನಾಟಕ ಪ್ರದರ್ಶಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸೋಮವಾರಪೇಟೆಯಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ
    Next Article ಶ್ರೀ ಭೈರವನಾಥೇಶ್ವರ ಸೇವಾ ಸಮಿತಿಯಿಂದ ಅವಿಭಜಿತ ಉಡುಪಿ-ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.