Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಡಬದಲ್ಲಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ
    Competition

    ಕಡಬದಲ್ಲಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ

    October 15, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಡಬ: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಉಪ ವಲಯ ಅರಣ್ಯ ಅಧಿಕಾರಿಗಳ ಸಂಘ ಮಂಗಳೂರು ವಿಭಾಗದ ವತಿಯಿಂದ ವನ್ಯಜೀವಿ ಸಪ್ತಾಹದ ಪ್ರಯುಕ್ತ ಜಿಲ್ಲಾ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ದಿನಾಂಕ 07 ಅಕ್ಟೋಬರ್ 2024ರಂದು ಕಡಬದ ಸೈಂಟ್ ಜೋಕಿಮ್ ಸಭಾಭವನದಲ್ಲಿ ಜರಗಿತು.

    ಸುಬ್ರಹ್ಮಣ್ಯ ವಲಯ ಅರಣ್ಯ ಅಧಿಕಾರಿ ವಿಮಲ್ ಬಾಬು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಅರಣ್ಯ ಇಲಾಖೆಯ ಮಂಗಳೂರು ವಿಭಾಗದ ಡಿ. ಸಿ. ಎಫ್. ಅಂಟೋನಿ ಮರಿಯಪ್ಪ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಿದರು. ಉಪ ವಲಯ ಅರಣ್ಯ ಅಧಿಕಾರಿಗಳ ಸಂಘ ಮಂಗಳೂರು ಇದರ ಗೌರವಾಧ್ಯಕ್ಷ ಸಂತೋಷ್ ರೈ ಹಾಗೂ ಕಡಬದ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ, ಸುಳ್ಯ ಎ. ಸಿ. ಎಫ್. ಪ್ರವೀಣ್ ಕುಮಾರ್ ಶೆಟ್ಟಿ ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಕಾಶ್ ಅಗಸಿ ಪಂಜ, ಮೋತಿಲಾಲ್ ಸುಬ್ರಹ್ಮಣ್ಯ, ಶಿವಾನಂದ ಶಿಂಪಿ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.ಸ್ಪರ್ಧೆಯಲ್ಲಿ ಸುಮಾರು 170 ವಿದ್ಯಾರ್ಥಿಗಳು ಭಾಗವಹಿಸಿದ್ದರು.

     

    ಸ್ಪರ್ಧೆಯನ್ನು 1ನೇ ತರಗತಿಯಿಂದ 3ನೇ ತರಗತಿವರೆಗೆ ಹಾಗೂ 4ನೇ ತರಗತಿಯಿಂದ 7ನೇ ತರಗತಿಗಳವರೆಗೆ ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿತ್ತು. ಮೊದಲ ವಿಭಾಗದಲ್ಲಿ ‘ಭಾರತೀಯ ಹಬ್ಬ’ ಹಾಗೂ ಎರಡನೇ ವಿಭಾಗದಲ್ಲಿ ‘ಕಡಲ ಕಿನಾರೆ’ ಸ್ಪರ್ಧೆಯ ವಿಷಯವಾಗಿತ್ತು. ಮೊದಲ ವಿಭಾಗದಲ್ಲಿ ಆಹಾನ್ ಪ್ರಥಮ, ಶಾನ್ವಿ ದ್ವಿತೀಯ ಹಾಗೂ ಆದಿತ್ಯ ತಂತ್ರಿ ತೃತೀಯ ಸ್ಥಾನ ಪಡೆದರು. ಎರಡನೇ ವಿಭಾಗದಲ್ಲಿ ಹನ್ಸಿಕಾ ಪ್ರಥಮ, ಸಚಿ ಕೆ. ದ್ವಿತೀಯ ಹಾಗೂ ಮನ್ವಿತ್ ಕೆ. ಎಲ್. ತೃತೀಯ ಬಹುಮಾನವನ್ನು ಪಡೆದರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗೀಶ್ ಸುಬ್ರಹ್ಮಣ್ಯ ಸ್ವಾಗತಿಸಿ, ಯಶೋಧರ ಪಂಜ ನಿರೂಪಿಸಿ, ಅಜಿತ್ ಕುಮಾರ್ ಪಂಜ ವಂದಿಸಿದರು.

     

    Share. Facebook Twitter Pinterest LinkedIn Tumblr WhatsApp Email
    Previous Articleದ. ಕೊರಿಯಾದ ಲೇಖಕಿ ಹ್ಯಾನ್ ಕಾಂಗ್ ಇವರಿಗೆ ಸಾಹಿತ್ಯ ನೊಬೆಲ್
    Next Article ಮಂಗಳೂರಿನಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ‘ಸುವರ್ಣ ಪರ್ವ- 2’ | ಅಕ್ಟೋಬರ್ 20
    roovari

    Add Comment Cancel Reply


    Related Posts

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    ‘ಕವನ ವಾಚನ ವಿಡಿಯೋ ಸ್ಪರ್ಧೆ 2025’ | ಕೊನೆಯ ದಿನಾಂಕ ಜೂನ್ 15

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ ಪ್ರದಾನ ಹಾಗೂ ವಿಜೇತರಿಗೆ ಬಹುಮಾನ ವಿತರಣೆ | ಜೂನ್ 01

    May 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.