Subscribe to Updates

    Get the latest creative news from FooBar about art, design and business.

    What's Hot

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ತುಳು ಸಾಹಿತಿ ಸುಂದರ ಬಾರಡ್ಕ ಇವರಿಗೆ ‘ದ್ರಾವಿಡ ಭಾಷಾ ಸಾಹಿತ್ಯ ಪುರಸ್ಕಾರ’
    Awards

    ಕನ್ನಡ ತುಳು ಸಾಹಿತಿ ಸುಂದರ ಬಾರಡ್ಕ ಇವರಿಗೆ ‘ದ್ರಾವಿಡ ಭಾಷಾ ಸಾಹಿತ್ಯ ಪುರಸ್ಕಾರ’

    May 8, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ನವಪುರಂ ಪುಸ್ತಕ ದೇವಾಲಯದ ಆಶ್ರಯದಲ್ಲಿ ಚೆರುಶ್ಶೇರಿ ಕಲಾ ಸಾಹಿತ್ಯ ಸಭಾ ಏರ್ಪಡಿಸಿದ ದ್ರಾವಿಡ ಭಾಷಾ ಸಾಹಿತ್ಯ ಪುರಸ್ಕಾರಕ್ಕೆ ಕನ್ನಡ ಮತ್ತು ತುಳು ಸಾಹಿತಿ ಸುಂದರ ಬಾರಡ್ಕ ಆಯ್ಕೆಯಾಗಿದ್ದು ದಿನಾಂಕ 04-05-2024ರಂದು ನವಪುರಂ ಮಹೋತ್ಸವದಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ಬಹು ಭಾಷಾ ಸಾಹಿತ್ಯ ಗೋಷ್ಠಿ, ವಿಚಾರ ಸಂಕಿರಣ, ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ಜರಗಿದವು.

    ಕವನ, ಕಥೆ, ಲೇಖನಗಳನ್ನು ಬರೆಯುತ್ತಿರುವ ಸುಂದರ ಬಾರಡ್ಕ ಅವರು ಜಾನಪದ ವೈದ್ಯ ವಿಭಾಗಕ್ಕೆ ಸಂಬಂಧಿಸಿ ಶೋಧನೆ ನಡೆಸಿದ್ದಾರೆ. ಸ್ಥಳೀಯ ಇತಿಹಾಸ, ಜನಾಂಗಿಕ ಅಧ್ಯಯನದಲ್ಲೂ ತೊಡಗಿಸಿಕೊಂಡಿದ್ದಾರೆ. ಕಪ್ಪು ಹಾದಿಯ ಕೆಂಪು ಹೆಜ್ಜೆಗಳು, ಮಿತ್ತಮ್ಮನ ಕೆಡೆಂಜೋಳು, ಪೊಲದ್ಯೆ, ನೆಲದನಿ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ಜಿಲ್ಲಾಮಟ್ಟದ ಕವಿಗೋಷ್ಠಿ ವಿಚಾರಗೋಷ್ಠಿಗಳಲ್ಲೂ ಭಾಗವಹಿಸಿದ್ದ ಇವರು ಕೇರಳ ತುಳು ಅಕಾಡೆಮಿ, ಕನ್ನಡ ಸಾಹಿತ್ಯ ಪರಿಷತ್ ಸಹಿತ ಹಲವು ಸಂಸ್ಥೆಗಳಿಂದ ಗೌರವಾಭಿನಂದನೆ ಗಳಿಸಿದ್ದಾರೆ.

    ಅಕ್ಷರ ದೀಪವನ್ನು ಹಚ್ಚಿ ಅದರ ಬೆಳಕಿನಲ್ಲಿ ವಿಶ್ವವನ್ನು ಸ್ಪರ್ಶಿಸಿ ಅದನ್ನು ದರ್ಶಿಸುವ ನವಪುರಂ ಪುಸ್ತಕ ದೇವಾಲಯದಲ್ಲಿ ಪುಸ್ತಕ ಪ್ರತಿಷ್ಠೆ ಮಾಡಲಾಗಿದೆ. ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲೇ ಇಂತಹಾ ದೇವಾಲಯ ಬೇರೆ ಇಲ್ಲ. ಇಲ್ಲಿ ಪುಸ್ತಕವನ್ನು ಪೂಜಿಸುವ ಮೂಲಕ ಮನುಷ್ಯ ಮನಸ್ಸಿನಲ್ಲಿ ಅರಿವಿನ ಬೆಳಕನ್ನು ಹಚ್ಚಲಾಗುತ್ತದೆ. ಜಾತಿ, ಮತ, ಧರ್ಮ, ಭಾಷಾ ಭೇದವಿಲ್ಲದೆ ಎಲ್ಲರಿಗೂ ಈ ದೇವಾಲಯಕ್ಕೆ ಪ್ರವೇಶವಿದೆ. ಕಣ್ಣೂರು ಜಿಲ್ಲೆಯ ಚೆರುಪುಳ ಸಮೀಪದ ಗ್ರಾಮದಲ್ಲಿ ಎತ್ತರವಾದ ಗುಡ್ಡೆಯನ್ನು ಅಗೆದು ಕಲಾಗ್ರಾಮವಾಗಿಸಲಾಗಿದೆ. ಇದರ ಸ್ಥಾಪಕರು ಹಾಗೂ ಪ್ರಧಾನ ಅರ್ಚಕರು ಪ್ರಾಪೊಯಿಲ್ ನಾರಾಯಣನ್ ಮಾಸ್ಟರ್. ಅವರೊಬ್ಬ ಅಧ್ಯಾಪಕರಾಗಿದ್ದು, ಐದು ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ಚೆರುಪುಳದಲ್ಲಿ ವಿದ್ಯಾಲಯವೊಂದನ್ನು ನಡೆಸುತ್ತಿದ್ದಾರೆ. ಅದರಲ್ಲಿ ಲಭಿಸಿದ ಆದಾಯದ ಒಂದಂಶವನ್ನು ಈ ಪುಸ್ತಕ ದೇವಾಲಯಕ್ಕೆ ವಿನಿಯೋಗಿಸುತ್ತಿದ್ದಾರೆ. ವಿವಿದೆಡೆಗಳಿಂದ ಸಾಹಿತಿ, ಕಲಾವಿದರು, ಪುಸ್ತಕ ಪ್ರೇಮಿಗಳು ಇಲ್ಲಿಗೆ ಬರುತ್ತಾರೆ. ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಈ ದೇವಾಲಯದಲ್ಲಿ ವರ್ಷಂಪ್ರತಿ ಮಹೋತ್ಸವವನ್ನು ಆಯೋಜಿಸಲಾಗುತ್ತಿದೆ. ನವಪುರಂ ಪುಸ್ತಕ ದೇವಾಲಯದ ವತಿಯಿಂದ ದ್ರಾವಿಡ ಭಾಷಾ ಸಾಹಿತ್ಯ ಪ್ರಶಸ್ತಿಯನ್ನು ಬಹು ಭಾಷಾ ಸಾಹಿತಿಗಳಿಗೆ ನೀಡಲಾಗುತ್ತಿದೆ. ಈ ಬಾರಿ ತುಳು – ಕನ್ನಡ ಸಾಹಿತಿ ಸಂಘಟಕ ಸಾಂಸ್ಕೃತಿಕ ಸಂಪನ್ಮೂಲ ವ್ಯಕ್ತಿ ಸುಂದರ ಬಾರಡ್ಕ ಇವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ಪಾತಾಳ ಕಲಾ ಮಂಗಳ ಪ್ರಶಸ್ತಿ’ ಪ್ರದಾನ 
    Next Article ಬೇಕಲ ಗೋಕುಲಂ ಗೋಶಾಲೆಯ ಪರಂಪರಾ ವಿದ್ಯಾಪೀಠದಲ್ಲಿ ನೃತ್ಯೋತ್ಸವ | ಮೇ 8ರಿಂದ 16
    roovari

    Add Comment Cancel Reply


    Related Posts

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಕಾಂತಾವರ ಕನ್ನಡ ಭವನದಲ್ಲಿ ಸಾಧಕರಿಗೆ ದತ್ತಿ ಪ್ರಶಸ್ತಿ ಪ್ರದಾನ

    January 3, 2026

    ವೀರರಾಣಿ ಅಬ್ಬಕ್ಕ ಪ್ರಶಸ್ತಿ ಮತ್ತು ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 15

    January 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.